AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಗೆ ಒಂಥರಾ ಆಗ್ತಿದೆ; ಅರವಿಂದ್​ ಮಾಡಿದ ಸೇವೆ ನೋಡಿ ದಿವ್ಯಾ ಉರುಡುಗ ನಾಚಿ ನೀರಾದರು

ದಿವ್ಯಾ ಉರುಡುಗ ಅವರಿಗೆ ಬಿಗ್​ ಬಾಸ್​ ಮನೆಯಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ವೈದ್ಯರು ಅವರಿಗೆ ಕೆಲ ಮಾತ್ರೆಗಳನ್ನು ಕೂಡ ಬರೆದುಕೊಟ್ಟಿದ್ದಾರೆ. ದಿವ್ಯಾ ಊಟ ಮಾಡಿದ ನಂತರದಲ್ಲಿ ಮಾತ್ರೆ ತಿನ್ನಿಸುತ್ತಿದ್ದಾರೆ. ಅರವಿಂದ್ ಸೇವೆ ಇಷ್ಟಕ್ಕೆ ನಿಂತಿಲ್ಲ.

ನಂಗೆ ಒಂಥರಾ ಆಗ್ತಿದೆ; ಅರವಿಂದ್​ ಮಾಡಿದ ಸೇವೆ ನೋಡಿ ದಿವ್ಯಾ ಉರುಡುಗ ನಾಚಿ ನೀರಾದರು
ದಿವ್ಯಾ ಉರುಡುಗ - ಅರವಿಂದ್​ ಕೆಪಿ
ರಾಜೇಶ್ ದುಗ್ಗುಮನೆ
| Edited By: |

Updated on: May 04, 2021 | 12:24 PM

Share

ಬಿಗ್​ ಬಾಸ್ ಮನೆಯಲ್ಲಿ ಅರವಿಂದ್​ ಕೆ.ಪಿ. ಹಾಗೂ ದಿವ್ಯಾ ಉರುಡುಗ ಅವರ ಪ್ರೇಮ್​ ಕಹಾನಿ ಎಲ್ಲರ ಗಮನ ಸೆಳೆಯುತ್ತಿದೆ. ನಮ್ಮಿಬ್ಬರ ನಡುವೆ ಇರೋದು ಕೇವಲ ಫ್ರೆಂಡ್​ಶಿಪ್​ ಎಂದು ದಿವ್ಯಾ ಸಾಕಷ್ಟು ಬಾರಿ ಸ್ಪಷ್ಟನೆ ನೀಡಿದ್ದಾರೆ. ಅವರು ಮಾತಿನಲ್ಲಿ ಏನೇ ಹೇಳಿದರೂ ಕೃತಿಯಲ್ಲಿ ಎಲ್ಲಾ ವಿಚಾರಗಳು ವೀಕ್ಷಕರಿಗೆ ಸ್ಪಷ್ಟವಾಗುತ್ತಿದೆ. ಮೇ 3ರಂದು ನಡೆದ ಘಟನೆ ಇದಕ್ಕೆ ಹೊಸ ಸೇರ್ಪಡೆ.

ದಿವ್ಯಾ ಉರುಡುಗ ಅವರಿಗೆ ಬಿಗ್​ ಬಾಸ್​ ಮನೆಯಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ವೈದ್ಯರು ಅವರಿಗೆ ಕೆಲ ಮಾತ್ರೆಗಳನ್ನು ಕೂಡ ಬರೆದುಕೊಟ್ಟಿದ್ದಾರೆ. ದಿವ್ಯಾ ಊಟ ಮಾಡಿದ ನಂತರದಲ್ಲಿ ಅರವಿಂದ್​ ಮಾತ್ರೆ ತಿನ್ನಿಸುತ್ತಿದ್ದಾರೆ. ಅಷ್ಟೇ ಅಲ್ಲ, ಅವರ ಕೇರಿಂಗ್​ ಜಾಸ್ತಿ ಆಗಿದೆ. ಇದು ದಿವ್ಯಾ ಅವರಿಗೂ ಗೊತ್ತಾಗುತ್ತಿದೆ.

ದಿವ್ಯಾಗೆ ಅನಾರೋಗ್ಯ ಕಾಡುತ್ತಿದೆ ಎಂಬುದನ್ನು ಗಮನಿಸಿದ ಅರವಿಂದ್, ಅವರ ಪ್ಯಾಂಟ್​ ತೊಳೆದಿದ್ದಾರೆ. ಇದನ್ನು ನೋಡಿದ ದಿವ್ಯಾ ಉರುಡುಗ ನಾಚಿಕೆ ಮಾಡಿಕೊಂಡಿದ್ದಾರೆ. ಯಾಕೆ ಹೀಗೆ ಮಾಡಿದ್ದು? ನಂಗೆ ಒಂಥರಾ ಆಗ್ತಿದೆ ಎಂದು ದಿವ್ಯಾ ಹೇಳಿಕೊಂಡರು. ಈ ವೇಳೆ ವೈಷ್ಣವಿ ಕೂಡ ಅಲ್ಲಿಯೇ ಇದ್ದರು. ನೀವಿಬ್ಬರೂ ಫ್ರೆಂಡ್ಸ್​ ಅಲ್ಲವಾ. ಫ್ರೆಂಡ್​ಶಿಪ್​ ಮೇಲೆ ತೊಳೆದುಕೊಟ್ಟಿದ್ದಾರೆ ಅಷ್ಟೆ. ನೀವು ಇನ್ನೊಂದು ದಿನ ಅವರ ಪ್ಯಾಂಟ್​ ತೊಳೆದುಕೊಡಿ ಎಂದರು ವೈಷ್ಣವಿ. ಹೌದು, ನಾನು ಹಾಗೆ ಮಾಡ್ತೀನಿ ಎಂದರು ದಿವ್ಯಾ.

ಬಿಗ್​ ಬಾಸ್​ ಮನೆಯಲ್ಲಿ ಸುದೀಪ್​ ವಾಯ್ಸ್​ ನೋಟ್​ ಕಳುಹಿಸಿದ್ದರು. ಈ ವೇಳೆ ದಿವ್ಯಾ ಅವರನ್ನು ಸುದೀಪ್​ ಪರೋಕ್ಷವಾಗಿ ಎಚ್ಚರಿಸಿದ್ದಾರೆ. ಆಟದ ಮೇಲೆ ಗಮನ ಹೆಚ್ಚಿರಲಿ. ಕೆಲವರು ಬಂದ ಉದ್ದೇಶವನ್ನೇ  ಮರೆಯುತ್ತಿದ್ದಾರೆ ಎಂದು ಹೇಳುವ ಮೂಲಕ ಅರವಿಂದ್ ಅವರ ಗುಂಗಿನಲ್ಲಿ ದಿವ್ಯಾ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬುದನ್ನು ನೆನಪಿಸಿದರು.

ಇದನ್ನೂ ಓದಿ: Kichcha Sudeep: ಸುದೀಪ್​ ಗುಣಮುಖರಾದ ಬೆನ್ನಲ್ಲೇ ಕಹಿ ಸುದ್ದಿ; ಈ ವಾರವೂ ಬಿಗ್ ಬಾಸ್​ಗೆ ಕಿಚ್ಚ ಗೈರು

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ