AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್​ಗೇಕೆ ಇಷ್ಟೊಂದು ಹೊಟ್ಟೆ ಉರಿ? ದಿವ್ಯಾ ಉರುಡುಗ-ಅರವಿಂದ್ ಪ್ರೀತಿಗೆ ಇವರೇ ವಿಲನ್​!

ಬಿಗ್​ ಬಾಸ್ ಮನೆಯಲ್ಲಿ ದಿವ್ಯಾ ಉರುಡುಗ-ಅರವಿಂದ್ ನಡುವೆ ಪ್ರೀತಿ ಮೊಳೆತಿದೆ ಎನ್ನುವ ವಿಚಾರ ಚರ್ಚೆಯಲ್ಲಿದೆ. ಇದನ್ನು ಇಬ್ಬರೂ ನೇರವಾಗಿ ಒಪ್ಪಿಕೊಂಡಿಲ್ಲ.

ದಿವ್ಯಾ ಸುರೇಶ್​ಗೇಕೆ ಇಷ್ಟೊಂದು ಹೊಟ್ಟೆ ಉರಿ? ದಿವ್ಯಾ ಉರುಡುಗ-ಅರವಿಂದ್ ಪ್ರೀತಿಗೆ ಇವರೇ ವಿಲನ್​!
ದಿವ್ಯಾ ಸುರೇಶ್​- ದಿವ್ಯಾ ಉರುಡುಗ-ಅರವಿಂದ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 25, 2021 | 7:14 AM

ದಿವ್ಯಾ ಸುರೇಶ್​ ಬಂದ ಆರಂಭದಿಂದಲೂ ಮಂಜು ಪಾವಗಡ ಮೇಲೆ ಆಸಕ್ತಿ ತೋರುತ್ತಿದ್ದಾರೆ. ಇದು ಮೂರು ವಾರ ಯಶಸ್ವಿಯಾಗಿ ಮುಂದುವರಿದಿತ್ತು. ಆದರೆ, ನಾಲ್ಕನೇ ವಾರ ಇದು ಸ್ವಲ್ಪ ಬದಲಾದಂತಿದೆ. ದಿವ್ಯಾ ಮಂಜು ಮೇಲೆ ಆಸಕ್ತಿ ತೋರಿದ್ದು ಪ್ರಚಾರಕ್ಕೋ ಎನ್ನುವ ಅನುಮಾನ ಕಾಡಿತ್ತು. ಈಗ ಇದು ಪ್ರೇಕ್ಷಕರಿಗೆ ನಿಜ ಅನಿಸೋಕೆ ಆರಂಭವಾಗಿದೆ. ಏಕೆಂದರೆ, ದಿವ್ಯಾ ಸುರೇಶ್​ ನಿಧಾನವಾಗಿ ಮಂಜು ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿದ್ದು, ಅರವಿಂದ್ ಕೆಪಿ ಮೇಲೆ ಹೆಚ್ಚು ಇಂಟರೆಸ್ಟ್​ ತೋರುತ್ತಿದ್ದಾರೆ. ಬಿಗ್​ ಬಾಸ್ ಮನೆಯಲ್ಲಿ ದಿವ್ಯಾ ಉರುಡುಗ-ಅರವಿಂದ್ ನಡುವೆ ಪ್ರೀತಿ ಮೊಳೆತಿದೆ ಎನ್ನುವ ವಿಚಾರ ಚರ್ಚೆಯಲ್ಲಿದೆ. ಇದನ್ನು ಇಬ್ಬರೂ ನೇರವಾಗಿ ಒಪ್ಪಿಕೊಂಡಿಲ್ಲ. ಆದರೆ, ಒಬ್ಬರ ಮೇಲೆ ಒಬ್ಬರು ಆಸಕ್ತಿ ಹೊಂದಿದ್ದೇವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಈಗ ಇವರಿಬ್ಬರ ಪ್ರೀತಿಗೆ ದಿವ್ಯಾ ಸುರೇಶ್​ ವಿಲನ್​ ಆಗುತ್ತಾರಾ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಕೇಳಿಕೊಳ್ಳುತ್ತಿದ್ದಾರೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕ್ಲೋಸ್​ ಆಗುತ್ತಿರುವುದು ದಿವ್ಯಾ ಸುರೇಶ್​ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಅನಿಸುತ್ತಿದೆ. ಹೀಗಾಗಿ ದಿವ್ಯಾ ಉರುಡುಗ- ಅರವಿಂದ್ ಒಂದಾಗಿದ್ದಾಗೆಲ್ಲ ಇವರು ಮಧ್ಯ ಬರುತ್ತಿದ್ದಾರೆ. ಇದು ಮನೆಯವರ ಗಮನಕ್ಕೂ ಬಂದಿದೆ.

ಇನ್ನು, ಅರವಿಂದ್​ ಮೈಮೇಲೆ ದಿವ್ಯಾ ಸುರೇಶ್​ ಬಂದು ಬಂದು ಬೀಳುತ್ತಿದ್ದಾರೆ. ಇದು ಅರವಿಂದ್​ಗೆ​ ಇಷ್ಟವಾಗುತ್ತಿಲ್ಲ. ಇದೇ ಕಾರಣಕ್ಕೆ ಅವರು ದೂರ ದೂರ ಹೋಗುತ್ತಿದ್ದಾರೆ. ಬುಧವಾರ (ಮಾರ್ಚ್​ 24) ಹಾಗೆಯೇ ಆಗಿದೆ. ದಿವ್ಯಾ ಅರವಿಂದ್​ ಅವರ ಮೈಗೆ ಒರಗಿಕೊಂಡಿದ್ದರು. ಆಗ ಅವರಿಬ್ಬರ ಮಧ್ಯೆ ದಿವ್ಯಾ ಉರುಡುಗ ಕೂಡ ಬಂದರು.

ಸದ್ಯ ವೀಕ್ಷಕರು ಈ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ದಿವ್ಯಾ ಸುರೇಶ್​ ಫೇಮಸ್​ ಆಗಲು ಈ ರೀತಿ ಮಾಡುತ್ತಿದ್ದಾರಾ? ಎಲ್ಲರ ಗಮನ ನಮ್ಮ ಮೇಲೆ ಇರಬೇಕು ಎಂದು ಹೀಗೆ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

ಇದನ್ನೂ ಓದಿ: BBK8: ನಿಧಿ-ಶುಭಾ ಬಿಗ್​ ಬಾಸ್​ ಮನೆಯ ಗಾಸಿಪ್​ ರಾಣಿಯರು! ಮಲಗುವ ಮುನ್ನ ಬರೀ ಇಂಥ ಮಾತುಗಳೇ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ