AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​

ಟಾಸ್ಕ್​ ವೇಳೆ ದಿವ್ಯಾ ಸುರೇಶ್​ ಕಾಲಿಗೆ ಗಾಯವಾಗಿದೆ. ಅಲ್ಲದೆ, ಅವರು ಗಳಗಳನೆ ಅತ್ತಿದ್ದಾರೆ. ಅವರಿಗೆ ವೈದ್ಯರು ಬಂದು ಬ್ಯಾಂಡೇಜ್​ ಕೂಡ ಹಾಕಿದರು. ಇಷ್ಟಾದರೂ ಮಂಜು ಪಾವಗಡ ಎದ್ದೇಳಲಿಲ್ಲ.

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​
ಮಂಜು ಪಾವಗಡ - ದಿವ್ಯಾ ಸುರೇಶ್​
TV9 Web
| Edited By: |

Updated on: Jun 26, 2021 | 7:31 AM

Share

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಮೊದಲ ಇನ್ನಿಂಗ್ಸ್​ಗಿಂತಲೂ ಈ ಬಾರಿ ಭಿನ್ನವಾಗಿ ಆಡುತ್ತಿದ್ದಾರೆ. ಮಂಜು ಕಳೆದ ಬಾರಿ ಒಂದು ಕಡೆ ಕಳೆದು ಹೋದಂತೆ ಭಾಸವಾಗುತ್ತಿತ್ತು. ಆದರೆ, ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಹಾಗೆ ಆಗುತ್ತಿಲ್ಲ. ದಿವ್ಯಾ ಬಳಿ ಮಂಜು ಎಷ್ಟಕ್ಕೆ ಬೇಕೋ ಅಷ್ಟಕ್ಕೆ ಮಾತ್ರ ಮಾತನಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಮಂಜುಗೆ ದಿವ್ಯಾ ಗುಡ್​ಬೈ​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎರಡು ತಂಡಗಳನ್ನು ಮಾಡಲಾಗಿದೆ. ಎರಡೂ ತಂಡಗಳಿಗೆ ಟಾಸ್ಕ್​ ನೀಡಲಾಗುತ್ತಿದೆ. ಈ ಟಾಸ್ಕ್​ ವೇಳೆ ದಿವ್ಯಾ ಸುರೇಶ್​ ಕಾಲಿಗೆ ಗಾಯವಾಗಿದೆ. ಅಲ್ಲದೆ, ಅವರು ಗಳಗಳನೆ ಅತ್ತಿದ್ದಾರೆ. ಅವರಿಗೆ ವೈದ್ಯರು ಬಂದು ಬ್ಯಾಂಡೇಜ್​ ಕೂಡ ಹಾಕಿದರು. ಇಷ್ಟಾದರೂ ಮಂಜು ಪಾವಗಡ ಎದ್ದೇಳಲಿಲ್ಲ. ಇದಕ್ಕೆ ಕಾರಣ ಕುರ್ಚಿ ಪಾಲಿಟಿಕ್ಸ್​ ಟಾಸ್ಕ್​.

ಹೌದು, ಬಿಗ್​ ಬಾಸ್​ ಮನೆಯಲ್ಲಿ 6 ಚೇರ್​ಗಳನ್ನು ಹಾಕಲಾಗಿದೆ. ಈ ಚೇರ್​ನಲ್ಲಿ ಎರಡು ತಂಡದ ತಲಾ ಮೂರು ಸದಸ್ಯರು ಕುಳಿತುಕೊಳ್ಳಬೇಕು. ಒಂದೊಮ್ಮೆ ಚೇರ್​​​ನಿಂದ ಎದ್ದರೆ ಔಟ್​. ಮಂಜು ಕೂಡ ಈ ಟಾಸ್ಕ್​ನಲ್ಲಿ ಕುಳಿತಿದ್ದಾರೆ. ಹೀಗಾಗಿ, ದಿವ್ಯಾಗೆ ಗಾಯವಾದಾಗಲೂ ಅವರು ಎದ್ದಿಲ್ಲ.

ಈ ವೇಳೆ ಅಳುತ್ತಲೇ ಮಂಜು ಬಳಿ ಬಂದರು ದಿವ್ಯಾ ಸುರೇಶ್​. ‘ಮಂಜು ಇಷ್ಟೇ ಅಲ್ವಾ? ಫ್ರೆಂಡ್​ಶಿಪ್​ ಬೆಲೆ ತೋರ್ಸಿದ್ಯಲ. ನಿಂಗೂ ನಿನ್ನ ಫ್ರೆಂಡ್​ಶಿಪ್​ಗೂ ಗುಡ್​ ಬೈ’ ಎಂದರು. ಇದನ್ನು ಮಂಜು ಗಂಭೀರವಾಗಿ ತೆಗೆದುಕೊಂಡಿಲ್ಲ. ಅವರು ನಗುತ್ತಲ್ಲೇ ಪರಿಸ್ಥಿತಿಯನ್ನು ನಿಭಾಯಿಸಿದರು.

‘ಬಹುಶಃ ಗಾಯ ಆದ ಕೂಡಲೇ ನಾನು ಕಾಲನ್ನು ಮುಟ್ಟಿದ್ದರೆ ನೋವು ಇಲ್ಲಿವರೆಗೆ ಮಾಯವಾಗುತ್ತಿತ್ತು’ ಎಂದು ಮಂಜು ಹೇಳಿದರು. ಆಗ ಸಿಟ್ಟಲ್ಲಿದ್ದ ದಿವ್ಯಾ, ‘ಸುಮ್ಮನಿರಪ್ಪಾ’ ಎಂದರು.

ಇದನ್ನೂ ಓದಿ: ‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ

Bigg Boss Kannada: ದಿವ್ಯಾ ಸುರೇಶ್​ ಜತೆ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿದ ಮಂಜು ಪಾವಗಡ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?