AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 8: ಬಿಗ್​ ಬಾಸ್​​​ನಿಂದ ಅರ್ಧಕ್ಕೆ ಹೊರಹೋದ ದಿವ್ಯಾ ಉರುಡುಗ ಹಿಂದಿರುಗಿ ಬರಲ್ಲ?

Divya Uruduga: ಶುಭಾ ಮನೆಯಲ್ಲಿ ಅಳುತ್ತಲೇ ದಿನ ಕಳೆದಿದ್ದಾರೆ. ದಿವ್ಯಾ ಒಬ್ಬಳೇ ನನಗೆ ಅಕ್ಕಾ ಎಂದು ಕರೆದಿದ್ದು. ಮನೆ ತುಂಬಾನೇ ಸೈಲೆಂಟ್​ ಆಗುತ್ತಿದೆ. ಈಗ ಮತ್ತೂ ಶಾಂತವಾದಂತೆ ಭಾಸವಾಗುತ್ತಿದೆ ಎಂದರು ಶುಭಾ.

Bigg Boss 8: ಬಿಗ್​ ಬಾಸ್​​​ನಿಂದ ಅರ್ಧಕ್ಕೆ ಹೊರಹೋದ ದಿವ್ಯಾ ಉರುಡುಗ ಹಿಂದಿರುಗಿ ಬರಲ್ಲ?
ದಿವ್ಯಾ ಉರುಡುಗ
ರಾಜೇಶ್ ದುಗ್ಗುಮನೆ
| Edited By: |

Updated on:May 07, 2021 | 9:20 AM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಹೀಗಾಗಿ, ಅವರಿಗೆ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಲಾಗಿದೆ. ಈಗ ಕೇಳಿ ಬರುತ್ತಿರುವ ಮಾತೇನೆಂದರೆ ದಿವ್ಯಾ ಹಿಂದಿರುಗಿ ಬಿಗ್​ ಬಾಸ್​ ಮನೆಗೆ ಬರುವುದಿಲ್ಲವಂತೆ. ಹೀಗೆಂದು ನಾವು ಹೇಳುತ್ತಿಲ್ಲ. ಅರವಿಂದ್​ ಕೆ.ಪಿ. ಅವರೇ ಹೀಗೆ ಹೇಳಿಕೊಂಡಿದ್ದಾರೆ.

ದಿವ್ಯಾ ಸುರೇಶ್​​ಗೆ ಚಿಕಿತ್ಸೆ ನೀಡಲು ವೈದ್ಯರ ಬಳಿಗೆ ಕರೆದುಕೊಂಡು ಹೋಗಲಾಗಿದೆ. ಇದರಿಂದಾಗಿ ಅರವಿಂದ್ ಬೇಸರ ಮಾಡಿಕೊಂಡಿದ್ದಾರೆ. ಮೇ 6ರ ಎಪಿಸೋಡ್​ನಲ್ಲಿ ಬಿಗ್ ಬಾಸ್ ಕಡೆಯಿಂದ ಇನ್ನೊಂದು ಆದೇಶ ಬಂದಿದೆ. ದಿವ್ಯಾ ಉರುಡುಗ ಅವರ ಸ್ಯೂಟ್​ಕೇಸ್​ ಪ್ಯಾಕ್ ಮಾಡಿ ಕೂಡಲೇ ಸ್ಟೋರ್ ರೂಮ್​ಗೆ ತಂದು ಇರಿಸಿ ಎಂದು ಸೂಚಿಸಲಾಗಿದೆ. ಇದು ಮನೆಯವರಿಗೆ ಶಾಕ್​ ನೀಡಿದೆ.

ಬಟ್ಟೆ ಪ್ಯಾಕ್​ ಮಾಡಿ ತನ್ನಿ ಎಂದು ಹೇಳಿದ್ದನ್ನು ಮನೆಯವರಿಗೆ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅವರು ಮತ್ತೆ ಮನೆಗೆ ಬರೋದು ಅನುಮಾನ ಎನ್ನುವ ಮಾತು ಕೇಳಿ ಬಂದವು. ಇದು ಅರವಿಂದ್​ಗೂ ಮನವರಿಕೆ ಆದಂತಿದೆ. ಚಕ್ರವರ್ತಿ ಚಂದ್ರಚೂಡ್​ ಬಳಿ ಮಾತನಾಡುತ್ತಾ, ದಿವ್ಯಾ ಕಂಡೀಷನ್​ ನೋಡಿದ್ರೆ ಅವರು ಮತ್ತೆ ಬರೋದು ಡೌಟ್​ ಇದೆ ಎನ್ನುತ್ತಲೇ ಕಣ್ಣೀರಾದರು.

ಶುಭಾ ಮನೆಯಲ್ಲಿ ಅಳುತ್ತಲೇ ದಿನ ಕಳೆದಿದ್ದಾರೆ. ದಿವ್ಯಾ ಒಬ್ಬಳೇ ನನಗೆ ಅಕ್ಕಾ ಎಂದು ಕರೆದಿದ್ದು. ಮನೆ ತುಂಬಾನೇ ಸೈಲೆಂಟ್​ ಆಗುತ್ತಿದೆ. ಈಗ ಮತ್ತೂ ಶಾಂತವಾದಂತೆ ಭಾಸವಾಗುತ್ತಿದೆ ಎಂದರು ಶುಭಾ. ಒಬ್ಬರನ್ನೊಬ್ಬರು ಪರಸ್ಪರ ಸಮಾಧಾನ ಮಾಡಿಕೊಳ್ಳಲು ಪ್ರಯತ್ನಿಸಿದರು.

ಈಗ ಅವರಿಗೆ ಟ್ರೀಟ್​ಮೆಂಟ್​ ಕೊಡ್ತಿದಾರೆ. ಅವರಿಗೆ ರೆಸ್ಟ್​ ಮಾಡೋಕೆ ಹೇಳಿರಬಹುದು. ಒಂದು ವಾರ ಬಿಟ್ಟು ಬಿಗ್​ ಬಾಸ್​ ಮನೆಗೆ ಅವರು ಬಂದರೂ ಬರಬಹುದು ಎನ್ನುವ ಮಾತು ಕೂಡ ಬಿಗ್​ ಬಾಸ್​ ಮನೆಯಲ್ಲಿ ಕೇಳಿ ಬಂತು. ದಿವ್ಯಾ ಹೋದ ನಂತರದಲ್ಲಿ ಅರವಿಂದ್​ ತುಂಬಾನೇ ಸೈಲೆಂಟ್​ ಆಗಿದ್ದು ಎದ್ದು ಕಾಣುತ್ತಿದೆ.

ಇದನ್ನೂ ಒದಿ: ದಿವ್ಯಾ ಮಾಡಿದ ತಪ್ಪಿಗೆ ಮಂಜುಗೆ ಶಿಕ್ಷೆ; ಗಳಗಳನೆ ಅತ್ತ ಗೆಳತಿ

ಬಿಗ್​ ಬಾಸ್​ನಲ್ಲಿ ದಿವ್ಯಾ ಉರುಡುಗ ಲಗೇಜ್​ ಪ್ಯಾಕ್​; ಕಣ್ಣೀರು ಹಾಕುತ್ತಿರುವ ಅರವಿಂದ್​

Published On - 7:17 am, Fri, 7 May 21

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ