AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಅರವಿಂದ್​ ಪ್ರಪೋಸಲ್​​ಗೆ ಓಕೆ ಎಂದ ದಿವ್ಯಾ ಉರುಡುಗ!

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡಗ ಹಾಗೂ ಅರವಿಂದ್​ ಕೆಪಿ ಮದುವೆ ವಿಚಾರ ಚರ್ಚೆ ಮಾಡಿದ್ದರು. ಇದಾದ ಬೆನ್ನಲ್ಲೇ ಅರವಿಂದ್​ ಇಟ್ಟ ಪ್ರಪೋಸ್​ಗೆ ದಿವ್ಯಾ ಉರುಡುಗ ಓಕೆ ಎಂದಿದ್ದಾರೆ!

Bigg Boss Kannada 8: ಅರವಿಂದ್​ ಪ್ರಪೋಸಲ್​​ಗೆ ಓಕೆ ಎಂದ ದಿವ್ಯಾ ಉರುಡುಗ!
ಅರವಿಂದ್​-ದಿವ್ಯಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 16, 2021 | 12:52 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್​ ಕೆಪಿ ಮದುವೆ ವಿಚಾರ ಚರ್ಚೆ ಮಾಡಿದ್ದರು. ಈ ವಿಚಾರವನ್ನು​ ವೀಕೆಂಡ್​ನಲ್ಲಿ ಸುದೀಪ್ ಕೂಡ ಮಾತನಾಡಿದ್ದರು. ಅಷ್ಟೇ ಅಲ್ಲ, ಅರವಿಂದ್​ಗೆ ಆಲ್​ ದಿ ಬೆಸ್ಟ್​ ಕೂಡ ಹೇಳಿದ್ದರು. ಇದಾದ ಬೆನ್ನಲ್ಲೇ ಅರವಿಂದ್​ ಇಟ್ಟ ಪ್ರಪೋಸ್​ಗೆ ದಿವ್ಯಾ ಉರುಡುಗ ಓಕೆ ಎಂದಿದ್ದಾರೆ! ಹಾಗಂತ ಇದು ಮದುವೆ ಪ್ರಪೋಸಲ್​ ಅಲ್ಲ. ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಮಾಡಲು ಪ್ರತಿ ಪುರುಷ ಸ್ಪರ್ಧಿ ಒಂದು ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಹೀಗೆ ಆಯ್ಕೆ ಮಾಡಿಕೊಳ್ಳುವಾಗ ಇಟ್ಟ ಬೇಡಿಕೆಯಲ್ಲಿ ಅರವಿಂದ್​ಗೆ ದಿವ್ಯಾ ಒಕೆ ಎಂದಿದ್ದಾರೆ.

ಮೊದಲು ಪ್ರಶಾಂತ್​ ಸಂಬರಗಿ ದಿವ್ಯಾ ಉರುಡುಗ ಬಳಿ ಜೋಡಿ ಆಗ್ತೀರಾ ಎಂದು ಕೇಳಿದರು. ಇದಕ್ಕೆ ದಿವ್ಯಾ ನೋ ಎಂದರು. ನಂತರ ಲ್ಯಾಗ್​ ಮಂಜು, ಬ್ರೋ ಗೌಡ ಕೂಡ ಪ್ರಯತ್ನ ಮಾಡಿದರು. ಇವರಿಗೂ ನೋ ಎನ್ನುವ ಉತ್ತರವೇ ಬಂತು. ಕೊನೆಗೆ ಅರವಿಂದ್​ ಜೋಡಿ ಆಗೋ ಬೇಡಿಕೆ ಇಟ್ಟಾಗ ಓಕೆ ಎಂದರು ದಿವ್ಯಾ. ಅವರು ಓಕೆ ಎಂದು ಹೇಳುತ್ತಿದ್ದಂತೆಯೇ ಮನೆಯ ಸದಸ್ಯರು ಕೂಗಿದರು. ಇದು ದಿವ್ಯಾಗೆ ಒಂದು ಕ್ಷಣ ಮುಜುಗರ ತಂದಿತ್ತು. ಆದರೂ ಅದನ್ನು ಹಿಡಿದಿಟ್ಟುಕೊಂಡರು. ನಂತರ ಗೀತಾ, ದಿವ್ಯಾ-ಅರವಿಂದ್ ಜೋಡಿ ಸಖತ್​ ಆಗಿದೆ. ಈ ಜೋಡಿ ನೋಡೋಕೆ ಕಣ್ಣು ಸಾಕಾಗಲ್ಲ ಎಂದರು. ಆಗ ದಿವ್ಯಾಗೆ ಮತ್ತಷ್ಟು ಮುಜುಗರವಾಯ್ತು.

ಈ ವಾರ ನಾಮಿನೇಟ್​ ಆದ ಸದಸ್ಯರು:

ಕನ್ನಡ ಬಿಗ್​ ಬಾಸ್​ ಎಂಟನೇ ಸೀಸನ್​ನ ಮೊದಲೇ ವಾರದಲ್ಲಿ ಧನುಶ್ರೀ ,ಎರಡನೇ ವಾರದಲ್ಲಿ ನಿರ್ಮಲಾ ಎಲಿಮಿನೇಟ್​​ ಆಗಿ ಮನೆಯಿಂದ ಹೊರಹೋಗಿದ್ದಾರೆ. ಈಗ ಮೂರನೇ ವಾರದ ಎಲಿಮಿನೇಷನ್​​ ಪ್ರಕ್ರಿಯೆ ಆರಂಭವಾಗಿದೆ. ಈ ವಾರ 9 ಸದಸ್ಯರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದಾರೆ. ಅವರ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

ಶಮಂತ್​, ನಿಧಿ ಸುಬ್ಬಯ್ಯ, ಗೀತಾ, ರಘು, ಅರವಿಂದ್, ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ನಾಮಿನೇಟ್​ ಆದರು. ಶಂಕರ್​ ಅಶ್ವತ್ಥ್​ ನಾಮಿನೇಟ್​ ಆಗಿದ್ದರೂ ಮನೆಯ ಕ್ಯಾಪ್ಟನ್​ ಸೇವ್​ ಮಾಡಿದ್ದಾರೆ. ಶಮಂತ್​ ಹಾಗೂ ನಿಧಿಗೆ ಅತಿ ಹೆಚ್ಚು ಮತ ಬಿದ್ದಿತ್ತು. ಶಮಂತ್​ ಎರಡು ವಾರ ಸರಿಯಾಗಿ ಆಟವಾಡಿಲ್ಲ. ಕ್ಯಾಪ್ಟನ್ಸಿಯಿಂದ ಅವರು ಸೇವ್​ ಆಗಿದ್ದಾರೆ. 20ರ ಹುಡುಗನ ತರ ಆಡ್ತಾರೆ. ಉದ್ದೇಶ ಮರೆತಿದಾರೆ ಎಂದು ಮನೆ ಸದಸ್ಯರು ದೂರಿದರು. ನಿಧಿ ಮನಸ್ಸಿನಿಂದ ಆಡಿಲ್ಲ. ನಿಧಿ ಎಲ್ಲರನ್ನೂ ಇಗ್ನೋರ್​ ಮಾಡ್ತಾ ಇದಾರೆ ಎನ್ನುವ ದೂರನ್ನು ಹೇಳಿದರು.

ಇದನ್ನೂ ಓದಿ: ಶಮಂತ್ ಅವರನ್ನು ಮನೆಯಿಂದ ಹೊರಗೆ ಕಳುಹಿಸಿ; ಬಿಗ್​ ಬಾಸ್​ ಎದುರು ಸ್ಪರ್ಧಿಗಳ ಹೊಸ ಬೇಡಿಕೆ

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ