Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 8: ಬಿಗ್​ ಬಾಸ್​​​ನಿಂದ ಅರ್ಧಕ್ಕೆ ಹೊರಹೋದ ದಿವ್ಯಾ ಉರುಡುಗ ಹಿಂದಿರುಗಿ ಬರಲ್ಲ?

Divya Uruduga: ಶುಭಾ ಮನೆಯಲ್ಲಿ ಅಳುತ್ತಲೇ ದಿನ ಕಳೆದಿದ್ದಾರೆ. ದಿವ್ಯಾ ಒಬ್ಬಳೇ ನನಗೆ ಅಕ್ಕಾ ಎಂದು ಕರೆದಿದ್ದು. ಮನೆ ತುಂಬಾನೇ ಸೈಲೆಂಟ್​ ಆಗುತ್ತಿದೆ. ಈಗ ಮತ್ತೂ ಶಾಂತವಾದಂತೆ ಭಾಸವಾಗುತ್ತಿದೆ ಎಂದರು ಶುಭಾ.

Bigg Boss 8: ಬಿಗ್​ ಬಾಸ್​​​ನಿಂದ ಅರ್ಧಕ್ಕೆ ಹೊರಹೋದ ದಿವ್ಯಾ ಉರುಡುಗ ಹಿಂದಿರುಗಿ ಬರಲ್ಲ?
ದಿವ್ಯಾ ಉರುಡುಗ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 07, 2021 | 9:20 AM

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಹೀಗಾಗಿ, ಅವರಿಗೆ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಲಾಗಿದೆ. ಈಗ ಕೇಳಿ ಬರುತ್ತಿರುವ ಮಾತೇನೆಂದರೆ ದಿವ್ಯಾ ಹಿಂದಿರುಗಿ ಬಿಗ್​ ಬಾಸ್​ ಮನೆಗೆ ಬರುವುದಿಲ್ಲವಂತೆ. ಹೀಗೆಂದು ನಾವು ಹೇಳುತ್ತಿಲ್ಲ. ಅರವಿಂದ್​ ಕೆ.ಪಿ. ಅವರೇ ಹೀಗೆ ಹೇಳಿಕೊಂಡಿದ್ದಾರೆ.

ದಿವ್ಯಾ ಸುರೇಶ್​​ಗೆ ಚಿಕಿತ್ಸೆ ನೀಡಲು ವೈದ್ಯರ ಬಳಿಗೆ ಕರೆದುಕೊಂಡು ಹೋಗಲಾಗಿದೆ. ಇದರಿಂದಾಗಿ ಅರವಿಂದ್ ಬೇಸರ ಮಾಡಿಕೊಂಡಿದ್ದಾರೆ. ಮೇ 6ರ ಎಪಿಸೋಡ್​ನಲ್ಲಿ ಬಿಗ್ ಬಾಸ್ ಕಡೆಯಿಂದ ಇನ್ನೊಂದು ಆದೇಶ ಬಂದಿದೆ. ದಿವ್ಯಾ ಉರುಡುಗ ಅವರ ಸ್ಯೂಟ್​ಕೇಸ್​ ಪ್ಯಾಕ್ ಮಾಡಿ ಕೂಡಲೇ ಸ್ಟೋರ್ ರೂಮ್​ಗೆ ತಂದು ಇರಿಸಿ ಎಂದು ಸೂಚಿಸಲಾಗಿದೆ. ಇದು ಮನೆಯವರಿಗೆ ಶಾಕ್​ ನೀಡಿದೆ.

ಬಟ್ಟೆ ಪ್ಯಾಕ್​ ಮಾಡಿ ತನ್ನಿ ಎಂದು ಹೇಳಿದ್ದನ್ನು ಮನೆಯವರಿಗೆ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅವರು ಮತ್ತೆ ಮನೆಗೆ ಬರೋದು ಅನುಮಾನ ಎನ್ನುವ ಮಾತು ಕೇಳಿ ಬಂದವು. ಇದು ಅರವಿಂದ್​ಗೂ ಮನವರಿಕೆ ಆದಂತಿದೆ. ಚಕ್ರವರ್ತಿ ಚಂದ್ರಚೂಡ್​ ಬಳಿ ಮಾತನಾಡುತ್ತಾ, ದಿವ್ಯಾ ಕಂಡೀಷನ್​ ನೋಡಿದ್ರೆ ಅವರು ಮತ್ತೆ ಬರೋದು ಡೌಟ್​ ಇದೆ ಎನ್ನುತ್ತಲೇ ಕಣ್ಣೀರಾದರು.

ಶುಭಾ ಮನೆಯಲ್ಲಿ ಅಳುತ್ತಲೇ ದಿನ ಕಳೆದಿದ್ದಾರೆ. ದಿವ್ಯಾ ಒಬ್ಬಳೇ ನನಗೆ ಅಕ್ಕಾ ಎಂದು ಕರೆದಿದ್ದು. ಮನೆ ತುಂಬಾನೇ ಸೈಲೆಂಟ್​ ಆಗುತ್ತಿದೆ. ಈಗ ಮತ್ತೂ ಶಾಂತವಾದಂತೆ ಭಾಸವಾಗುತ್ತಿದೆ ಎಂದರು ಶುಭಾ. ಒಬ್ಬರನ್ನೊಬ್ಬರು ಪರಸ್ಪರ ಸಮಾಧಾನ ಮಾಡಿಕೊಳ್ಳಲು ಪ್ರಯತ್ನಿಸಿದರು.

ಈಗ ಅವರಿಗೆ ಟ್ರೀಟ್​ಮೆಂಟ್​ ಕೊಡ್ತಿದಾರೆ. ಅವರಿಗೆ ರೆಸ್ಟ್​ ಮಾಡೋಕೆ ಹೇಳಿರಬಹುದು. ಒಂದು ವಾರ ಬಿಟ್ಟು ಬಿಗ್​ ಬಾಸ್​ ಮನೆಗೆ ಅವರು ಬಂದರೂ ಬರಬಹುದು ಎನ್ನುವ ಮಾತು ಕೂಡ ಬಿಗ್​ ಬಾಸ್​ ಮನೆಯಲ್ಲಿ ಕೇಳಿ ಬಂತು. ದಿವ್ಯಾ ಹೋದ ನಂತರದಲ್ಲಿ ಅರವಿಂದ್​ ತುಂಬಾನೇ ಸೈಲೆಂಟ್​ ಆಗಿದ್ದು ಎದ್ದು ಕಾಣುತ್ತಿದೆ.

ಇದನ್ನೂ ಒದಿ: ದಿವ್ಯಾ ಮಾಡಿದ ತಪ್ಪಿಗೆ ಮಂಜುಗೆ ಶಿಕ್ಷೆ; ಗಳಗಳನೆ ಅತ್ತ ಗೆಳತಿ

ಬಿಗ್​ ಬಾಸ್​ನಲ್ಲಿ ದಿವ್ಯಾ ಉರುಡುಗ ಲಗೇಜ್​ ಪ್ಯಾಕ್​; ಕಣ್ಣೀರು ಹಾಕುತ್ತಿರುವ ಅರವಿಂದ್​

Published On - 7:17 am, Fri, 7 May 21

ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ