AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​

ಟಾಸ್ಕ್​ ವೇಳೆ ದಿವ್ಯಾ ಸುರೇಶ್​ ಕಾಲಿಗೆ ಗಾಯವಾಗಿದೆ. ಅಲ್ಲದೆ, ಅವರು ಗಳಗಳನೆ ಅತ್ತಿದ್ದಾರೆ. ಅವರಿಗೆ ವೈದ್ಯರು ಬಂದು ಬ್ಯಾಂಡೇಜ್​ ಕೂಡ ಹಾಕಿದರು. ಇಷ್ಟಾದರೂ ಮಂಜು ಪಾವಗಡ ಎದ್ದೇಳಲಿಲ್ಲ.

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​
ಮಂಜು ಪಾವಗಡ - ದಿವ್ಯಾ ಸುರೇಶ್​
TV9 Web
| Edited By: |

Updated on: Jun 26, 2021 | 7:31 AM

Share

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಮೊದಲ ಇನ್ನಿಂಗ್ಸ್​ಗಿಂತಲೂ ಈ ಬಾರಿ ಭಿನ್ನವಾಗಿ ಆಡುತ್ತಿದ್ದಾರೆ. ಮಂಜು ಕಳೆದ ಬಾರಿ ಒಂದು ಕಡೆ ಕಳೆದು ಹೋದಂತೆ ಭಾಸವಾಗುತ್ತಿತ್ತು. ಆದರೆ, ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಹಾಗೆ ಆಗುತ್ತಿಲ್ಲ. ದಿವ್ಯಾ ಬಳಿ ಮಂಜು ಎಷ್ಟಕ್ಕೆ ಬೇಕೋ ಅಷ್ಟಕ್ಕೆ ಮಾತ್ರ ಮಾತನಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಮಂಜುಗೆ ದಿವ್ಯಾ ಗುಡ್​ಬೈ​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎರಡು ತಂಡಗಳನ್ನು ಮಾಡಲಾಗಿದೆ. ಎರಡೂ ತಂಡಗಳಿಗೆ ಟಾಸ್ಕ್​ ನೀಡಲಾಗುತ್ತಿದೆ. ಈ ಟಾಸ್ಕ್​ ವೇಳೆ ದಿವ್ಯಾ ಸುರೇಶ್​ ಕಾಲಿಗೆ ಗಾಯವಾಗಿದೆ. ಅಲ್ಲದೆ, ಅವರು ಗಳಗಳನೆ ಅತ್ತಿದ್ದಾರೆ. ಅವರಿಗೆ ವೈದ್ಯರು ಬಂದು ಬ್ಯಾಂಡೇಜ್​ ಕೂಡ ಹಾಕಿದರು. ಇಷ್ಟಾದರೂ ಮಂಜು ಪಾವಗಡ ಎದ್ದೇಳಲಿಲ್ಲ. ಇದಕ್ಕೆ ಕಾರಣ ಕುರ್ಚಿ ಪಾಲಿಟಿಕ್ಸ್​ ಟಾಸ್ಕ್​.

ಹೌದು, ಬಿಗ್​ ಬಾಸ್​ ಮನೆಯಲ್ಲಿ 6 ಚೇರ್​ಗಳನ್ನು ಹಾಕಲಾಗಿದೆ. ಈ ಚೇರ್​ನಲ್ಲಿ ಎರಡು ತಂಡದ ತಲಾ ಮೂರು ಸದಸ್ಯರು ಕುಳಿತುಕೊಳ್ಳಬೇಕು. ಒಂದೊಮ್ಮೆ ಚೇರ್​​​ನಿಂದ ಎದ್ದರೆ ಔಟ್​. ಮಂಜು ಕೂಡ ಈ ಟಾಸ್ಕ್​ನಲ್ಲಿ ಕುಳಿತಿದ್ದಾರೆ. ಹೀಗಾಗಿ, ದಿವ್ಯಾಗೆ ಗಾಯವಾದಾಗಲೂ ಅವರು ಎದ್ದಿಲ್ಲ.

ಈ ವೇಳೆ ಅಳುತ್ತಲೇ ಮಂಜು ಬಳಿ ಬಂದರು ದಿವ್ಯಾ ಸುರೇಶ್​. ‘ಮಂಜು ಇಷ್ಟೇ ಅಲ್ವಾ? ಫ್ರೆಂಡ್​ಶಿಪ್​ ಬೆಲೆ ತೋರ್ಸಿದ್ಯಲ. ನಿಂಗೂ ನಿನ್ನ ಫ್ರೆಂಡ್​ಶಿಪ್​ಗೂ ಗುಡ್​ ಬೈ’ ಎಂದರು. ಇದನ್ನು ಮಂಜು ಗಂಭೀರವಾಗಿ ತೆಗೆದುಕೊಂಡಿಲ್ಲ. ಅವರು ನಗುತ್ತಲ್ಲೇ ಪರಿಸ್ಥಿತಿಯನ್ನು ನಿಭಾಯಿಸಿದರು.

‘ಬಹುಶಃ ಗಾಯ ಆದ ಕೂಡಲೇ ನಾನು ಕಾಲನ್ನು ಮುಟ್ಟಿದ್ದರೆ ನೋವು ಇಲ್ಲಿವರೆಗೆ ಮಾಯವಾಗುತ್ತಿತ್ತು’ ಎಂದು ಮಂಜು ಹೇಳಿದರು. ಆಗ ಸಿಟ್ಟಲ್ಲಿದ್ದ ದಿವ್ಯಾ, ‘ಸುಮ್ಮನಿರಪ್ಪಾ’ ಎಂದರು.

ಇದನ್ನೂ ಓದಿ: ‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ

Bigg Boss Kannada: ದಿವ್ಯಾ ಸುರೇಶ್​ ಜತೆ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿದ ಮಂಜು ಪಾವಗಡ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!