AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ ಬಾಸ್​ ಮನೆಯಲ್ಲಿ ‘ಕ್ವಾಟ್ಲೆ ಕಿಲಾಡಿಗಳು’ ಹಾಗೂ ‘ಸೂರ್ಯ ಸೇನೆ’ ಎಂದು ಎರಡು ತಂಡಗಳನ್ನು ಮಾಡಲಾಗಿತ್ತು. ಕ್ವಾಟ್ಲೆ ತಂಡಕ್ಕೆ ಮಂಜು ಕ್ಯಾಪ್ಟನ್​ ಆದರೆ, ಸೂರ್ಯಸೇನೆ ತಂಡಕ್ಕೆ ಅರವಿಂದ್ ಕ್ಯಾಪ್ಟನ್​.

Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ
ದಿವ್ಯಾ ಉರುಡುಗ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 02, 2021 | 10:35 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಮೊದಲ​ ಇನ್ನಿಂಗ್ಸ್​ನಲ್ಲಿ 11 ವಾರ ಕಳೆದಿದ್ದ ಸ್ಪರ್ಧಿಗಳು ಒಂದು ಗ್ಯಾಪ್​ ತೆಗೆದುಕೊಂಡು ಮತ್ತೆ ಮನೆ ಪ್ರವೇಶಿಸಿದ್ದಾರೆ. ಎರಡನೇ ಇನ್ನಿಂಗ್ಸ್​ನಲ್ಲಿ ಸ್ಪರ್ಧಿಗಳು ಎರಡು ವಾರ ಕಳೆದಿದ್ದಾರೆ. ಹೀಗಿರುವಾಗಲೇ ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ‘ಕ್ವಾಟ್ಲೆ ಕಿಲಾಡಿಗಳು’ ಹಾಗೂ ‘ಸೂರ್ಯ ಸೇನೆ’ ಎಂದು ಎರಡು ತಂಡಗಳನ್ನು ಮಾಡಲಾಗಿತ್ತು. ಕ್ವಾಟ್ಲೆ ತಂಡಕ್ಕೆ ಮಂಜು ಕ್ಯಾಪ್ಟನ್​ ಆದರೆ, ಸೂರ್ಯಸೇನೆ ತಂಡಕ್ಕೆ ಅರವಿಂದ್ ಕ್ಯಾಪ್ಟನ್​. ಎರಡೂ ತಂಡಗಳು ಮೂರ್ನಾಲ್ಕು ದಿನಗಳ ಕಾಲ ಟಾಸ್ಕ್​ನಲ್ಲಿ ಪಾಲ್ಗೊಂಡರು. ಈ ಟಾಸ್ಕ್​ನಲ್ಲಿ ಸೂರ್ಯ ಸೇನೆ ಗೆದ್ದಿದೆ. ಈ ಮೂಲಕ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆದುಕೊಂಡಿದೆ.

ಸೂರ್ಯಸೇನೆ ತಂಡದಲ್ಲಿರುವ ಅರವಿಂದ್​, ದಿವ್ಯಾ ಉರುಡುಗ, ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ವೈಷ್ಣವಿ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಪಾಲ್ಗೊಂಡರು. ಟಾಸ್ಕ್​ನ ಅನುಸಾರ ಧರಿಸಿದ ಬಟ್ಟೆಯ ಮೇಲೆ ಮತ್ತೊಂದು ಬಟ್ಟೆ ಹಾಕಿಕೊಳ್ಳಬೇಕು. ಅತಿ ಹೆಚ್ಚು ಬಟ್ಟಿ ಹಾಕಿದವರು ಟಾಸ್ಕ್​ ಗೆದ್ದಂತೆ. ಈ ಟಾಸ್ಕ್​​ನಲ್ಲಿ ದಿವ್ಯಾ ಗೆದ್ದು ಬಿಗ್​ ಬಾಸ್​ ಸೀಸನ್​ 8ರ ಮೊದಲ ಮಹಿಳಾ ಕ್ಯಾಪ್ಟನ್​ ಆಗಿ ಹೊರ ಹೊಮ್ಮಿದರು.

ಈವರೆಗೆ ಬಿಗ್​ ಬಾಸ್​ ಸೀಸನ್​ 8ರಲ್ಲಿ ಮಹಿಳಾ ಕ್ಯಾಪ್ಟನ್​ ಆಗಿರಲಿಲ್ಲ. ಕಳೆದ ವಾರದ ಪಂಚಾಯ್ತಿಯಲ್ಲಿ ಸುದೀಪ್​ ಕೂಡ ಈ ಬಗ್ಗೆ ಮಾತನಾಡಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಹಿಳೆಯರು ಕ್ಯಾಪ್ಟನ್​ ಆಗದೇ ಇರೋದಕ್ಕೆ ಕಾರಣವೇನು ಎಂದು ಮನೆಯವರನ್ನು ಪ್ರಶ್ನೆ ಮಾಡಿದ್ದರು. ಇದಕ್ಕೆ ಕೆಲವರು ಅದೃಷ್ಟವನ್ನು​ ದ್ವೇಷಿಸಿದರೆ, ಇನ್ನೂ ಕೆಲವರು ನಾವು ಪ್ರಯತ್ನ ಮಾಡುತ್ತೇವೆ ಆದರೆ, ಕ್ಯಾಪ್ಟನ್​ ಆಗೋಕೆ ಸಾಧ್ಯವಾಗುತ್ತಿಲ್ಲ ಎಂದಿದ್ದರು. ಕೊನೆಗೂ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಕ್ಯಾಪ್ಟನ್​ ಆಗಿ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ.

ಇದನ್ನೂ ಓದಿ: ‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ

ಅರವಿಂದ್​ ಕೆ.ಪಿ.-ದಿವ್ಯಾ ಉರುಡುಗ ಪ್ರೇಮಕಥೆ ಆಧರಿಸಿ ಸಿನಿಮಾ; ಟೈಟಲ್​ ಕೂಡ ಫೈನಲ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ