AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಅವಘಡ; ದಿವ್ಯಾ ಉರುಡುಗ ಹೊಡೆದ ಫೋರ್ಸ್​ಗೆ ಗಾಜು ನುಚ್ಚುನೂರು, ಕೈಯಲ್ಲಿ ರಕ್ತ

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ 19ನೇ ದಿನ ಪೂರ್ಣಗೊಂಡಿದೆ. ಸಾಮಾನ್ಯವಾಗಿ ಪ್ರತಿ ಸೋಮವಾರ ಎಲಿಮಿನೇಷನ್​ಗೆ ನಾಮಿನೇಷನ್​ ನಡೆಯುತ್ತದೆ. ಮನೆಯ ಎಲ್ಲಾ ಸದಸ್ಯರು ಇಬ್ಬರು ಸದಸ್ಯರನ್ನು ನಾಮಿನೇಟ್​ ಮಾಡಬೇಕು.

ಬಿಗ್ ಬಾಸ್ ಮನೆಯಲ್ಲಿ ಅವಘಡ; ದಿವ್ಯಾ ಉರುಡುಗ ಹೊಡೆದ ಫೋರ್ಸ್​ಗೆ ಗಾಜು ನುಚ್ಚುನೂರು, ಕೈಯಲ್ಲಿ ರಕ್ತ
TV9 Web
| Edited By: |

Updated on: Jul 13, 2021 | 7:56 AM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಫಿನಾಲೆಗೆ ಕೆಲವೇ ವಾರಗಳು ಬಾಕಿ ಇವೆ. ಮನೆಯಲ್ಲಿ ಸದ್ಯ 10 ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದಾರೆ. ಎಲ್ಲಾ ಸ್ಪರ್ಧಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಿರುವಾಗಲೇ ಬಿಗ್​ ಬಾಸ್​ ಮನೆಯಲ್ಲಿ ಅವಘಡ ಒಂದು ನಡೆದಿದೆ.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ 19 ದಿನ ಪೂರ್ಣಗೊಂಡಿದೆ. ಸಾಮಾನ್ಯವಾಗಿ ಪ್ರತಿ ಸೋಮವಾರ ಎಲಿಮಿನೇಷನ್​ಗೆ ನಾಮಿನೇಷನ್​ ನಡೆಯುತ್ತದೆ. ಮನೆಯ ಎಲ್ಲಾ ಸದಸ್ಯರು ಇಬ್ಬರು ಸದಸ್ಯರನ್ನು ನಾಮಿನೇಟ್​ ಮಾಡಬೇಕು ಮತ್ತು ಇದಕ್ಕೆ ಕಾರಣವನ್ನೂ ನೀಡಬೇಕು. ಈ ಬಾರಿ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಈ ಅವಕಾಶವನ್ನೇ ನೀಡಿಲ್ಲ. ಮನೆಯ ಕ್ಯಾಪ್ಟನ್​ ಆದ ಅರವಿಂದ್​ ಕೆ.ಪಿ ಹಾಗೂ ರಘು ಗೌಡ ಸೇವ್​ ಮಾಡಿದ ಶಮಂತ್​ ಹೊರತುಪಡಿಸಿ ಮನೆಯ ಎಲ್ಲಾ 8 ಸದಸ್ಯರು ನಾಮಿನೇಟ್​ ಆಗಿದ್ದಾರೆ.

ಈ ನಾಮಿನೇಟ್​ನಿಂದ ತಪ್ಪಿಸಿಕೊಳ್ಳೋಕೆ ಬಿಗ್​ ಬಾಸ್​ ಅವಕಾಶವನ್ನೂ ನೀಡಿದ್ದಾರೆ. ಎರಡು ತಂಡಗಳನ್ನಾಗಿ ಮಾಡಲಾಗಿದೆ. ‘ವಿಜಯ ಪಥ’ ತಂಡಕ್ಕೆ ಅರವಿಂದ್ ಕ್ಯಾಪ್ಟನ್​ ಆಗಿದ್ದು, ‘ನಿಂಗ್​ ಐತೆ’ ತಂಡಕ್ಕೆ ಮಂಜು ಕ್ಯಾಪ್ಟನ್​. ಅರವಿಂದ್ ಟೀಮ್​ನಲ್ಲಿ, ಶುಭಾ, ವೈಷ್ಣವಿ, ಪ್ರಶಾಂತ್​ ಸಂಬರಗಿ, ಪ್ರಿಯಾಂಕಾ ತಿಮ್ಮೇಶ್​ ಇದ್ದಾರೆ. ಮಂಜು ಟೀಮ್​ನಲ್ಲಿ ದಿವ್ಯಾ ಸುರೇಶ್, ದಿವ್ಯಾ ಉರುಡುಗ, ಚಕ್ರವರ್ತಿ ಚಂದ್ರಚೂಡ್​, ಶಮಂತ್​ ಇದ್ದಾರೆ.

ನಕ್ಷತ್ರ ಅಂಟಿಸುವ ಟಾಸ್ಕ್ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ ಪ್ರಕಾರ ಪ್ರತಿ ತಂಡದ ತಲಾ ಓರ್ವ ಸದಸ್ಯ ಜಾಕೆಟ್​ ಹಾಕಬೇಕು. ಅವರಿಗೆ ಎದುರಾಳಿ ತಂಡದವರು ನಕ್ಷತ್ರ ಅಂಟಿಸಬೇಕು. ಈ ಟಾಸ್ಕ್​ ವೇಳೆ ನಿಂಗ್​ ಐತೇ ತಂಡದದಿಂದ ದಿವ್ಯಾ ಜಾಕೇಟ್​ ಹಾಕಿದ್ದರು. ಆಗ ಎದುರಾಳಿ ತಂಡದವರು ದಿವ್ಯಾ ಮೇಲೆ ನಕ್ಷತ್ರ ಅಂಟಿಸೋಕೆ ಮುಂದಾದರು. ಈ ವೇಳೆ ದಿವ್ಯಾ ಕೈ ಗ್ಲಾಸ್​ಗೆ ತಾಗಿದೆ. ಗಾಜು ಒಡೆದು ದಿವ್ಯಾ ಕೈಗೆ ಗಾಯವಾಗಿದೆ. ಹೀಗಾಗಿ ಗಳಗಳನೆ ಅತ್ತಿದ್ದಾರೆ. ನಂತರ ಅವರನ್ನು ಕನ್​ಫೆಷನ್​ ರೂಮ್​ಗೆ ಕರೆದುಕೊಂಡು ಹೋಗಿ ಬ್ಯಾಂಡೇಜ್​ ಹಾಕಲಾಯಿತು.

ಇದನ್ನೂ ಓದಿ: ಅರವಿಂದ್ ಗೆಲ್ಲಿಸೋಕೆ ಚಕ್ರವರ್ತಿಗೆ ಅನ್ಯಾಯ ಮಾಡಿದ್ರಾ ದಿವ್ಯಾ ಉರುಡುಗ? ಬಿಗ್​ ಬಾಸ್​ ಮನೆಯಲ್ಲಿ ಹೀಗೊಂದು ಪ್ರಶ್ನೆ

‘72 ದಿನಗಳ ಕಾಲ ನೋಡಿದ ಕೆಪಿ ಹೀಗೆ ಇರಲಿಲ್ಲ’; ಚಕ್ರವರ್ತಿ ಪ್ರಭಾವಕ್ಕೊಳಗಾದ ಅರವಿಂದ್​ಗೆ ಸುದೀಪ್​ ಎಚ್ಚರಿಕೆ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​