AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​

ಟಾಸ್ಕ್​ ವೇಳೆ ದಿವ್ಯಾ ಸುರೇಶ್​ ಕಾಲಿಗೆ ಗಾಯವಾಗಿದೆ. ಅಲ್ಲದೆ, ಅವರು ಗಳಗಳನೆ ಅತ್ತಿದ್ದಾರೆ. ಅವರಿಗೆ ವೈದ್ಯರು ಬಂದು ಬ್ಯಾಂಡೇಜ್​ ಕೂಡ ಹಾಕಿದರು. ಇಷ್ಟಾದರೂ ಮಂಜು ಪಾವಗಡ ಎದ್ದೇಳಲಿಲ್ಲ.

ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​
ಮಂಜು ಪಾವಗಡ - ದಿವ್ಯಾ ಸುರೇಶ್​
TV9 Web
| Updated By: ಮದನ್​ ಕುಮಾರ್​|

Updated on: Jun 26, 2021 | 7:31 AM

Share

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಮೊದಲ ಇನ್ನಿಂಗ್ಸ್​ಗಿಂತಲೂ ಈ ಬಾರಿ ಭಿನ್ನವಾಗಿ ಆಡುತ್ತಿದ್ದಾರೆ. ಮಂಜು ಕಳೆದ ಬಾರಿ ಒಂದು ಕಡೆ ಕಳೆದು ಹೋದಂತೆ ಭಾಸವಾಗುತ್ತಿತ್ತು. ಆದರೆ, ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಹಾಗೆ ಆಗುತ್ತಿಲ್ಲ. ದಿವ್ಯಾ ಬಳಿ ಮಂಜು ಎಷ್ಟಕ್ಕೆ ಬೇಕೋ ಅಷ್ಟಕ್ಕೆ ಮಾತ್ರ ಮಾತನಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಮಂಜುಗೆ ದಿವ್ಯಾ ಗುಡ್​ಬೈ​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎರಡು ತಂಡಗಳನ್ನು ಮಾಡಲಾಗಿದೆ. ಎರಡೂ ತಂಡಗಳಿಗೆ ಟಾಸ್ಕ್​ ನೀಡಲಾಗುತ್ತಿದೆ. ಈ ಟಾಸ್ಕ್​ ವೇಳೆ ದಿವ್ಯಾ ಸುರೇಶ್​ ಕಾಲಿಗೆ ಗಾಯವಾಗಿದೆ. ಅಲ್ಲದೆ, ಅವರು ಗಳಗಳನೆ ಅತ್ತಿದ್ದಾರೆ. ಅವರಿಗೆ ವೈದ್ಯರು ಬಂದು ಬ್ಯಾಂಡೇಜ್​ ಕೂಡ ಹಾಕಿದರು. ಇಷ್ಟಾದರೂ ಮಂಜು ಪಾವಗಡ ಎದ್ದೇಳಲಿಲ್ಲ. ಇದಕ್ಕೆ ಕಾರಣ ಕುರ್ಚಿ ಪಾಲಿಟಿಕ್ಸ್​ ಟಾಸ್ಕ್​.

ಹೌದು, ಬಿಗ್​ ಬಾಸ್​ ಮನೆಯಲ್ಲಿ 6 ಚೇರ್​ಗಳನ್ನು ಹಾಕಲಾಗಿದೆ. ಈ ಚೇರ್​ನಲ್ಲಿ ಎರಡು ತಂಡದ ತಲಾ ಮೂರು ಸದಸ್ಯರು ಕುಳಿತುಕೊಳ್ಳಬೇಕು. ಒಂದೊಮ್ಮೆ ಚೇರ್​​​ನಿಂದ ಎದ್ದರೆ ಔಟ್​. ಮಂಜು ಕೂಡ ಈ ಟಾಸ್ಕ್​ನಲ್ಲಿ ಕುಳಿತಿದ್ದಾರೆ. ಹೀಗಾಗಿ, ದಿವ್ಯಾಗೆ ಗಾಯವಾದಾಗಲೂ ಅವರು ಎದ್ದಿಲ್ಲ.

ಈ ವೇಳೆ ಅಳುತ್ತಲೇ ಮಂಜು ಬಳಿ ಬಂದರು ದಿವ್ಯಾ ಸುರೇಶ್​. ‘ಮಂಜು ಇಷ್ಟೇ ಅಲ್ವಾ? ಫ್ರೆಂಡ್​ಶಿಪ್​ ಬೆಲೆ ತೋರ್ಸಿದ್ಯಲ. ನಿಂಗೂ ನಿನ್ನ ಫ್ರೆಂಡ್​ಶಿಪ್​ಗೂ ಗುಡ್​ ಬೈ’ ಎಂದರು. ಇದನ್ನು ಮಂಜು ಗಂಭೀರವಾಗಿ ತೆಗೆದುಕೊಂಡಿಲ್ಲ. ಅವರು ನಗುತ್ತಲ್ಲೇ ಪರಿಸ್ಥಿತಿಯನ್ನು ನಿಭಾಯಿಸಿದರು.

‘ಬಹುಶಃ ಗಾಯ ಆದ ಕೂಡಲೇ ನಾನು ಕಾಲನ್ನು ಮುಟ್ಟಿದ್ದರೆ ನೋವು ಇಲ್ಲಿವರೆಗೆ ಮಾಯವಾಗುತ್ತಿತ್ತು’ ಎಂದು ಮಂಜು ಹೇಳಿದರು. ಆಗ ಸಿಟ್ಟಲ್ಲಿದ್ದ ದಿವ್ಯಾ, ‘ಸುಮ್ಮನಿರಪ್ಪಾ’ ಎಂದರು.

ಇದನ್ನೂ ಓದಿ: ‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ

Bigg Boss Kannada: ದಿವ್ಯಾ ಸುರೇಶ್​ ಜತೆ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿದ ಮಂಜು ಪಾವಗಡ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ