AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಖುಷಿಯಾಗಿದ್ದೇವೆ, ನೀವು ಬೇಸರಗೊಳ್ಳಬೇಡಿ’; ವಿಡಿಯೋ ಮೂಲಕ ಫ್ಯಾನ್ಸ್​ಗೆ ಮನವಿ ಮಾಡಿದ ಆಮಿರ್​-ಕಿರಣ್​

ವಿಚ್ಛೇದನದ ನಂತರ ಆಮಿರ್ ಹಾಗೂ ಕಿರಣ್​ ವಿಶೇಷ ವಿಡಿಯೋ ಒಂದನ್ನು ಮಾಡಿದ್ದಾರೆ. ಅದರಲ್ಲಿ ಅಭಿಮಾನಿಗಳ ಬಳಿ ಬೇಸರ ಮಾಡಿಕೊಳ್ಳದಂತೆ ಮನವಿ ಮಾಡಿದ್ದಾರೆ.

‘ನಾವು ಖುಷಿಯಾಗಿದ್ದೇವೆ, ನೀವು ಬೇಸರಗೊಳ್ಳಬೇಡಿ’; ವಿಡಿಯೋ ಮೂಲಕ ಫ್ಯಾನ್ಸ್​ಗೆ ಮನವಿ ಮಾಡಿದ ಆಮಿರ್​-ಕಿರಣ್​
ಆಮಿರ್​-ಕಿರಣ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 04, 2021 | 4:51 PM

Share

ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ ವಿಚ್ಛೇದನ ಪಡೆದುಕೊಂಡಿರುವ ಸುದ್ದಿ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ದಂಪತಿಯ ನಿರ್ಧಾರವನ್ನು ಅಭಿಮಾನಿಗಳು ಬೇಸರದಿಂದ ಪ್ರಶ್ನೆ ಮಾಡಿದ್ದಾರೆ. ಈ ಕಾರಣಕ್ಕೆ ಆಮಿರ್ ಹಾಗೂ ಕಿರಣ್​ ವಿಶೇಷ ವಿಡಿಯೋ ಒಂದನ್ನು ಮಾಡಿದ್ದಾರೆ. ಅದರಲ್ಲಿ ಅಭಿಮಾನಿಗಳ ಬಳಿ ಬೇಸರ ಮಾಡಿಕೊಳ್ಳದಂತೆ ಮನವಿ ಮಾಡಿದ್ದಾರೆ.

ಪಾಪರಾಜಿಯ ಖಾತೆಯೊಂದರಲ್ಲಿ ಆಮಿರ್​ ಖಾನ್​ ಹಾಗೂ ಕಿರಣ್​ ರಾವ್​ ಮಾತನಾಡಿರುವ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. ‘ವಿಚ್ಛೇದನ ಸುದ್ದಿಯಿಂದ ನೀವು ಶಾಕ್​ಗೆ ಒಳಗಾಗಿದ್ದೀರಿ ಹಾಗೂ ಬೇಸರಗೊಂಡಿದ್ದೀರಿ. ಆದರೆ, ನಮ್ಮ ನಿರ್ಧಾರದಿಂದ ನಮಗೆ ಖುಷಿ ಇದೆ. ನಾವು ಒಂದೇ ಕುಟುಂಬದವರು’ ಎಂದಿದ್ದಾರೆ ಆಮಿರ್​.

‘ನಮ್ಮ ಸಂಬಂಧದಲ್ಲಿ ಬದಲಾವಣೆ ಆಗಿದೆ. ಆದರೆ, ನಾವು ಒಬ್ಬರಿಗೊಬ್ಬರು ಇದ್ದೇವೆ. ಆದ್ದರಿಂದ ದಯವಿಟ್ಟು ಬೇರೆ ರೀತಿಯಲ್ಲಿ ಯೋಚಿಸಬೇಡಿ. ಪಾನಿ ಫೌಂಡೇಷನ್​ ನಮ್ಮ ಮಗು ಇದ್ದಂತೆ. ಅದನ್ನು ನಾವಿಬ್ಬರೂ ಮುಂದುವರಿಸಿಕೊಂಡು ಹೋಗುತ್ತೇವೆ. ನಾವು ಯಾವಾಗಲೂ ಒಂದು ಕುಟುಂಬದಂತೆ. ದಯವಿಟ್ಟು ನಮ್ಮ ಸಂತೋಷಕ್ಕಾಗಿ ಪ್ರಾರ್ಥಿಸಿ. ನಮಗೆ ಇಷ್ಟನ್ನು ಮಾತ್ರ ಹೇಳೋಕೆ ಸಾಧ್ಯ’ ಎಂದಿದ್ದಾರೆ.

ಆಮಿರ್​ ಖಾನ್​ ಹಾಗೂ ಕಿರಣ್​ ರಾವ್​ ವಿಚ್ಛೇದನ ಪಡೆದುಕೊಂಡಿದ್ದರ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದರು. ‘ಈ 15 ವರ್ಷಗಳ ಜೀವನವನ್ನು ನಾವು ಖುಷಿ ಮತ್ತು ಸಂತೋಷದಿಂದ ಕಳೆದಿದ್ದೇವೆ. ನಂಬಿಕೆ, ಪ್ರೀತಿ ಮತ್ತು ಗೌರವದಿಂದ ನಮ್ಮ ಸಂಬಂಧ ಬೆಳೆದಿತ್ತು. ಈಗ ನಾವು ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿದ್ದೇವೆ. ಇನ್ಮುಂದೆ ನಾವು ಪತಿ-ಪತ್ನಿ ಅಲ್ಲ. ಆದರೆ ಅಜಾದ್​ನ ಪಾಲಕರಾಗಿ, ಆ ಮೂಲಕ ಕುಟುಂಬದವರಾಗಿ ಇರುತ್ತೇವೆ. ಬೇರೆಯಾಗುವ ಬಗ್ಗೆ ಕೆಲವು ಸಮಯದ ಹಿಂದೆಯೇ ಯೋಚಿಸಿದ್ದೆವು. ಮಗನನ್ನು ಜೊತೆಯಾಗಿ ಬೆಳೆಸುತ್ತೇವೆ’ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಕಿರಣ್ ಜತೆ ಆಮಿರ್ ಮದುವೆ ಆಗೋ ಬಗ್ಗೆ 15 ವರ್ಷಗಳ ಹಿಂದೆಯೇ ಅಸಮಾಧಾನ ಹೊರ ಹಾಕಿದ್ದರು ಈ ನಟಿ

‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ

Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು