AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಗರ್ಲ್​ಫ್ರೆಂಡ್​ಮೇಲೆ ಕೈ ಹಾಕಿದ್ದಕ್ಕೆ ಸಿಟ್ಟು ಬಂತಾ?; ಉರಿಯುವ ಬೆಂಕಿಗೆ ತುಪ್ಪ ಸುರಿದ ಪ್ರಶಾಂತ್ ಸಂಬರಗಿ ​

ದಿವ್ಯಾ ಉರುಡುಗ-ಅರವಿಂದ್ ಕೆ.ಪಿ. ನಡುವೆ ಆಪ್ತತೆ ಬೆಳೆದ ನಂತರದಲ್ಲಿ ಪ್ರಶಾಂತ್​ ಸಂಬರಗಿ ಅಷ್ಟಾಗಿ ದಿವ್ಯಾ ಜತೆ ಬೆರೆಯುತ್ತಿಲ್ಲ. ಅವರಿಬ್ಬರ ನಡುವೆ ಪ್ರೀತಿ-ಪ್ರೇಮವಿದೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ.

ನಿನ್ನ ಗರ್ಲ್​ಫ್ರೆಂಡ್​ಮೇಲೆ ಕೈ ಹಾಕಿದ್ದಕ್ಕೆ ಸಿಟ್ಟು ಬಂತಾ?; ಉರಿಯುವ ಬೆಂಕಿಗೆ ತುಪ್ಪ ಸುರಿದ ಪ್ರಶಾಂತ್ ಸಂಬರಗಿ ​
ರಾಜೇಶ್ ದುಗ್ಗುಮನೆ
| Edited By: |

Updated on: Apr 01, 2021 | 6:05 PM

Share

ಪ್ರಶಾಂತ್​ ಸಂಬರಗಿ ಬಿಗ್​ ಬಾಸ್​ ಮನೆಯಲ್ಲಿ ಒಬ್ಬರಾದ ಮೇಲೆ ಒಬ್ಬರ ಬಳಿ ದ್ವೇಷ ಕಟ್ಟಿಕೊಳ್ಳುತ್ತಿದ್ದಾರೆ. ಬಹುತೇಕ ಸ್ಪರ್ಧಿಗಳು ಪ್ರಶಾಂತ್​ ಎದುರು ನಗು ನಗುತ್ತಾ ಮಾತನಾಡಿದರೂ ಹಿಂದಿನಿಂದ ಅವರ ವಿರುದ್ಧ ಗಾಸಿಪ್​ ಮಾಡುತ್ತಿದ್ದಾರೆ. ಇದು ಪ್ರಶಾಂತ್​ ಸಂಬರಗಿಗೆ ಗೊತ್ತಿಲ್ಲ ಏಂದೇನೂ ಅಲ್ಲ. ಗೊತ್ತಿದ್ದರೂ, ಅವರು ಏನೂ ತಿಳಿದೇ ಇಲ್ಲ ಎನ್ನುವಂತೆ ಇದ್ದಾರೆ. ಈ ಮಧ್ಯೆ, ಕೆಲವರು ಪ್ರಶಾಂತ್​ ವಿರುದ್ಧ ನೇರವಾಗಿಯೇ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಈಗ ಅಂತಹುದೇ ಘಟನೆ ಬಿಗ್​ ಬಾಸ್​ ಮನೆಯಲ್ಲಿ ನಡೆದಿದೆ. ಆರಂಭದಲ್ಲಿ ಪ್ರಶಾಂತ್ ಸಂಬರಗಿ ಆಪ್ತೆ ಎನಿಸಿಕೊಂಡಿದ್ದ ದಿವ್ಯಾ ಉರುಡುಗು ತಿರುಗಿ ಬಿದ್ದಿದ್ದಾರೆ. ಪ್ರಶಾಂತ್​ ಸಂಬರಗಿ ಆರಂಭದ ದಿನಗಳಲ್ಲಿ ದಿವ್ಯಾ ಉರುಡುಗ ಜತೆ ಹೆಚ್ಚು ಆಪ್ತವಾಗಿರುತ್ತಿದ್ದರು. ಇದನ್ನು ನೋಡಿದ ಪ್ರೇಕ್ಷಕರು ಗಾಸಿಪ್​ ಆರಂಭಿಸಿದ್ದರು. ಅವರ ಸಂಬಂಧ ಎಂತಹುದು ಎಂದು ಅನೇಕರು ಕೇಳಿಕೊಂಡಿದ್ದರು. ಆದರೆ, ಅಚ್ಚರಿ ಎಂಬಂತೆ ದಿವ್ಯಾ ಉರುಡುಗ ನನ್ನ ತಂಗಿ ಇದ್ದಂತೆ ಎಂದು ಘೋಷಿಸಿದ್ದರು ಪ್ರಶಾಂತ್​.

ದಿವ್ಯಾ ಉರುಡುಗ-ಅರವಿಂದ್ ಕೆ.ಪಿ. ನಡುವೆ ಆಪ್ತತೆ ಬೆಳೆದ ನಂತರದಲ್ಲಿ ಪ್ರಶಾಂತ್​ ಸಂಬರಗಿ ಅಷ್ಟಾಗಿ ದಿವ್ಯಾ ಜತೆ ಬೆರೆಯುತ್ತಿಲ್ಲ. ಅವರಿಬ್ಬರ ನಡುವೆ ಪ್ರೀತಿ-ಪ್ರೇಮವಿದೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಈಗ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ನೇರವಾಗಿ ಪ್ರಶಾಂತ್​ ಮೇಲೆ ವಾಗ್ದಾಳಿ ಮಾಡಿದ್ದಾರೆ.

ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಒಂದನ್ನು ಬಿಟ್ಟಿದೆ. ಈ ಪ್ರೋಮೋದಲ್ಲಿ ಅರವಿಂದ್​, ಪ್ರಶಾಂತ್​ ಮೇಲೆ ಕೂಗಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಪ್ರಶಾಂತ್​, ನಿನ್ನ ಗರ್ಲ್​ಫ್ರೆಂಡ್​ ಮೇಲೆ ಕೈ ಹಾಕಿದ್ದಕ್ಕೆ ಬೇಜಾರು ಆಗಿರೋದಾ ಎಂದು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ದಿವ್ಯಾ ಸಿಟ್ಟಾಗಿದ್ದಾರೆ. ಏಯ್​ ನೆಟ್ಟಗೆ ಮಾತನಾಡಿದ್ರೆ ಮಾತನಾಡುತ್ತೇನೆ. ನೀವು ಅರವಿಂದ್​ ಬಳಿ ನನ್ನ ಹೆಸರನ್ನು ಹೇಗೆ ಹೇಳಿದ್ರಿ? ನಾನು ಅರವಿಂದ್​ ಗರ್ಲ್​ಫ್ರೆಂಡ್​ ಆಗಿರಬಹುದು, ತಂಗಿ ಆಗಿರಬಹುದು ಅಥವಾ ಹೆಂಡತೀನೂ ಆಗಿರಬಹುದು. ನೀವು ನನ್ನ ಹೆಸರನ್ನು ಮಧ್ಯೆ ತರುವ ಹಾಗೇ ಇಲ್ಲ ಎಂದು ಪ್ರಶಾಂತ್​ಗೆ ಹೇಳಿದರು. ನಾನು ಹೇಳಿದ್ದರಲ್ಲಿ ತಪ್ಪೇನು ಇಲ್ಲ ಎನ್ನುವಂತೆ ಪ್ರಶಾಂತ್​ ಮಾತನಾಡಿದ್ದಾರೆ. ಆಗ ದಿವ್ಯಾ ಸುದೀಪ್​ ಕೊಡುವ ವಿಶೇಷ ಚಪ್ಪಾಳೆ ರೀತಿಯಲ್ಲೇ ಪ್ರಶಾಂತ್​ ಸಂಬರಗಿಗೆ ವಿಶೇಷವಾಗಿ ಚಪ್ಪಾಳೆ ಹೊಡೆದಿದ್ದಾರೆ.

ಇದನ್ನೂ ಓದಿ:Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು? 

(BBK8 Divya Uruduga and Prashanth Sambargi Talk Fight goes viral In Social Media )

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ