Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಹಮಾನ್ ಮಾಜಿ ಪತ್ನಿ ಎಂದಿದ್ದಕ್ಕೆ ಬೇಸರ ಮಾಡಿಕೊಂಡ ಸೈರಾ ಬಾನು

ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರು ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ನಂತರ ಡಿಸ್ಚಾರ್ಜ್ ಮಾಡಿದ್ದಾರೆ. ಅವರ ಪತ್ನಿ ಸೈರಾ ಬಾನು ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿ, ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ವದಂತಿಗಳನ್ನು ನಿರಾಕರಿಸಿದ್ದಾರೆ. ಅವರು ನಿರ್ಜಲೀಕರಣದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ರೆಹಮಾನ್ ಮಾಜಿ ಪತ್ನಿ ಎಂದಿದ್ದಕ್ಕೆ ಬೇಸರ ಮಾಡಿಕೊಂಡ ಸೈರಾ ಬಾನು
ರೆಹಮಾನ್ ಮಾಜಿ ಪತ್ನಿ ಎಂದಿದ್ದಕ್ಕೆ ಬೇಸರ ಮಾಡಿಕೊಂಡ ಸೈರಾ ಬಾನು
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Mar 17, 2025 | 1:01 PM

ಸಂಗೀತ ಸಂಯೋಜಕ ಎಆರ್ ರೆಹಮಾನ್ (AR Rahman) ಭಾನುವಾರ (ಮಾರ್ಚ್ 16) ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎದೆ ನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ವೈದ್ಯರು ಅವರಿಗೆ ಕೆಲವು ಪರೀಕ್ಷೆಗಳನ್ನು ನಡೆಸಿ ಚಿಕಿತ್ಸೆಯ ನಂತರ ಬಿಡುಗಡೆ ಮಾಡಿದರು. ಈಗ ಅವರ ಪತ್ನಿ ಸೈರಾ ಬಾನು ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅದೇ ರೀತಿ, ‘ದಯವಿಟ್ಟು ನನ್ನನ್ನು ರೆಹಮಾನ್ ಅವರ ಮಾಜಿ ಪತ್ನಿ ಎಂದು ಕರೆಯಬೇಡಿ’ ಎಂದು ಅವರು ಮಾಧ್ಯಮಗಳಿಗೆ ವಿನಂತಿಸಿದ್ದಾರೆ.

ಎ. ಆರ್. ರೆಹಮಾನ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಲು ಸೈರಾ ಬಾನು ಧ್ವನಿ ಟಿಪ್ಪಣಿ ಕಳುಹಿಸಿದ್ದಾರೆ. ‘ಅಸ್ಸಲಾಮುಅಲೈಕುಂ, ನಾನು ಸಾಯಿರಾ ರೆಹಮಾನ್ ಮಾತನಾಡುತ್ತಿದ್ದೇನೆ. ಎ. ಆರ್. ರೆಹಮಾನ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆಂದು ನನಗೆ ತಿಳಿಸಲಾಗಿದೆ. ಅಲ್ಲಾಹನ ದಯೆಯಿಂದ, ಅವರು ಈಗ ಚೆನ್ನಾಗಿದ್ದಾರೆ’ ಎಂದಿದ್ದಾರೆ ಸೈರಾ.

‘ನಾವು ಅಧಿಕೃತವಾಗಿ ಬೇರ್ಪಟ್ಟಿಲ್ಲ. ನಾವು ಇನ್ನೂ ಗಂಡ ಹೆಂಡತಿ. ನನ್ನ ಆರೋಗ್ಯದ ಕಾರಣ ನಾವು ಸ್ವಲ್ಪ ಕಾಲ ಬೇರೆಯಾಗಬೇಕಾಯಿತು. ಕಳೆದ ಎರಡು ವರ್ಷಗಳಿಂದ ನನಗೆ ಆರೋಗ್ಯ ಸರಿಯಿಲ್ಲ. ದಯವಿಟ್ಟು ನನ್ನನ್ನು ಮಾಜಿ ಪತ್ನಿ ಎಂದು ಕರೆಯಬೇಡಿ ಎಂದು ಮಾಧ್ಯಮಗಳಲ್ಲಿ ವಿನಂತಿಸುತ್ತೇನೆ. ನಾವು ಬೇರೆ ಬೇರೆಯಾಗಿ ವಾಸಿಸುತ್ತೇವೆ. ಆದರೆ ನನ್ನ ಪ್ರಾರ್ಥನೆಗಳು ಯಾವಾಗಲೂ ಅವರೊಂದಿಗೆ ಇರುತ್ತದೆ. ರೆಹಮಾನ್ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಮತ್ತು ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ನಾನು ಅವರ ಕುಟುಂಬಕ್ಕೆ ಹೇಳಲು ಬಯಸುತ್ತೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
Breaking: ಎಆರ್ ರೆಹಮಾನ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Image
‘ರೆಹಮಾನ್ ವಜ್ರದಂತೆ, ಅವರ ಬಗ್ಗೆ ಕೆಟ್ಟದ್ದನ್ನು ಮಾತನಾಡಬೇಡಿ’; ಸೈರಾ ಮನವಿ
Image
ನಾಚಿಕೆ ಸ್ವಭಾವದ ರೆಹಮಾನ್​ಗೆ ಸೈರಾ ಬಾನು ಸಿಕ್ಕಿದ್ದು ಹೇಗೆ?
Image
ಎಆರ್ ರೆಹಮಾನ್ ವಿಚ್ಛೇದನ: ಸೈರಾ ಬಾನು ಜೊತೆಗಿನ 29 ವರ್ಷಗಳ ದಾಂಪತ್ಯ ಅಂತ್ಯ

ಮತ್ತೊಂದೆಡೆ, ಚೆನ್ನೈನ ಅಪೋಲೋ ಆಸ್ಪತ್ರೆಯು ಆರ್. ರೆಹಮಾನ್ ಅವರ ಆರೋಗ್ಯದ ಬಗ್ಗೆ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ‘ನಿರ್ಜಲೀಕರಣದ ಕಾರಣದಿಂದಾಗಿ ರೆಹಮಾನ್ ಅವರನ್ನು ಭಾನುವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿಯಮಿತ ತಪಾಸಣೆಯ ನಂತರ ಅವರನ್ನು ಬಿಡುಗಡೆ ಮಾಡಲಾಯಿತು’ ಎಂದಿದೆ.

ಇದನ್ನೂ ಓದಿ: ‘ರೆಹಮಾನ್ ವಜ್ರದಂತೆ, ಅವರ ಬಗ್ಗೆ ಕೆಟ್ಟದ್ದನ್ನು ಮಾತನಾಡಬೇಡಿ’; ಸೈರಾ ಬಾನು ಮನವಿ

ಎ. ಆರ್. ರೆಹಮಾನ್ ಅವರ ಮಗ ಅಮೀನ್ ಕೂಡ ತಮ್ಮ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಎಲ್ಲಾ ಅಭಿಮಾನಿಗಳು, ಕುಟುಂಬ ಮತ್ತು ಹಿತೈಷಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ನನ್ನ ತಂದೆ ನಿರ್ಜಲೀಕರಣದಿಂದಾಗಿ ದುರ್ಬಲರಾಗಿದ್ದರು. ಹಾಗಾಗಿ ನಾವು ಅವರ ನಿಯಮಿತ ಪರೀಕ್ಷೆಗಳಿಗೆ ಒಳಪಡಿಸಿದೆವು. ಅವರು ಈಗ ಚೆನ್ನಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್