AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗ ನನಗೆ ತಂಗಿ ಇದ್ದಂತೆ; ಎಲ್ಲರೆದುರು ಒಪ್ಪಿಕೊಂಡ ಪ್ರಶಾಂತ್​ ಸಂಬರಗಿ

ಟಾಸ್ಕ್​ ನಡೆಯುವಾಗ ನಿನ್ನ ಗರ್ಲ್​ಫ್ರೆಂಡ್​ ಮೇಲೆ ಕೈ ಹಾಕಿದ್ದಕ್ಕೆ ಬೇಜಾರು ಆಗಿರೋದಾ ಎಂದು ಅರವಿಂದ್​ ಅವರನ್ನು ಪ್ರಶ್ನೆ ಮಾಡಿದ್ದರು ಪ್ರಶಾಂತ್​. ಇದಕ್ಕೆ ಸಿಟ್ಟಾಗಿದ್ದ ದಿವ್ಯಾ, ಏಯ್​ ನೆಟ್ಟಗೆ ಮಾತನಾಡಿದ್ರೆ ಮಾತನಾಡುತ್ತೇನೆ ಎಂದು ಆವಾಜ್​ ಹಾಕಿದ್ದರು.

ದಿವ್ಯಾ ಉರುಡುಗ ನನಗೆ ತಂಗಿ ಇದ್ದಂತೆ; ಎಲ್ಲರೆದುರು ಒಪ್ಪಿಕೊಂಡ ಪ್ರಶಾಂತ್​ ಸಂಬರಗಿ
ಪ್ರಶಾಂತ್​ ಸಂಬರಗಿ-ದಿವ್ಯಾ ಉರುಡುಗ
ರಾಜೇಶ್ ದುಗ್ಗುಮನೆ
|

Updated on: Apr 02, 2021 | 3:12 PM

Share

ಪ್ರಶಾಂತ್​ ಸಂಬರಗಿ ಆರಂಭದ ದಿನಗಳಲ್ಲಿ ದಿವ್ಯಾ ಉರುಡುಗ ಜತೆ ಹೆಚ್ಚು ಆಪ್ತರಾಗಿದ್ದರು. ಇದನ್ನು ನೋಡಿದ ಪ್ರೇಕ್ಷಕರು ಗಾಸಿಪ್​ ಆರಂಭಿಸಿದ್ದರು. ಅವರ ಸಂಬಂಧ ಎಂತಹುದು ಎಂದು ಅನೇಕರು ಕೇಳಿಕೊಂಡಿದ್ದರು. ಆದರೆ, ಐದನೇ ವಾರಕ್ಕೆ ಇಬ್ಬರ ನಡುವೆ ಮುಚ್ಚಲಾರದಷ್ಟು ದೊಡ್ಡದಾದ ಕಂದಕ ಬಿದ್ದಿದೆ. ಮನೆಯಲ್ಲಿ ಇಬ್ಬರ ನಡುವೆ ದೊಡ್ಡ ರಾಮಾಯಣವೇ ನಡೆದು ಹೋಗಿದೆ.

ಟಾಸ್ಕ್​ ನಡೆಯುವಾಗ ನಿನ್ನ ಗರ್ಲ್​ಫ್ರೆಂಡ್​ ಮೇಲೆ ಕೈ ಹಾಕಿದ್ದಕ್ಕೆ ಬೇಜಾರು ಆಗಿರೋದಾ ಎಂದು ಅರವಿಂದ್​ ಅವರನ್ನು ಪ್ರಶ್ನೆ ಮಾಡಿದ್ದರು ಪ್ರಶಾಂತ್​. ಇದಕ್ಕೆ ಸಿಟ್ಟಾಗಿದ್ದ ದಿವ್ಯಾ, ಏಯ್​ ನೆಟ್ಟಗೆ ಮಾತನಾಡಿದ್ರೆ ಮಾತನಾಡುತ್ತೇನೆ. ನೀವು ಅರವಿಂದ್​ ಜತೆ ನನ್ನ ಹೆಸರನ್ನು ಏಕೆ ತಳುಕು ಹಾಕಿದ್ರಿ? ನಾನು ಅರವಿಂದ್​ ಗರ್ಲ್​ಫ್ರೆಂಡ್​ ಆಗಿರಬಹುದು, ತಂಗಿ ಆಗಿರಬಹುದು ಅಥವಾ ಹೆಂಡತೀನೂ ಆಗಿರಬಹುದು. ನೀವು ನನ್ನ ಹೆಸರನ್ನು ಮಧ್ಯೆ ತರುವ ಹಾಗೇ ಇಲ್ಲ ಎಂದು ಪ್ರಶಾಂತ್​ಗೆ ಹೇಳಿದರು.

ಆಗ ಮಾತನಾಡಿದ ಪ್ರಶಾಂತ್​, ನಾನೆಲ್ಲೂ ದಿವ್ಯಾ ಹೆಸರನ್ನೇ ಹೇಳಿಲ್ಲ. ಕಳ್ಳನ ಮನಸ್ಸು ಹುಳ್ಳುಳ್ಳಗೆ. ನಾನು ಹೇಳಿದ್ದರಲ್ಲಿ ತಪ್ಪೇನು ಇಲ್ಲ ಎಂದು ಸಮರ್ಥಿಸಿಕೊಂಡರು. ಇದಾದ ನಂತರ ಮತ್ತೊಮ್ಮೆ ಸಂಬರಗಿ ಜತೆ ದಿವ್ಯಾ ಉರುಡುಗ ಮಾತುಕತೆ ನಡೆಸಿದ್ದಾರೆ. ಆಗ ದಿವ್ಯಾ ಅವರನ್ನು ಹೇಗೆ ನೋಡುತ್ತಿದ್ದೇನೆ ಎನ್ನುವ ಬಗ್ಗೆ ಪ್ರಶಾಂತ್​ ಮಾತನಾಡಿದ್ದಾರೆ. ನಾನು ದಿವ್ಯಾ ಅವರನ್ನು ತಂಗಿಯಂತೆ ನೋಡುತ್ತಿದ್ದೇನೆ. ನನ್ನ ಬಗ್ಗೆ ಎಲ್ಲರೂ ತಪ್ಪಾಗಿ ಭಾವಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಆದಾಗ್ಯೂ ದಿವ್ಯಾ ಉರುಡುಗ ಸುಮ್ಮನಾಗಲಿಲ್ಲ. ನೀವು ನಿಜವಾಗಲೂ ನನ್ನನ್ನು ತಂಗಿಯಂತೆ  ನೋಡುತ್ತಿದ್ದರೆ ಖಂಡಿತವಾಗಿಯೂ ಈ ರೀತಿ ಮಾಡುತ್ತಲೇ ಇರಲಿಲ್ಲ. ಬೇರೆಯವರ ಜತೆ ನನ್ನ ಹೆಸರನ್ನು ಹೇಳಿ ಗೇಲಿ ಮಾಡುತ್ತಿರಲಿಲ್ಲ ಎಂದು ಖಡಕ್​ ಆಗಿ ಉತ್ತರಿಸಿದರು. ಆಗ ಪ್ರಶಾಂತ್​ ಸಂಬರಗಿಗೆ ಏನು ಉತ್ತರ ಹೇಳಬೇಕು ಎನ್ನುವುದೇ ಗೊತ್ತಾಗದೆ ತಡವರಿಸಿದರು.

ಇದನ್ನೂ ಓದಿ: ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

 ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ