RRR: ಹಾಲಿವುಡ್​​ ಜನಪ್ರಿಯ ಬರಹಗಾರನಿಂದ ‘ಆರ್​ಆರ್​ಆರ್​​’ಗೆ ಶಹಬ್ಬಾಸ್​ಗಿರಿ; ಚಿತ್ರ ನೋಡಿ ಹೇಳಿದ್ದೇನು ಗೊತ್ತಾ?

C.Robert Cargill | SS Rajamouli: ‘ಆರ್​ಆರ್​​ಆರ್​’ ಚಿತ್ರಕ್ಕೆ ಹಾಲಿವುಡ್​​ನ ಖ್ಯಾತ ಬರಹಗಾರನಿಂದ ವಿಶೇಷ ಮನ್ನಣೆ ಸಿಕ್ಕಿದೆ. ‘ಡಾಕ್ಟರ್ ಸ್ಟ್ರೇಂಜ್’ ಫ್ರಾಂಚೈಸ್​ ಬರಹಗಾರ ಸಿ.ರಾಬರ್ಟ್​​​ ಕಾರ್ಗಿಲ್​​ ಚಿತ್ರ ನೋಡಿ ಸಂತಸ ಹಂಚಿಕೊಂಡಿದ್ದಾರೆ. ಅವರು ಹೇಳಿದ್ದೇನು? ಇಲ್ಲಿದೆ ನೋಡಿ.

RRR: ಹಾಲಿವುಡ್​​ ಜನಪ್ರಿಯ ಬರಹಗಾರನಿಂದ ‘ಆರ್​ಆರ್​ಆರ್​​’ಗೆ ಶಹಬ್ಬಾಸ್​ಗಿರಿ; ಚಿತ್ರ ನೋಡಿ ಹೇಳಿದ್ದೇನು ಗೊತ್ತಾ?
ಸಿ.ರಾಬರ್ಟ್​​ ಕಾರ್ಗಿಲ್​ (ಎಡ ಚಿತ್ರ), ‘ಆರ್​ಆರ್​ಆರ್​’ ಪೋಸ್ಟರ್​ (ಬಲ ಚಿತ್ರ)
Follow us
| Updated By: shivaprasad.hs

Updated on: Jun 08, 2022 | 8:25 AM

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ (RRR Movie) ಚಿತ್ರ ದೇಶ-ವಿದೇಶದಲ್ಲಿ ಹೆಸರು ಮಾಡುತ್ತಿದ್ದು. ರಿಲೀಸ್ ಆಗಿ ಬಹಳಷ್ಟು ಸಮಯವಾದರೂ ಕೂಡ ಜನರು ಇಷ್ಟಪಟ್ಟು ಚಿತ್ರಗಳನ್ನು ನೋಡುತ್ತಿದ್ದಾರೆ. ವಿಶೇಷವಾಗಿ ನೆಟ್​​ಫ್ಲಿಕ್ಸ್​​ನಲ್ಲಿ ಚಿತ್ರ ತೆರೆಕಂಡ ಮೇಲೆ ಇದು ವಿದೇಶಿಗರ ಗಮನ ಸೆಳೆದಿದೆ. ರಾಮ್​ ಚರಣ್ (Ram Charan) ಹಾಗೂ ಜ್ಯೂ.ಎನ್​ಟಿಆರ್ (Jr NTR)​​ ನಟನೆಯ ಚಿತ್ರವನ್ನು ಕೆಲ ವಿದೇಶಿಗರು ತಮ್ಮದೇ ದೃಷ್ಟಿಯಲ್ಲಿ ವಿಶ್ಲೇಷಿಸಿದ್ದು ಸಖತ್ ಸುದ್ದಿಯಾಗಿತ್ತು. ಇದೀಗ ‘ಆರ್​ಆರ್​​ಆರ್​’ ಚಿತ್ರಕ್ಕೆ ಹಾಲಿವುಡ್​​ನ ಖ್ಯಾತ ಬರಹಗಾರನಿಂದ ವಿಶೇಷ ಮನ್ನಣೆ ಸಿಕ್ಕಿದೆ. ಹಾಲಿವುಡ್​ನಲ್ಲಿ ‘ಡಾಕ್ಟರ್ ಸ್ಟ್ರೇಂಜ್’ (Doctor Strange) ಸರಣಿ ಅಪಾರ ಜನಪ್ರಿಯತೆ ಗಳಿಸಿದೆ. ಇತ್ತೀಚೆಗೆ ಆ ಫ್ರಾಂಚೈಸ್​ನ ಎರಡನೇ ಚಿತ್ರ ರಿಲೀಸ್ ಆಗಿದ್ದು, ಎಲ್ಲೆಡೆ ಅತ್ಯುತ್ತಮ ಪ್ರತಿಕ್ರಿಯೆ ಗಳಿಸಿಕೊಳ್ಳುತ್ತಿದೆ. ಆ ಚಿತ್ರಗಳ ಸಹ-ಬರಹಗಾರ ಸಿ.ರಾಬರ್ಟ್​​ ಕಾರ್ಗಿಲ್ ಇದೀಗ ‘ಆರ್​ಆರ್​ಆರ್​’ ಚಿತ್ರ ನೋಡಿ ಮೆಚ್ಚಿದ್ದಾರೆ.

ರಾಬರ್ಟ್​​ ತಮ್ಮ ಟ್ವಿಟರ್​ ಖಾತೆಯಲ್ಲಿ ಚಿತ್ರ ನೋಡಿ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ‘‘ಸ್ನೇಹಿತರು ಹೇಳಿದ ನಂತರ ಚಿತ್ರ ವೀಕ್ಷಿಸಿದೆ. ನಾನು ನೋಡಿದ್ದರಲ್ಲೇ ಇದು ಅತ್ಯಂತ ಪ್ರಾಮಾಣಿಕವಾದ ಪ್ರಯತ್ನ ಹಾಗೂ ಅದ್ಭುತವಾದ ಬ್ಲಾಕ್​ಬಸ್ಟರ್​​​ ಚಿತ್ರ. ಈ ವಾರ ಮತ್ತೊಮ್ಮೆ ಚಿತ್ರ ವೀಕ್ಷಿಸುತ್ತೇನೆ’’ ಎಂದು ರಾಬರ್ಟ್​​ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​
Image
Shilpa Shetty Birthday: ಶಿಲ್ಪಾ ಶೆಟ್ಟಿಗೆ ಬರ್ತ್​ಡೇ ಸಂಭ್ರಮ; ಆ ಒಂದು ವಿಚಾರಕ್ಕೆ ಭಿನ್ನವಾಗಿ ನಿಲ್ಲುತ್ತಾರೆ ಕರಾವಳಿ ಬೆಡಗಿ
Image
ಚಿರುಗೆ ಬೆಲ್ಟ್‌ನಲ್ಲಿ ಹೊಡೆದ ಘಟನೆ ನೆನೆದ ಅರ್ಜುನ್ ಸರ್ಜಾ
Image
‘ಕೆಲವೊಂದು ಯುದ್ಧಗಳನ್ನು ನಾನೇ ಗೆಲ್ಲಬೇಕಿದೆ’; ಸಹಾಯ ಮಾಡಲು ಬಂದ ಹರ್ಷನಿಗೆ ಒಂದೇ ಮಾತಲ್ಲಿ ಉತ್ತರಿಸಿದ ಭುವಿ

ರಾಬರ್ಟ್​​ ಟ್ವೀಟ್​ಗೆ ಹಲವು ಜನ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲಿ ಒಂದು ಕಾಮೆಂಟ್​ಗೆ ಪ್ರತಿಕ್ರಿಯೆ ನೀಡುತ್ತಾ ರಾಬರ್ಟ್​​ ಅವರು, ‘ಚಿತ್ರವನ್ನು ಮೂಲ ಭಾಷೆಯಲ್ಲಿ ಮತ್ತೊಮ್ಮೆ ನೋಡಬೇಕು’ ಎಂದು ಹೇಳಿಕೊಂಡಿದ್ದಾರೆ.

ಸಿ.ರಾಬರ್ಟ್​​ ಕಾರ್ಗಿಲ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಬಾಕ್ಸಾಫೀಸ್​ನಲ್ಲಿ ಇದುವರೆಗೆ ಸುಮಾರು 1,150 ಕೋಟಿ ರೂ ಗೂ ಅಧಿಕ ಮೊತ್ತವನ್ನು ಚಿತ್ರ ಬಾಚಿಕೊಂಡಿದೆ. ವಿಎಫ್​ಎಕ್ಸ್​ ತಂತ್ರಜ್ಞಾನವನ್ನು ಹೆಚ್ಚಾಗಿ ಬಳಸಲಾಗಿರುವ ಈ ಚಿತ್ರದಲ್ಲಿ ರಾಮ್​ ಚರಣ್, ಜ್ಯೂ ಎನ್​ಟಿಆರ್​​ ಜತೆಗೆ ಆಲಿಯಾ ಭಟ್, ಅಜಯ್ ದೇವಗನ್, ಶ್ರಿಯಾ ಶರಣ್ ಮೊದಲಾದವರು ಅಭಿನಯಿಸಿದ್ದಾರೆ.

ಕಳೆದ ತಿಂಗಳು ಓಟಿಟಿಗೆ ‘ಆರ್​ಆರ್​ಆರ್​’ ಕಾಲಿಟ್ಟಿತ್ತು. ನೆಟ್​​ಫ್ಲಿಕ್ಸ್​ನಲ್ಲಿ ಹಿಂದಿ ಅವತರಣಿಕೆ ಪ್ರದರ್ಶನವಾಗುತ್ತಿದೆ. ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡ ಅವತರಣಿಕೆಗಳು ಜೀ5ನಲ್ಲಿ ಬಿತ್ತರವಾಗುತ್ತಿವೆ. ನೆಟ್​ಫ್ಲಿಕ್ಸ್​​ನಲ್ಲಿ ಈ ಚಿತ್ರ ಟ್ರೆಂಡಿಂಗ್ ಪಟ್ಟಿಯಲ್ಲಿದ್ದು, ಇಂಗ್ಲೀಷ್ ಅಲ್ಲದ ಭಾಷೆಗಳಲ್ಲಿ ಮೊದಲ ಸಾಲಿನಲ್ಲಿತ್ತು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು