AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್​ ಅವ್ರನ್ನು ಲವ್​ ಮಾಡ್ತಾ ಇದೀರಾ? ಮನೆಯವರ ಪ್ರಶ್ನೆಗೆ ನಾಚಿ ನೀರಾದ ದಿವ್ಯಾ ಉರುಡುಗ

ಆರಂಭದ ದಿನಗಳಲ್ಲಿ ಬಿಗ್​ ಬಾಸ್​ ಮನೆಯಲ್ಲಿ ಜೋಡಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನೀಡುವುದಕ್ಕೂ ಮೊದಲು ಇಬ್ಬರ ನಡುವೆ ಇದ್ದಿದ್ದು ಹಾಯ್-ಬಾಯ್​ ಗೆಳೆತನ.

ಅರವಿಂದ್​ ಅವ್ರನ್ನು ಲವ್​ ಮಾಡ್ತಾ ಇದೀರಾ? ಮನೆಯವರ ಪ್ರಶ್ನೆಗೆ ನಾಚಿ ನೀರಾದ ದಿವ್ಯಾ ಉರುಡುಗ
ದಿವ್ಯಾ ಉರುಡುಗ
ರಾಜೇಶ್ ದುಗ್ಗುಮನೆ
| Edited By: |

Updated on: Apr 27, 2021 | 7:58 AM

Share

ಅರವಿಂದ್​ ಕೆ.ಪಿ. ಹಾಗೂ ದಿವ್ಯಾ ಉರುಡುಗ  ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಆಪ್ತವಾಗಿದ್ದಾರೆ. ಇಬ್ಬರದ್ದೂ ಲವ್​ ಅನ್ನೋದು ವೀಕ್ಷಕರಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಆದರೆ, ಅದನ್ನು ಹೇಳೋಕೆ ಈ ಜೋಡಿ ಹಿಂದೆ ಸರಿಯುತ್ತಿದೆ. ನಮ್ಮದು ಫ್ರೆಂಡ್​ಶಿಪ್​ ಎಂದು ಪದೇಪದೇ ಒತ್ತಿ ಹೇಳುತ್ತಿದೆ. ಈಗ ಮನೆಯವರು ಕೇಳಿದ ನೇರ ಪ್ರಶ್ನೆಗೆ ದಿವ್ಯಾ ಉರುಡುಗ ನಾಚಿ ನೀರಾಗಿದ್ದಾರೆ. ಈ ವಿಡಿಯೋ ಈಗ ಸಾಕಷ್ಟು ವೈರಲ್​ ಆಗಿದೆ.

ಆರಂಭದ ದಿನಗಳಲ್ಲಿ ಬಿಗ್​ ಬಾಸ್​ ಮನೆಯಲ್ಲಿ ಜೋಡಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನೀಡುವುದಕ್ಕೂ ಮೊದಲು ಇಬ್ಬರ ನಡುವೆ ಇದ್ದಿದ್ದು ಹಾಯ್-ಬಾಯ್​ ಗೆಳೆತನ. ಆದರೆ, ಯಾವಾಗ ಜೋಡಿ ಟಾಸ್ಕ್​ ಪೂರ್ಣಗೊಂಡಿತ್ತೋ ಇಬ್ಬರ ಗೆಳೆತನ ಆರಂಭವಾಗಿತ್ತು. ಈ ಗೆಳೆತನ ನಿಧಾನವಾಗಿ ಪ್ರೀತಿಯಾಗಿ ಬದಲಾಗುತ್ತಿದೆ.

ವೀಕೆಂಡ್​ನಲ್ಲಿ ಇಬ್ಬರೂ ಒಟ್ಟಿಗೆ ಕುಳಿತುಕೊಳ್ಳುತ್ತಿದ್ದರು. ಮನೆಯಲ್ಲಿ ಸಮಯ ಸಿಕ್ಕಾಗೆಲ್ಲ ಇಬ್ಬರೂ ಹರಟುತ್ತಿದ್ದರು. ಇತ್ತೀಚೆಗೆ ವೀಕ್ಷಕರೊಬ್ಬರು ಕರೆ ಮಾಡಿ ನಿಮ್ಮಿಬ್ಬರ ಕೆಮಿಸ್ಟ್ರಿ ಉತ್ತಮವಾಗಿದೆ ಎಂದಾಗ ದಿವ್ಯಾ ಸಂತೋಷಕ್ಕೆ ಪಾರವೇ ಇರಲಿಲ್ಲ. ಈಗ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಹಾಗೂ ಅರವಿಂದ್​ಗೆ ನೇರ ಪ್ರಶ್ನೆ ಬಂದಿದೆ. ಈ ಪ್ರಶ್ನೆ ಕೇಳಿ ದಿವ್ಯಾ ನಾಚಿ ನೀರಾಗಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಅಡುಗೆ ಮನೆಯಲ್ಲಿ ಕೂತಿದ್ದರು. ಆಗ ರಘು ನೇರವಾಗಿ, ನೀನು ನಿಜವಾಗಿಯೂ ಹೇಳು. ಅರವಿಂದ್​ನ ಲವ್​ ಮಾಡ್ತಾ ಇದೀಯೋ ಇಲ್ಲವೋ ಎನ್ನುವುದನ್ನು ಹೇಳು ಎಂದು ದಿವ್ಯಾಗೆ ಕೇಳಿದರು. ಇದಕ್ಕೆ ದಿವ್ಯಾ ನಾಚಿ ನೀರಾದರು. ನಗುತ್ತಲೇ ಅರವಿಂದ್​ ಎಂದರೆ ಇಷ್ಟ. ಮುಂದೇನಾಗುತ್ತೋ ಗೊತ್ತಿಲ್ಲ ಎಂದರು.

ಇದನ್ನೂ ಓದಿ: ಕ್ಯಾಪ್ಟನ್​ ಆದ ಮರುದಿನವೇ ಚಕ್ರವರ್ತಿಗೆ ದ್ರೋಹ ಬಗೆದ ರಘು; ಮಾಡಿದ ಸಹಾಯ ಇಷ್ಟು ಬೇಗ ಮರೆತೋಯ್ತಾ?

Bigg Boss Kannada: ಬಿಗ್​ ಬಾಸ್​ ಬೆಡ್​ರೂಂನಿಂದ ಬಂತು ಮುತ್ತಿನ ಶಬ್ದ! ಕೊಟ್ಟಿದ್ಯಾರು, ತೆಗೆದುಕೊಂಡಿದ್ಯಾರು?

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು