AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಗಳಿಗೆ ಚಿಕಿತ್ಸೆ ನೀಡೋದನ್ನು ನಿಮ್ಮಿಂದ ಕಲಿಯಬೇಕಿಲ್ಲ; ಸೋನು ಸೂದ್​ ವಿರುದ್ಧ ತಿರುಗಿಬಿದ್ದ ವೈದ್ಯರು

ಕೊರನಾ ಮೊದಲನೇ ಅಲೆ ಸಂದರ್ಭದಲ್ಲಿ ಸೋನು ಸೂದ್​ ಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿದ್ದರು. ಎರಡನೇ ಅಲೆ ಸಂದರ್ಭದಲ್ಲೂ ಅವರು ಅದನ್ನು ಮುಂದುವರಿಸಿದ್ದಾರೆ. ಬೆಡ್​ ಸಿಗದವರಿಗೆ ಬೆಡ್​ ನೀಡುತ್ತಿದ್ದಾರೆ.

ರೋಗಿಗಳಿಗೆ ಚಿಕಿತ್ಸೆ ನೀಡೋದನ್ನು ನಿಮ್ಮಿಂದ ಕಲಿಯಬೇಕಿಲ್ಲ; ಸೋನು ಸೂದ್​ ವಿರುದ್ಧ ತಿರುಗಿಬಿದ್ದ ವೈದ್ಯರು
ಸೋನು ಸೂದ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: May 21, 2021 | 7:28 AM

ಬಾಲಿವುಡ್​ ನಟ ಸೋನು ಸೂದ್​ ಕೊವಿಡ್​ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿದ್ದಾರೆ. ಎಲ್ಲಾ ಸ್ಟಾರ್​ಗಳಿಗಿಂತ ಮುಂದೆ ನಿಂತು ಅವರು ಸಹಾಯ ಮಾಡುತ್ತಿದ್ದಾರೆ. ಆದರೆ, ಒಂದು ವಿಚಾರಕ್ಕೆ ಸೋನು ಸೂದ್​ ವಿರುದ್ಧ ವೈದ್ಯರು ತಿರುಗಿ ಬಿದ್ದಿದ್ದಾರೆ. ರೋಗಿಗಳಿಗೆ ಚಿಕಿತ್ಸೆ ನೀಡೋದನ್ನ ನಿಮ್ಮಿಂದ ಕಲಿಯಬೇಕಿಲ್ಲ ಎಂದು ವೈದ್ಯರುಗಳು ನೇರವಾಗಿಯೇ ಹೇಳಿದ್ದಾರೆ.

ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ಸೋನು ಸೂದ್​ ಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿದ್ದರು. ಎರಡನೇ ಅಲೆ ಸಂದರ್ಭದಲ್ಲೂ ಅವರು ಅದನ್ನು ಮುಂದುವರಿಸಿದ್ದಾರೆ. ಬೆಡ್​ ಸಿಗದವರಿಗೆ ಬೆಡ್​ ನೀಡುತ್ತಿದ್ದಾರೆ. ಆಮ್ಲಜನಕದ ಕೊರತೆ ಎದುರಾದರೆ ಅದನ್ನು ಪೂರೈಸುತ್ತಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಆದರೆ, ಇತ್ತೀಚೆಗೆ ಅವರು ಮಾಡಿದ ಟ್ವೀಟ್​ ಬಗ್ಗೆ ಕೆಲವರು ಅಸಮಾಧಾನ ಹೊರ ಹಾಕಿದ್ದಾರೆ.

ಮಂಗಳವಾರ (ಮೇ 18) ಸಂಜೆ ಟ್ವೀಟ್​ ಮಾಡಿದ್ದ ಸೋನು, ಒಂದು ಸರಳ ಪ್ರಶ್ನೆ. ಒಂದು ನಿರ್ದಿಷ್ಟ ಇಂಜೆಕ್ಷನ್​ ಎಲ್ಲಿಯೂ ಲಭ್ಯವಿಲ್ಲ ಎಂದು ಎಲ್ಲರಿಗೂ ತಿಳಿದಾಗ, ಪ್ರತೀ ವೈದ್ಯರು ಅದೇ ಇಂಜೆಕ್ಷನ್ ಮಾತ್ರ ಏಕೆ ಶಿಫಾರಸು ಮಾಡುತ್ತಾರೆ? ಅದಕ್ಕೆ ಬದಲಾಗಿ ಬೇರೆ ಔಷಧ ಬಳಸಿ ಏಕೆ ಜೀವ ಉಳಿಸಬಾರದು ಎಂದು ಪ್ರಶ್ನೆ ಮಾಡಿದ್ದರು.

ದೇಶದಲ್ಲಿ ರೆಮಿಡಿಸಿವರ್​ ಹೆಸರಿನ ಇಂಜೆಕ್ಷನ್​ ಕೊರತೆ ಉಂಟಾಗಿದೆ. ಈ ಇಂಜೆಕ್ಷನ್​ ಕಾಳಸಂತೆಯಲ್ಲಿ ಕನಿಷ್ಠ 20-30 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ. ಇದೇ ಇಂಜೆಕ್ಷನ್​ಅನ್ನು ಎಲ್ಲಾ ವೈದ್ಯರು ಶಿಫಾರಸು ಮಾಡುತ್ತಿದ್ದಾರೆ. ಈ ದೃಷ್ಟಿಯಿಂದ ಸೋನು ಸೂದ್​ ಟ್ವೀಟ್​ ಮಾಡಿದ್ದಾರೆ ಎನ್ನಲಾಗಿತ್ತು.

ಈ ಟ್ವೀಟ್​ ಕೆಲ ವೈದ್ಯರ ಕೋಪಕ್ಕೆ ಕಾರಣವಾಗಿದೆ. ಹಗಲು-ರಾತ್ರಿ ಎನ್ನದೇ ಕೆಲಸ ಮಾಡಿದರೂ ಸೆಲೆಬ್ರಿಟಿ ಆಗಿ ಈ ರೀತಿ ಆರೋಪ ಮಾಡುತ್ತಿದ್ದಾರಲ್ಲ ಎಂದು ವೈದ್ಯರು ಬೇಸರ ಹೊರ ಹಾಕಿದ್ದರು. ಇನ್ನೂ ಕೆಲವರು ಸೋನು ಸೂದ್​ ಮೇಲೆ ಕೋಪ ಕಾರಿದ್ದಾರೆ. ನಿಮಗೆ ನಾವು ನಟನೆ ಹೇಳಿಕೊಡಲು ಬಂದಿಲ್ಲ. ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದನ್ನು ನಮಗೆ ನೀವು ಹೇಳಿಕೊಡಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ನಟ ಸೋನು ಸೂದ್​ ಅವರು ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಅದರಲ್ಲೂ ಆಸ್ಪತ್ರೆಯ ಬೆಡ್​ ಸಿಗದೇ ಒದ್ದಾಡುತ್ತಿರುವ, ಆಕ್ಸಿಜನ್​ ಸಿಲಿಂಡರ್​ ಕೊರತೆ ಅನುಭವಿಸುತ್ತಿರುವ ಕೊವಿಡ್​ ಸೋಂಕಿತರಿಗಾಗಿ ಸೋನು ಸೂದ್​ ಹಲವು ಬಗೆಯಲ್ಲಿ ನೆರವು ನೀಡುತ್ತಿದ್ದಾರೆ. ಕೊರೊನಾದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್​ ಪ್ಲಾಂಟ್​ಗಳನ್ನು ಸ್ಥಾಪಿಸಲು ಸೋನು ಸೂದ್​ ತೀರ್ಮಾನಿಸಿದ್ದರು. ಅದಕ್ಕಾಗಿ ಅವರು ಆಕ್ಸಿಜನ್​ ಪ್ಲಾಂಟ್​ಗಳನ್ನು ಫ್ರಾನ್ಸ್​ನಿಂದ ಆಮದು ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.

ಇದನ್ನೂ ಓದಿ: ಬೆಂಗಳೂರಿಗರ ಸಹಾಯಕ್ಕೆ ನಿಂತ ಸೋನು ಸೂದ್​; ಈ ಸಂಖ್ಯೆಗೆ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರುತ್ತೆ ಆಕ್ಸಿಜನ್​ ಸಿಲಿಂಡರ್

ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ