AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ ಬಾಸ್​ ಮನೆಯಲ್ಲಿ ‘ಕ್ವಾಟ್ಲೆ ಕಿಲಾಡಿಗಳು’ ಹಾಗೂ ‘ಸೂರ್ಯ ಸೇನೆ’ ಎಂದು ಎರಡು ತಂಡಗಳನ್ನು ಮಾಡಲಾಗಿತ್ತು. ಕ್ವಾಟ್ಲೆ ತಂಡಕ್ಕೆ ಮಂಜು ಕ್ಯಾಪ್ಟನ್​ ಆದರೆ, ಸೂರ್ಯಸೇನೆ ತಂಡಕ್ಕೆ ಅರವಿಂದ್ ಕ್ಯಾಪ್ಟನ್​.

Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ
ದಿವ್ಯಾ ಉರುಡುಗ
TV9 Web
| Edited By: |

Updated on: Jul 02, 2021 | 10:35 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಮೊದಲ​ ಇನ್ನಿಂಗ್ಸ್​ನಲ್ಲಿ 11 ವಾರ ಕಳೆದಿದ್ದ ಸ್ಪರ್ಧಿಗಳು ಒಂದು ಗ್ಯಾಪ್​ ತೆಗೆದುಕೊಂಡು ಮತ್ತೆ ಮನೆ ಪ್ರವೇಶಿಸಿದ್ದಾರೆ. ಎರಡನೇ ಇನ್ನಿಂಗ್ಸ್​ನಲ್ಲಿ ಸ್ಪರ್ಧಿಗಳು ಎರಡು ವಾರ ಕಳೆದಿದ್ದಾರೆ. ಹೀಗಿರುವಾಗಲೇ ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ‘ಕ್ವಾಟ್ಲೆ ಕಿಲಾಡಿಗಳು’ ಹಾಗೂ ‘ಸೂರ್ಯ ಸೇನೆ’ ಎಂದು ಎರಡು ತಂಡಗಳನ್ನು ಮಾಡಲಾಗಿತ್ತು. ಕ್ವಾಟ್ಲೆ ತಂಡಕ್ಕೆ ಮಂಜು ಕ್ಯಾಪ್ಟನ್​ ಆದರೆ, ಸೂರ್ಯಸೇನೆ ತಂಡಕ್ಕೆ ಅರವಿಂದ್ ಕ್ಯಾಪ್ಟನ್​. ಎರಡೂ ತಂಡಗಳು ಮೂರ್ನಾಲ್ಕು ದಿನಗಳ ಕಾಲ ಟಾಸ್ಕ್​ನಲ್ಲಿ ಪಾಲ್ಗೊಂಡರು. ಈ ಟಾಸ್ಕ್​ನಲ್ಲಿ ಸೂರ್ಯ ಸೇನೆ ಗೆದ್ದಿದೆ. ಈ ಮೂಲಕ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆದುಕೊಂಡಿದೆ.

ಸೂರ್ಯಸೇನೆ ತಂಡದಲ್ಲಿರುವ ಅರವಿಂದ್​, ದಿವ್ಯಾ ಉರುಡುಗ, ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ, ಶಮಂತ್​ ಬ್ರೋ ಗೌಡ, ವೈಷ್ಣವಿ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಪಾಲ್ಗೊಂಡರು. ಟಾಸ್ಕ್​ನ ಅನುಸಾರ ಧರಿಸಿದ ಬಟ್ಟೆಯ ಮೇಲೆ ಮತ್ತೊಂದು ಬಟ್ಟೆ ಹಾಕಿಕೊಳ್ಳಬೇಕು. ಅತಿ ಹೆಚ್ಚು ಬಟ್ಟಿ ಹಾಕಿದವರು ಟಾಸ್ಕ್​ ಗೆದ್ದಂತೆ. ಈ ಟಾಸ್ಕ್​​ನಲ್ಲಿ ದಿವ್ಯಾ ಗೆದ್ದು ಬಿಗ್​ ಬಾಸ್​ ಸೀಸನ್​ 8ರ ಮೊದಲ ಮಹಿಳಾ ಕ್ಯಾಪ್ಟನ್​ ಆಗಿ ಹೊರ ಹೊಮ್ಮಿದರು.

ಈವರೆಗೆ ಬಿಗ್​ ಬಾಸ್​ ಸೀಸನ್​ 8ರಲ್ಲಿ ಮಹಿಳಾ ಕ್ಯಾಪ್ಟನ್​ ಆಗಿರಲಿಲ್ಲ. ಕಳೆದ ವಾರದ ಪಂಚಾಯ್ತಿಯಲ್ಲಿ ಸುದೀಪ್​ ಕೂಡ ಈ ಬಗ್ಗೆ ಮಾತನಾಡಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಮಹಿಳೆಯರು ಕ್ಯಾಪ್ಟನ್​ ಆಗದೇ ಇರೋದಕ್ಕೆ ಕಾರಣವೇನು ಎಂದು ಮನೆಯವರನ್ನು ಪ್ರಶ್ನೆ ಮಾಡಿದ್ದರು. ಇದಕ್ಕೆ ಕೆಲವರು ಅದೃಷ್ಟವನ್ನು​ ದ್ವೇಷಿಸಿದರೆ, ಇನ್ನೂ ಕೆಲವರು ನಾವು ಪ್ರಯತ್ನ ಮಾಡುತ್ತೇವೆ ಆದರೆ, ಕ್ಯಾಪ್ಟನ್​ ಆಗೋಕೆ ಸಾಧ್ಯವಾಗುತ್ತಿಲ್ಲ ಎಂದಿದ್ದರು. ಕೊನೆಗೂ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಕ್ಯಾಪ್ಟನ್​ ಆಗಿ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ.

ಇದನ್ನೂ ಓದಿ: ‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ

ಅರವಿಂದ್​ ಕೆ.ಪಿ.-ದಿವ್ಯಾ ಉರುಡುಗ ಪ್ರೇಮಕಥೆ ಆಧರಿಸಿ ಸಿನಿಮಾ; ಟೈಟಲ್​ ಕೂಡ ಫೈನಲ್

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ