AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಅವಘಡ; ದಿವ್ಯಾ ಉರುಡುಗ ಹೊಡೆದ ಫೋರ್ಸ್​ಗೆ ಗಾಜು ನುಚ್ಚುನೂರು, ಕೈಯಲ್ಲಿ ರಕ್ತ

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ 19ನೇ ದಿನ ಪೂರ್ಣಗೊಂಡಿದೆ. ಸಾಮಾನ್ಯವಾಗಿ ಪ್ರತಿ ಸೋಮವಾರ ಎಲಿಮಿನೇಷನ್​ಗೆ ನಾಮಿನೇಷನ್​ ನಡೆಯುತ್ತದೆ. ಮನೆಯ ಎಲ್ಲಾ ಸದಸ್ಯರು ಇಬ್ಬರು ಸದಸ್ಯರನ್ನು ನಾಮಿನೇಟ್​ ಮಾಡಬೇಕು.

ಬಿಗ್ ಬಾಸ್ ಮನೆಯಲ್ಲಿ ಅವಘಡ; ದಿವ್ಯಾ ಉರುಡುಗ ಹೊಡೆದ ಫೋರ್ಸ್​ಗೆ ಗಾಜು ನುಚ್ಚುನೂರು, ಕೈಯಲ್ಲಿ ರಕ್ತ
TV9 Web
| Edited By: |

Updated on: Jul 13, 2021 | 7:56 AM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಫಿನಾಲೆಗೆ ಕೆಲವೇ ವಾರಗಳು ಬಾಕಿ ಇವೆ. ಮನೆಯಲ್ಲಿ ಸದ್ಯ 10 ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದಾರೆ. ಎಲ್ಲಾ ಸ್ಪರ್ಧಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಿರುವಾಗಲೇ ಬಿಗ್​ ಬಾಸ್​ ಮನೆಯಲ್ಲಿ ಅವಘಡ ಒಂದು ನಡೆದಿದೆ.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ 19 ದಿನ ಪೂರ್ಣಗೊಂಡಿದೆ. ಸಾಮಾನ್ಯವಾಗಿ ಪ್ರತಿ ಸೋಮವಾರ ಎಲಿಮಿನೇಷನ್​ಗೆ ನಾಮಿನೇಷನ್​ ನಡೆಯುತ್ತದೆ. ಮನೆಯ ಎಲ್ಲಾ ಸದಸ್ಯರು ಇಬ್ಬರು ಸದಸ್ಯರನ್ನು ನಾಮಿನೇಟ್​ ಮಾಡಬೇಕು ಮತ್ತು ಇದಕ್ಕೆ ಕಾರಣವನ್ನೂ ನೀಡಬೇಕು. ಈ ಬಾರಿ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಈ ಅವಕಾಶವನ್ನೇ ನೀಡಿಲ್ಲ. ಮನೆಯ ಕ್ಯಾಪ್ಟನ್​ ಆದ ಅರವಿಂದ್​ ಕೆ.ಪಿ ಹಾಗೂ ರಘು ಗೌಡ ಸೇವ್​ ಮಾಡಿದ ಶಮಂತ್​ ಹೊರತುಪಡಿಸಿ ಮನೆಯ ಎಲ್ಲಾ 8 ಸದಸ್ಯರು ನಾಮಿನೇಟ್​ ಆಗಿದ್ದಾರೆ.

ಈ ನಾಮಿನೇಟ್​ನಿಂದ ತಪ್ಪಿಸಿಕೊಳ್ಳೋಕೆ ಬಿಗ್​ ಬಾಸ್​ ಅವಕಾಶವನ್ನೂ ನೀಡಿದ್ದಾರೆ. ಎರಡು ತಂಡಗಳನ್ನಾಗಿ ಮಾಡಲಾಗಿದೆ. ‘ವಿಜಯ ಪಥ’ ತಂಡಕ್ಕೆ ಅರವಿಂದ್ ಕ್ಯಾಪ್ಟನ್​ ಆಗಿದ್ದು, ‘ನಿಂಗ್​ ಐತೆ’ ತಂಡಕ್ಕೆ ಮಂಜು ಕ್ಯಾಪ್ಟನ್​. ಅರವಿಂದ್ ಟೀಮ್​ನಲ್ಲಿ, ಶುಭಾ, ವೈಷ್ಣವಿ, ಪ್ರಶಾಂತ್​ ಸಂಬರಗಿ, ಪ್ರಿಯಾಂಕಾ ತಿಮ್ಮೇಶ್​ ಇದ್ದಾರೆ. ಮಂಜು ಟೀಮ್​ನಲ್ಲಿ ದಿವ್ಯಾ ಸುರೇಶ್, ದಿವ್ಯಾ ಉರುಡುಗ, ಚಕ್ರವರ್ತಿ ಚಂದ್ರಚೂಡ್​, ಶಮಂತ್​ ಇದ್ದಾರೆ.

ನಕ್ಷತ್ರ ಅಂಟಿಸುವ ಟಾಸ್ಕ್ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ ಪ್ರಕಾರ ಪ್ರತಿ ತಂಡದ ತಲಾ ಓರ್ವ ಸದಸ್ಯ ಜಾಕೆಟ್​ ಹಾಕಬೇಕು. ಅವರಿಗೆ ಎದುರಾಳಿ ತಂಡದವರು ನಕ್ಷತ್ರ ಅಂಟಿಸಬೇಕು. ಈ ಟಾಸ್ಕ್​ ವೇಳೆ ನಿಂಗ್​ ಐತೇ ತಂಡದದಿಂದ ದಿವ್ಯಾ ಜಾಕೇಟ್​ ಹಾಕಿದ್ದರು. ಆಗ ಎದುರಾಳಿ ತಂಡದವರು ದಿವ್ಯಾ ಮೇಲೆ ನಕ್ಷತ್ರ ಅಂಟಿಸೋಕೆ ಮುಂದಾದರು. ಈ ವೇಳೆ ದಿವ್ಯಾ ಕೈ ಗ್ಲಾಸ್​ಗೆ ತಾಗಿದೆ. ಗಾಜು ಒಡೆದು ದಿವ್ಯಾ ಕೈಗೆ ಗಾಯವಾಗಿದೆ. ಹೀಗಾಗಿ ಗಳಗಳನೆ ಅತ್ತಿದ್ದಾರೆ. ನಂತರ ಅವರನ್ನು ಕನ್​ಫೆಷನ್​ ರೂಮ್​ಗೆ ಕರೆದುಕೊಂಡು ಹೋಗಿ ಬ್ಯಾಂಡೇಜ್​ ಹಾಕಲಾಯಿತು.

ಇದನ್ನೂ ಓದಿ: ಅರವಿಂದ್ ಗೆಲ್ಲಿಸೋಕೆ ಚಕ್ರವರ್ತಿಗೆ ಅನ್ಯಾಯ ಮಾಡಿದ್ರಾ ದಿವ್ಯಾ ಉರುಡುಗ? ಬಿಗ್​ ಬಾಸ್​ ಮನೆಯಲ್ಲಿ ಹೀಗೊಂದು ಪ್ರಶ್ನೆ

‘72 ದಿನಗಳ ಕಾಲ ನೋಡಿದ ಕೆಪಿ ಹೀಗೆ ಇರಲಿಲ್ಲ’; ಚಕ್ರವರ್ತಿ ಪ್ರಭಾವಕ್ಕೊಳಗಾದ ಅರವಿಂದ್​ಗೆ ಸುದೀಪ್​ ಎಚ್ಚರಿಕೆ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ