AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಗೆ ಒಂಥರಾ ಆಗ್ತಿದೆ; ಅರವಿಂದ್​ ಮಾಡಿದ ಸೇವೆ ನೋಡಿ ದಿವ್ಯಾ ಉರುಡುಗ ನಾಚಿ ನೀರಾದರು

ದಿವ್ಯಾ ಉರುಡುಗ ಅವರಿಗೆ ಬಿಗ್​ ಬಾಸ್​ ಮನೆಯಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ವೈದ್ಯರು ಅವರಿಗೆ ಕೆಲ ಮಾತ್ರೆಗಳನ್ನು ಕೂಡ ಬರೆದುಕೊಟ್ಟಿದ್ದಾರೆ. ದಿವ್ಯಾ ಊಟ ಮಾಡಿದ ನಂತರದಲ್ಲಿ ಮಾತ್ರೆ ತಿನ್ನಿಸುತ್ತಿದ್ದಾರೆ. ಅರವಿಂದ್ ಸೇವೆ ಇಷ್ಟಕ್ಕೆ ನಿಂತಿಲ್ಲ.

ನಂಗೆ ಒಂಥರಾ ಆಗ್ತಿದೆ; ಅರವಿಂದ್​ ಮಾಡಿದ ಸೇವೆ ನೋಡಿ ದಿವ್ಯಾ ಉರುಡುಗ ನಾಚಿ ನೀರಾದರು
ದಿವ್ಯಾ ಉರುಡುಗ - ಅರವಿಂದ್​ ಕೆಪಿ
ರಾಜೇಶ್ ದುಗ್ಗುಮನೆ
| Edited By: |

Updated on: May 04, 2021 | 12:24 PM

Share

ಬಿಗ್​ ಬಾಸ್ ಮನೆಯಲ್ಲಿ ಅರವಿಂದ್​ ಕೆ.ಪಿ. ಹಾಗೂ ದಿವ್ಯಾ ಉರುಡುಗ ಅವರ ಪ್ರೇಮ್​ ಕಹಾನಿ ಎಲ್ಲರ ಗಮನ ಸೆಳೆಯುತ್ತಿದೆ. ನಮ್ಮಿಬ್ಬರ ನಡುವೆ ಇರೋದು ಕೇವಲ ಫ್ರೆಂಡ್​ಶಿಪ್​ ಎಂದು ದಿವ್ಯಾ ಸಾಕಷ್ಟು ಬಾರಿ ಸ್ಪಷ್ಟನೆ ನೀಡಿದ್ದಾರೆ. ಅವರು ಮಾತಿನಲ್ಲಿ ಏನೇ ಹೇಳಿದರೂ ಕೃತಿಯಲ್ಲಿ ಎಲ್ಲಾ ವಿಚಾರಗಳು ವೀಕ್ಷಕರಿಗೆ ಸ್ಪಷ್ಟವಾಗುತ್ತಿದೆ. ಮೇ 3ರಂದು ನಡೆದ ಘಟನೆ ಇದಕ್ಕೆ ಹೊಸ ಸೇರ್ಪಡೆ.

ದಿವ್ಯಾ ಉರುಡುಗ ಅವರಿಗೆ ಬಿಗ್​ ಬಾಸ್​ ಮನೆಯಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ವೈದ್ಯರು ಅವರಿಗೆ ಕೆಲ ಮಾತ್ರೆಗಳನ್ನು ಕೂಡ ಬರೆದುಕೊಟ್ಟಿದ್ದಾರೆ. ದಿವ್ಯಾ ಊಟ ಮಾಡಿದ ನಂತರದಲ್ಲಿ ಅರವಿಂದ್​ ಮಾತ್ರೆ ತಿನ್ನಿಸುತ್ತಿದ್ದಾರೆ. ಅಷ್ಟೇ ಅಲ್ಲ, ಅವರ ಕೇರಿಂಗ್​ ಜಾಸ್ತಿ ಆಗಿದೆ. ಇದು ದಿವ್ಯಾ ಅವರಿಗೂ ಗೊತ್ತಾಗುತ್ತಿದೆ.

ದಿವ್ಯಾಗೆ ಅನಾರೋಗ್ಯ ಕಾಡುತ್ತಿದೆ ಎಂಬುದನ್ನು ಗಮನಿಸಿದ ಅರವಿಂದ್, ಅವರ ಪ್ಯಾಂಟ್​ ತೊಳೆದಿದ್ದಾರೆ. ಇದನ್ನು ನೋಡಿದ ದಿವ್ಯಾ ಉರುಡುಗ ನಾಚಿಕೆ ಮಾಡಿಕೊಂಡಿದ್ದಾರೆ. ಯಾಕೆ ಹೀಗೆ ಮಾಡಿದ್ದು? ನಂಗೆ ಒಂಥರಾ ಆಗ್ತಿದೆ ಎಂದು ದಿವ್ಯಾ ಹೇಳಿಕೊಂಡರು. ಈ ವೇಳೆ ವೈಷ್ಣವಿ ಕೂಡ ಅಲ್ಲಿಯೇ ಇದ್ದರು. ನೀವಿಬ್ಬರೂ ಫ್ರೆಂಡ್ಸ್​ ಅಲ್ಲವಾ. ಫ್ರೆಂಡ್​ಶಿಪ್​ ಮೇಲೆ ತೊಳೆದುಕೊಟ್ಟಿದ್ದಾರೆ ಅಷ್ಟೆ. ನೀವು ಇನ್ನೊಂದು ದಿನ ಅವರ ಪ್ಯಾಂಟ್​ ತೊಳೆದುಕೊಡಿ ಎಂದರು ವೈಷ್ಣವಿ. ಹೌದು, ನಾನು ಹಾಗೆ ಮಾಡ್ತೀನಿ ಎಂದರು ದಿವ್ಯಾ.

ಬಿಗ್​ ಬಾಸ್​ ಮನೆಯಲ್ಲಿ ಸುದೀಪ್​ ವಾಯ್ಸ್​ ನೋಟ್​ ಕಳುಹಿಸಿದ್ದರು. ಈ ವೇಳೆ ದಿವ್ಯಾ ಅವರನ್ನು ಸುದೀಪ್​ ಪರೋಕ್ಷವಾಗಿ ಎಚ್ಚರಿಸಿದ್ದಾರೆ. ಆಟದ ಮೇಲೆ ಗಮನ ಹೆಚ್ಚಿರಲಿ. ಕೆಲವರು ಬಂದ ಉದ್ದೇಶವನ್ನೇ  ಮರೆಯುತ್ತಿದ್ದಾರೆ ಎಂದು ಹೇಳುವ ಮೂಲಕ ಅರವಿಂದ್ ಅವರ ಗುಂಗಿನಲ್ಲಿ ದಿವ್ಯಾ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬುದನ್ನು ನೆನಪಿಸಿದರು.

ಇದನ್ನೂ ಓದಿ: Kichcha Sudeep: ಸುದೀಪ್​ ಗುಣಮುಖರಾದ ಬೆನ್ನಲ್ಲೇ ಕಹಿ ಸುದ್ದಿ; ಈ ವಾರವೂ ಬಿಗ್ ಬಾಸ್​ಗೆ ಕಿಚ್ಚ ಗೈರು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?