AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಗರ್ಲ್​ಫ್ರೆಂಡ್​ಮೇಲೆ ಕೈ ಹಾಕಿದ್ದಕ್ಕೆ ಸಿಟ್ಟು ಬಂತಾ?; ಉರಿಯುವ ಬೆಂಕಿಗೆ ತುಪ್ಪ ಸುರಿದ ಪ್ರಶಾಂತ್ ಸಂಬರಗಿ ​

ದಿವ್ಯಾ ಉರುಡುಗ-ಅರವಿಂದ್ ಕೆ.ಪಿ. ನಡುವೆ ಆಪ್ತತೆ ಬೆಳೆದ ನಂತರದಲ್ಲಿ ಪ್ರಶಾಂತ್​ ಸಂಬರಗಿ ಅಷ್ಟಾಗಿ ದಿವ್ಯಾ ಜತೆ ಬೆರೆಯುತ್ತಿಲ್ಲ. ಅವರಿಬ್ಬರ ನಡುವೆ ಪ್ರೀತಿ-ಪ್ರೇಮವಿದೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ.

ನಿನ್ನ ಗರ್ಲ್​ಫ್ರೆಂಡ್​ಮೇಲೆ ಕೈ ಹಾಕಿದ್ದಕ್ಕೆ ಸಿಟ್ಟು ಬಂತಾ?; ಉರಿಯುವ ಬೆಂಕಿಗೆ ತುಪ್ಪ ಸುರಿದ ಪ್ರಶಾಂತ್ ಸಂಬರಗಿ ​
ರಾಜೇಶ್ ದುಗ್ಗುಮನೆ
| Edited By: |

Updated on: Apr 01, 2021 | 6:05 PM

Share

ಪ್ರಶಾಂತ್​ ಸಂಬರಗಿ ಬಿಗ್​ ಬಾಸ್​ ಮನೆಯಲ್ಲಿ ಒಬ್ಬರಾದ ಮೇಲೆ ಒಬ್ಬರ ಬಳಿ ದ್ವೇಷ ಕಟ್ಟಿಕೊಳ್ಳುತ್ತಿದ್ದಾರೆ. ಬಹುತೇಕ ಸ್ಪರ್ಧಿಗಳು ಪ್ರಶಾಂತ್​ ಎದುರು ನಗು ನಗುತ್ತಾ ಮಾತನಾಡಿದರೂ ಹಿಂದಿನಿಂದ ಅವರ ವಿರುದ್ಧ ಗಾಸಿಪ್​ ಮಾಡುತ್ತಿದ್ದಾರೆ. ಇದು ಪ್ರಶಾಂತ್​ ಸಂಬರಗಿಗೆ ಗೊತ್ತಿಲ್ಲ ಏಂದೇನೂ ಅಲ್ಲ. ಗೊತ್ತಿದ್ದರೂ, ಅವರು ಏನೂ ತಿಳಿದೇ ಇಲ್ಲ ಎನ್ನುವಂತೆ ಇದ್ದಾರೆ. ಈ ಮಧ್ಯೆ, ಕೆಲವರು ಪ್ರಶಾಂತ್​ ವಿರುದ್ಧ ನೇರವಾಗಿಯೇ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಈಗ ಅಂತಹುದೇ ಘಟನೆ ಬಿಗ್​ ಬಾಸ್​ ಮನೆಯಲ್ಲಿ ನಡೆದಿದೆ. ಆರಂಭದಲ್ಲಿ ಪ್ರಶಾಂತ್ ಸಂಬರಗಿ ಆಪ್ತೆ ಎನಿಸಿಕೊಂಡಿದ್ದ ದಿವ್ಯಾ ಉರುಡುಗು ತಿರುಗಿ ಬಿದ್ದಿದ್ದಾರೆ. ಪ್ರಶಾಂತ್​ ಸಂಬರಗಿ ಆರಂಭದ ದಿನಗಳಲ್ಲಿ ದಿವ್ಯಾ ಉರುಡುಗ ಜತೆ ಹೆಚ್ಚು ಆಪ್ತವಾಗಿರುತ್ತಿದ್ದರು. ಇದನ್ನು ನೋಡಿದ ಪ್ರೇಕ್ಷಕರು ಗಾಸಿಪ್​ ಆರಂಭಿಸಿದ್ದರು. ಅವರ ಸಂಬಂಧ ಎಂತಹುದು ಎಂದು ಅನೇಕರು ಕೇಳಿಕೊಂಡಿದ್ದರು. ಆದರೆ, ಅಚ್ಚರಿ ಎಂಬಂತೆ ದಿವ್ಯಾ ಉರುಡುಗ ನನ್ನ ತಂಗಿ ಇದ್ದಂತೆ ಎಂದು ಘೋಷಿಸಿದ್ದರು ಪ್ರಶಾಂತ್​.

ದಿವ್ಯಾ ಉರುಡುಗ-ಅರವಿಂದ್ ಕೆ.ಪಿ. ನಡುವೆ ಆಪ್ತತೆ ಬೆಳೆದ ನಂತರದಲ್ಲಿ ಪ್ರಶಾಂತ್​ ಸಂಬರಗಿ ಅಷ್ಟಾಗಿ ದಿವ್ಯಾ ಜತೆ ಬೆರೆಯುತ್ತಿಲ್ಲ. ಅವರಿಬ್ಬರ ನಡುವೆ ಪ್ರೀತಿ-ಪ್ರೇಮವಿದೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಈಗ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ನೇರವಾಗಿ ಪ್ರಶಾಂತ್​ ಮೇಲೆ ವಾಗ್ದಾಳಿ ಮಾಡಿದ್ದಾರೆ.

ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಒಂದನ್ನು ಬಿಟ್ಟಿದೆ. ಈ ಪ್ರೋಮೋದಲ್ಲಿ ಅರವಿಂದ್​, ಪ್ರಶಾಂತ್​ ಮೇಲೆ ಕೂಗಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಪ್ರಶಾಂತ್​, ನಿನ್ನ ಗರ್ಲ್​ಫ್ರೆಂಡ್​ ಮೇಲೆ ಕೈ ಹಾಕಿದ್ದಕ್ಕೆ ಬೇಜಾರು ಆಗಿರೋದಾ ಎಂದು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ದಿವ್ಯಾ ಸಿಟ್ಟಾಗಿದ್ದಾರೆ. ಏಯ್​ ನೆಟ್ಟಗೆ ಮಾತನಾಡಿದ್ರೆ ಮಾತನಾಡುತ್ತೇನೆ. ನೀವು ಅರವಿಂದ್​ ಬಳಿ ನನ್ನ ಹೆಸರನ್ನು ಹೇಗೆ ಹೇಳಿದ್ರಿ? ನಾನು ಅರವಿಂದ್​ ಗರ್ಲ್​ಫ್ರೆಂಡ್​ ಆಗಿರಬಹುದು, ತಂಗಿ ಆಗಿರಬಹುದು ಅಥವಾ ಹೆಂಡತೀನೂ ಆಗಿರಬಹುದು. ನೀವು ನನ್ನ ಹೆಸರನ್ನು ಮಧ್ಯೆ ತರುವ ಹಾಗೇ ಇಲ್ಲ ಎಂದು ಪ್ರಶಾಂತ್​ಗೆ ಹೇಳಿದರು. ನಾನು ಹೇಳಿದ್ದರಲ್ಲಿ ತಪ್ಪೇನು ಇಲ್ಲ ಎನ್ನುವಂತೆ ಪ್ರಶಾಂತ್​ ಮಾತನಾಡಿದ್ದಾರೆ. ಆಗ ದಿವ್ಯಾ ಸುದೀಪ್​ ಕೊಡುವ ವಿಶೇಷ ಚಪ್ಪಾಳೆ ರೀತಿಯಲ್ಲೇ ಪ್ರಶಾಂತ್​ ಸಂಬರಗಿಗೆ ವಿಶೇಷವಾಗಿ ಚಪ್ಪಾಳೆ ಹೊಡೆದಿದ್ದಾರೆ.

ಇದನ್ನೂ ಓದಿ:Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು? 

(BBK8 Divya Uruduga and Prashanth Sambargi Talk Fight goes viral In Social Media )

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್