AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​

ಟಾಸ್ಕ್​ ವೇಳೆ ದಿವ್ಯಾ ಸುರೇಶ್​ ಕಾಲಿಗೆ ಗಾಯವಾಗಿದೆ. ಅಲ್ಲದೆ, ಅವರು ಗಳಗಳನೆ ಅತ್ತಿದ್ದಾರೆ. ಅವರಿಗೆ ವೈದ್ಯರು ಬಂದು ಬ್ಯಾಂಡೇಜ್​ ಕೂಡ ಹಾಕಿದರು. ಇಷ್ಟಾದರೂ ಮಂಜು ಪಾವಗಡ ಎದ್ದೇಳಲಿಲ್ಲ.

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​
ಮಂಜು ಪಾವಗಡ - ದಿವ್ಯಾ ಸುರೇಶ್​
TV9 Web
| Updated By: ಮದನ್​ ಕುಮಾರ್​|

Updated on: Jun 26, 2021 | 7:31 AM

Share

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಮೊದಲ ಇನ್ನಿಂಗ್ಸ್​ಗಿಂತಲೂ ಈ ಬಾರಿ ಭಿನ್ನವಾಗಿ ಆಡುತ್ತಿದ್ದಾರೆ. ಮಂಜು ಕಳೆದ ಬಾರಿ ಒಂದು ಕಡೆ ಕಳೆದು ಹೋದಂತೆ ಭಾಸವಾಗುತ್ತಿತ್ತು. ಆದರೆ, ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಹಾಗೆ ಆಗುತ್ತಿಲ್ಲ. ದಿವ್ಯಾ ಬಳಿ ಮಂಜು ಎಷ್ಟಕ್ಕೆ ಬೇಕೋ ಅಷ್ಟಕ್ಕೆ ಮಾತ್ರ ಮಾತನಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಮಂಜುಗೆ ದಿವ್ಯಾ ಗುಡ್​ಬೈ​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎರಡು ತಂಡಗಳನ್ನು ಮಾಡಲಾಗಿದೆ. ಎರಡೂ ತಂಡಗಳಿಗೆ ಟಾಸ್ಕ್​ ನೀಡಲಾಗುತ್ತಿದೆ. ಈ ಟಾಸ್ಕ್​ ವೇಳೆ ದಿವ್ಯಾ ಸುರೇಶ್​ ಕಾಲಿಗೆ ಗಾಯವಾಗಿದೆ. ಅಲ್ಲದೆ, ಅವರು ಗಳಗಳನೆ ಅತ್ತಿದ್ದಾರೆ. ಅವರಿಗೆ ವೈದ್ಯರು ಬಂದು ಬ್ಯಾಂಡೇಜ್​ ಕೂಡ ಹಾಕಿದರು. ಇಷ್ಟಾದರೂ ಮಂಜು ಪಾವಗಡ ಎದ್ದೇಳಲಿಲ್ಲ. ಇದಕ್ಕೆ ಕಾರಣ ಕುರ್ಚಿ ಪಾಲಿಟಿಕ್ಸ್​ ಟಾಸ್ಕ್​.

ಹೌದು, ಬಿಗ್​ ಬಾಸ್​ ಮನೆಯಲ್ಲಿ 6 ಚೇರ್​ಗಳನ್ನು ಹಾಕಲಾಗಿದೆ. ಈ ಚೇರ್​ನಲ್ಲಿ ಎರಡು ತಂಡದ ತಲಾ ಮೂರು ಸದಸ್ಯರು ಕುಳಿತುಕೊಳ್ಳಬೇಕು. ಒಂದೊಮ್ಮೆ ಚೇರ್​​​ನಿಂದ ಎದ್ದರೆ ಔಟ್​. ಮಂಜು ಕೂಡ ಈ ಟಾಸ್ಕ್​ನಲ್ಲಿ ಕುಳಿತಿದ್ದಾರೆ. ಹೀಗಾಗಿ, ದಿವ್ಯಾಗೆ ಗಾಯವಾದಾಗಲೂ ಅವರು ಎದ್ದಿಲ್ಲ.

ಈ ವೇಳೆ ಅಳುತ್ತಲೇ ಮಂಜು ಬಳಿ ಬಂದರು ದಿವ್ಯಾ ಸುರೇಶ್​. ‘ಮಂಜು ಇಷ್ಟೇ ಅಲ್ವಾ? ಫ್ರೆಂಡ್​ಶಿಪ್​ ಬೆಲೆ ತೋರ್ಸಿದ್ಯಲ. ನಿಂಗೂ ನಿನ್ನ ಫ್ರೆಂಡ್​ಶಿಪ್​ಗೂ ಗುಡ್​ ಬೈ’ ಎಂದರು. ಇದನ್ನು ಮಂಜು ಗಂಭೀರವಾಗಿ ತೆಗೆದುಕೊಂಡಿಲ್ಲ. ಅವರು ನಗುತ್ತಲ್ಲೇ ಪರಿಸ್ಥಿತಿಯನ್ನು ನಿಭಾಯಿಸಿದರು.

‘ಬಹುಶಃ ಗಾಯ ಆದ ಕೂಡಲೇ ನಾನು ಕಾಲನ್ನು ಮುಟ್ಟಿದ್ದರೆ ನೋವು ಇಲ್ಲಿವರೆಗೆ ಮಾಯವಾಗುತ್ತಿತ್ತು’ ಎಂದು ಮಂಜು ಹೇಳಿದರು. ಆಗ ಸಿಟ್ಟಲ್ಲಿದ್ದ ದಿವ್ಯಾ, ‘ಸುಮ್ಮನಿರಪ್ಪಾ’ ಎಂದರು.

ಇದನ್ನೂ ಓದಿ: ‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ

Bigg Boss Kannada: ದಿವ್ಯಾ ಸುರೇಶ್​ ಜತೆ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿದ ಮಂಜು ಪಾವಗಡ

ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್