AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್​ಗೇಕೆ ಇಷ್ಟೊಂದು ಹೊಟ್ಟೆ ಉರಿ? ದಿವ್ಯಾ ಉರುಡುಗ-ಅರವಿಂದ್ ಪ್ರೀತಿಗೆ ಇವರೇ ವಿಲನ್​!

ಬಿಗ್​ ಬಾಸ್ ಮನೆಯಲ್ಲಿ ದಿವ್ಯಾ ಉರುಡುಗ-ಅರವಿಂದ್ ನಡುವೆ ಪ್ರೀತಿ ಮೊಳೆತಿದೆ ಎನ್ನುವ ವಿಚಾರ ಚರ್ಚೆಯಲ್ಲಿದೆ. ಇದನ್ನು ಇಬ್ಬರೂ ನೇರವಾಗಿ ಒಪ್ಪಿಕೊಂಡಿಲ್ಲ.

ದಿವ್ಯಾ ಸುರೇಶ್​ಗೇಕೆ ಇಷ್ಟೊಂದು ಹೊಟ್ಟೆ ಉರಿ? ದಿವ್ಯಾ ಉರುಡುಗ-ಅರವಿಂದ್ ಪ್ರೀತಿಗೆ ಇವರೇ ವಿಲನ್​!
ದಿವ್ಯಾ ಸುರೇಶ್​- ದಿವ್ಯಾ ಉರುಡುಗ-ಅರವಿಂದ್
ರಾಜೇಶ್ ದುಗ್ಗುಮನೆ
| Edited By: |

Updated on: Mar 25, 2021 | 7:14 AM

Share

ದಿವ್ಯಾ ಸುರೇಶ್​ ಬಂದ ಆರಂಭದಿಂದಲೂ ಮಂಜು ಪಾವಗಡ ಮೇಲೆ ಆಸಕ್ತಿ ತೋರುತ್ತಿದ್ದಾರೆ. ಇದು ಮೂರು ವಾರ ಯಶಸ್ವಿಯಾಗಿ ಮುಂದುವರಿದಿತ್ತು. ಆದರೆ, ನಾಲ್ಕನೇ ವಾರ ಇದು ಸ್ವಲ್ಪ ಬದಲಾದಂತಿದೆ. ದಿವ್ಯಾ ಮಂಜು ಮೇಲೆ ಆಸಕ್ತಿ ತೋರಿದ್ದು ಪ್ರಚಾರಕ್ಕೋ ಎನ್ನುವ ಅನುಮಾನ ಕಾಡಿತ್ತು. ಈಗ ಇದು ಪ್ರೇಕ್ಷಕರಿಗೆ ನಿಜ ಅನಿಸೋಕೆ ಆರಂಭವಾಗಿದೆ. ಏಕೆಂದರೆ, ದಿವ್ಯಾ ಸುರೇಶ್​ ನಿಧಾನವಾಗಿ ಮಂಜು ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿದ್ದು, ಅರವಿಂದ್ ಕೆಪಿ ಮೇಲೆ ಹೆಚ್ಚು ಇಂಟರೆಸ್ಟ್​ ತೋರುತ್ತಿದ್ದಾರೆ. ಬಿಗ್​ ಬಾಸ್ ಮನೆಯಲ್ಲಿ ದಿವ್ಯಾ ಉರುಡುಗ-ಅರವಿಂದ್ ನಡುವೆ ಪ್ರೀತಿ ಮೊಳೆತಿದೆ ಎನ್ನುವ ವಿಚಾರ ಚರ್ಚೆಯಲ್ಲಿದೆ. ಇದನ್ನು ಇಬ್ಬರೂ ನೇರವಾಗಿ ಒಪ್ಪಿಕೊಂಡಿಲ್ಲ. ಆದರೆ, ಒಬ್ಬರ ಮೇಲೆ ಒಬ್ಬರು ಆಸಕ್ತಿ ಹೊಂದಿದ್ದೇವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಈಗ ಇವರಿಬ್ಬರ ಪ್ರೀತಿಗೆ ದಿವ್ಯಾ ಸುರೇಶ್​ ವಿಲನ್​ ಆಗುತ್ತಾರಾ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಕೇಳಿಕೊಳ್ಳುತ್ತಿದ್ದಾರೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕ್ಲೋಸ್​ ಆಗುತ್ತಿರುವುದು ದಿವ್ಯಾ ಸುರೇಶ್​ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಅನಿಸುತ್ತಿದೆ. ಹೀಗಾಗಿ ದಿವ್ಯಾ ಉರುಡುಗ- ಅರವಿಂದ್ ಒಂದಾಗಿದ್ದಾಗೆಲ್ಲ ಇವರು ಮಧ್ಯ ಬರುತ್ತಿದ್ದಾರೆ. ಇದು ಮನೆಯವರ ಗಮನಕ್ಕೂ ಬಂದಿದೆ.

ಇನ್ನು, ಅರವಿಂದ್​ ಮೈಮೇಲೆ ದಿವ್ಯಾ ಸುರೇಶ್​ ಬಂದು ಬಂದು ಬೀಳುತ್ತಿದ್ದಾರೆ. ಇದು ಅರವಿಂದ್​ಗೆ​ ಇಷ್ಟವಾಗುತ್ತಿಲ್ಲ. ಇದೇ ಕಾರಣಕ್ಕೆ ಅವರು ದೂರ ದೂರ ಹೋಗುತ್ತಿದ್ದಾರೆ. ಬುಧವಾರ (ಮಾರ್ಚ್​ 24) ಹಾಗೆಯೇ ಆಗಿದೆ. ದಿವ್ಯಾ ಅರವಿಂದ್​ ಅವರ ಮೈಗೆ ಒರಗಿಕೊಂಡಿದ್ದರು. ಆಗ ಅವರಿಬ್ಬರ ಮಧ್ಯೆ ದಿವ್ಯಾ ಉರುಡುಗ ಕೂಡ ಬಂದರು.

ಸದ್ಯ ವೀಕ್ಷಕರು ಈ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ದಿವ್ಯಾ ಸುರೇಶ್​ ಫೇಮಸ್​ ಆಗಲು ಈ ರೀತಿ ಮಾಡುತ್ತಿದ್ದಾರಾ? ಎಲ್ಲರ ಗಮನ ನಮ್ಮ ಮೇಲೆ ಇರಬೇಕು ಎಂದು ಹೀಗೆ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

ಇದನ್ನೂ ಓದಿ: BBK8: ನಿಧಿ-ಶುಭಾ ಬಿಗ್​ ಬಾಸ್​ ಮನೆಯ ಗಾಸಿಪ್​ ರಾಣಿಯರು! ಮಲಗುವ ಮುನ್ನ ಬರೀ ಇಂಥ ಮಾತುಗಳೇ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ