ಬಿಗ್ ಬಾಸ್ನಿಂದ ಅನೇಕರು ಆಪ್ತರನ್ನು ಕಳೆದುಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಕೊವಿಡ್ ತಂದಿಟ್ಟ ಸಮಸ್ಯೆಗಳು ಒಂದೆರಡಲ್ಲ. ಬಿಗ್ ಬಾಸ್ ಅರ್ಧದಲ್ಲಿ ನಿಲ್ಲೋಕೆ ಕೊವಿಡ್ ಕಾರಣವಾಗಿತ್ತು. ಈಗ ಕುಟುಂಬದವರನ್ನು ಕಳೆದುಕೊಂಡ ಬಗ್ಗೆ ಬಿಗ್ ಬಾಸ್ನಲ್ಲಿ ಹೇಳಿಕೊಂಡಿದ್ದಾರೆ.
ಬಿಗ್ಬಾಸ್ ಸೀಸನ್ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಬುಧವಾರ (ಜೂನ್ 23) ಮರಳಿ ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದಿದ್ದಾರೆ.
ಹೊರಗೆ ಕಳೆದ 43 ದಿನಗಳ ಕಾಲ ಏನೆಲ್ಲ ಆಗಿತ್ತು ಎಂಬುದನ್ನು ಸ್ಪರ್ಧಿಗಳು ಹೇಳಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ದಿವ್ಯಾ ಉರುಡುಗ, ‘ನಾನು ಚಿಕ್ಕಪ್ಪ ಮತ್ತು ಅಜ್ಜನನ್ನು ಕಳೆದುಕೊಂಡೆ. ಅಮ್ಮನ ತಂಗಿ ಗಂಡ, ಅಮ್ಮನ ಅಪ್ಪ ಕೊವಿಡ್ಗೆ ನಿಧನರಾದರು’ ಎಂದು ಭಾವುಕರಾದರು.
ಸೀಸನ್ 8 ಅರ್ಧಕ್ಕೆ ನಿಲ್ಲುವುದಕ್ಕೂ ಕೆಲ ವಾರ ಮೊದಲು ಕಿಚ್ಚ ಸುದೀಪ್ಗೆ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆ ಅವರು ಬಿಗ್ ಬಾಸ್ ನಡೆಸಿಕೊಡೋಕೆ ಸಾಧ್ಯವಾಗಿರಲಿಲ್ಲ. ಇದಾದ ನಂತರದಲ್ಲಿ ಲಾಕ್ಡೌನ್ ನಿಯಮಗಳಿಂದ ಸುದೀಪ್ ಬಿಗ್ ಬಾಸ್ ವೇದಿಕೆ ಏರಿರಲಿಲ್ಲ. ಈಗ ಅನೇಕ ತಿಂಗಳ ನಂತರದಲ್ಲಿ ಸುದೀಪ್ ಬಿಗ್ ಬಾಸ್ ವೇದಿಕೆ ಏರಿದ್ದಾರೆ. ಅವರ ಕೌಂಟರ್ ಮಾತು ಕೇಳಿ ಎಲ್ಲರೂ ಖುಷಿಯಾಗಿದ್ದಾರೆ.
ಇದನ್ನೂ ಓದಿ: Vaishnavi Gowda: ವೈಷ್ಣವಿಗೆ ಬಂದ ಮದುವೆ ಪ್ರಪೋಸಲ್ಸ್ ಸಂಖ್ಯೆ ಕೇಳಿ ಅಚ್ಚರಿಪಟ್ಟ ಕಿಚ್ಚ ಸುದೀಪ್
‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್ ಬಾಸ್ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ
Published On - 8:18 pm, Wed, 23 June 21