AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಕ್ಕೆ ವಿಷ ಹಾಕಿ ತಂದೆಯೇ ನನ್ನನ್ನು ಮುಗಿಸಲು ಹೊರಟಿದ್ದರು; ಬಿಗ್​ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ದಿವ್ಯಾ

ದಿವ್ಯಾ ತಂದೆ ಅನ್ನಕ್ಕೆ ವಿಷ ಹಾಕಿ ಊಟ ಮಾಡಿಸಿದ್ದರಂತೆ. ಕೇವಲ ದಿವ್ಯಾಗೆ ಮಾತ್ರವಲ್ಲ, ಅವರ ಅಣ್ಣನಿಗೂ ಊಟ ತಿನ್ನಿಸಿದ್ದರಂತೆ.

ಅನ್ನಕ್ಕೆ ವಿಷ ಹಾಕಿ ತಂದೆಯೇ ನನ್ನನ್ನು ಮುಗಿಸಲು ಹೊರಟಿದ್ದರು; ಬಿಗ್​ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ದಿವ್ಯಾ
ದಿವ್ಯಾ ಸುರೇಶ್
Follow us
ರಾಜೇಶ್ ದುಗ್ಗುಮನೆ
|

Updated on: Mar 25, 2021 | 8:03 PM

ಬಿಗ್​ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳು ನಗುತ್ತಾ ಕಾಲ ಕಳೆಯುತ್ತಿದ್ದಾರೆ. 14 ಸ್ಪರ್ಧಿಗಳ ನಡುವೆ ಉತ್ತಮ ಬಾಂಡಿಂಗ್​ ಬೆಳೆದಿದ್ದು, ಒಂದು ಫ್ಯಾಮಿಲಿಯಂತೆ ಆಗಿದ್ದಾರೆ. ಆದರೆ, ಎಲ್ಲರ ಹಿಂದೆಯೂ ಒಂದು ನೋವಿನ ಕಥೆ ಇದೆ. ಈ ನೋವಿನ ಕಥೆ ಒಂದೊಂದಾಗೇ ಹೊರ ಬರುತ್ತಿದೆ. ಅವರ ಕಣ್ಣೀರ ಕಥೆ ಕೇಳಿದಾಗೆಲ್ಲ, ಎಲ್ಲರೂ ನಗುವಿನ ಮುಖವಾಡ ಧರಿಸಿದ್ದಾರೆಯೇ ಎನ್ನುವ ಅನುಮಾನ ಮೂಡುತ್ತಿರುವುದಂತೂ ಸುಳ್ಳಲ್ಲ. ಬಿಗ್ ಬಾಸ್ ಸೀಸನ್​ 8ರ ಆರಂಭದಲ್ಲಿ ರಘು ಗೌಡ ಅವರು ತಮ್ಮ ಕಣ್ಣೀರ ಕಥೆ ಹೇಳಿಕೊಂಡಿದ್ದರು. ತಂದೆ-ತಾಯಿ ಕಣ್ಣೆದುರೇ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಹೇಳಿಕೊಂಡು ಅತ್ತಿದ್ದರು. ಇದಾದ ನಂತರ ಮಂಜು ಪಾವಗಡ ತಾವು ಅನುಭವಿಸಿದ ಕಷ್ಟದ ದಿನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಈಗ ದಿವ್ಯಾ ಸುರೇಶ್​ ಅವರ ಸರದಿ. ಅವರು ಹೇಳಿರುವ ಕಹಿ ಘಟನೆ ವೀಕ್ಷಕರ ಕಣ್ಣಲ್ಲಿ ನೀರು ತರಿಸುವುದಂತೂ ಗ್ಯಾರಂಟಿ.

ದಿವ್ಯಾ ತಂದೆ ಅನ್ನಕ್ಕೆ ವಿಷ ಹಾಕಿ ಊಟ ಮಾಡಿಸಿದ್ದರಂತೆ. ಕೇವಲ ದಿವ್ಯಾಗೆ ಮಾತ್ರವಲ್ಲ, ಅವರ ಅಣ್ಣನಿಗೂ ಊಟ ತಿನ್ನಿಸಿದ್ದರಂತೆ. ಈ ಭಯಾನಕ ಘಟನೆ ಬಗ್ಗೆ ಅವರು ಬಿಗ್​ ಬಾಸ್​ ಮನೆಯಲ್ಲಿ ಇಂಚಿಚೂ ವಿವರಿಸಿದ್ದಾರೆ.

ನನ್ನ ತಂದೆ ಯಾವಾಗಲೂ ಊಟ ಕಲಸಿ ಕೊಟ್ಟಿಲ್ಲ. ಆದಿನ ಅವರು ಕುಡಿದುಕೊಂಡು ಬಂದಿದ್ದರು. ಆದಾಗ್ಯೂ ಊಟವನ್ನು ಕಲಸಿಕೊಂಡು ಬಂದ್ರು. ನನಗೆ ಮತ್ತು ನನ್ನ ಅಣ್ಣನಿಗೆ ಅಪ್ಪ ಊಟ ಕೊಟ್ಟರು. ಊಟ ಮಾಡುತ್ತಿದ್ದಂತೆ ಅಪ್ಪ ವಾಂತಿ ಮಾಡಿಕೊಂಡರು. ನಂತರ ನಮ್ಮ ಅಣ್ಣ ವಾಂತಿ ಮಾಡಿಕೊಂಡರು. ನಂತರ ನಾನು. ಮೂರು ಜನನೂ ಬದುಕಿರಬಾರದು ಎಂದು ಅಪ್ಪ ಊಟಕ್ಕೆ ವಿಷ ಬೆರೆಸಿಕೊಟ್ಟಿದ್ದರು. ಅವರು ಕೂಡ ಅದೇ ಊಟ ಮಾಡಿದ್ದರು ಎಂದು ದಿವ್ಯಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಅಂದಹಾಗೆ, ಅವರು ನಂತರ ಹೇಗೆ ಉಳಿದುಕೊಂಡರು, ಮುಂದೇನಾಯ್ತು ಎನ್ನುವ ಬಗ್ಗೆ ಇಂದಿನ (ಮಾರ್ಚ್​ 25) ಸಂಚಿಕೆಯಲ್ಲಿ ಗೊತ್ತಾಗಲಿದೆ.

ಇದನ್ನೂ ಓದಿ: Bigg Boss Kannada: ‘ದಿವ್ಯಾ ಜೊತೆ ಮದುವೆ ಆಗೋಕೆ ನಮ್ಮ ಮನೆಯಲ್ಲಿ ಒಪ್ಪಿಗೆ ಸಿಗತ್ತೆ’; ಎಲ್ಲವನ್ನೂ ಒಪ್ಪಿಕೊಂಡ ಅರವಿಂದ್​!

Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ