AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರೆನ್ಸ್ ಬಿಷ್ಣೋಯಿ ಕುರಿತ ಡಾಕ್ಯುಸೀರೀಸ್, ಹೈಕೋರ್ಟ್ ಮಹತ್ವದ ಆದೇಶ

Lawrence Bishnoi crimes: ‘ಲಾರೆನ್ಸ್ ಆಫ್ ಪಂಜಾಬ್’ (Lawrence of Punjab) ಡಾಕ್ಯು ಸೀರೀಸ್ ಕಳೆದ ತಿಂಗಳು ಬಿಡುಗಡೆ ಆಗಬೇಕಿತ್ತು. ಆದರೆ ಖುದ್ದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಪಂಜಾಬ್ ಪೊಲೀಸರು ಈ ಡಾಕ್ಯು ಸೀರೀಸ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿ ಇದರ ಬಿಡುಗಡೆ ತಡೆದಿದ್ದರು. ಆದರೆ ಈಗ ಹೈಕೋರ್ಟ್, ಡಾಕ್ಯು ಸೀರೀಸ್ ಬಿಡುಗಡೆಗೆ ಅನುಮತಿ ನೀಡಿದೆ.

ಲಾರೆನ್ಸ್ ಬಿಷ್ಣೋಯಿ ಕುರಿತ ಡಾಕ್ಯುಸೀರೀಸ್, ಹೈಕೋರ್ಟ್ ಮಹತ್ವದ ಆದೇಶ
Lawrence
ಮಂಜುನಾಥ ಸಿ.
|

Updated on: May 12, 2026 | 2:43 PM

Share

ಹಲವು ಕೊಲೆ, ಸುಲಿಗೆ, ಬೆದರಿಕೆ ಇನ್ನೂ ಹತ್ತು ಹಲವು ಪ್ರಕರಣಗಳಲ್ಲಿ ಆರೋಪಿ ಮತ್ತು ಕೆಲ ಪ್ರಕರಣಗಳಲ್ಲಿ ಅಪರಾಧಿ ಸಹ ಆಗಿರುವ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಜೀವನವನ್ನು ಆಧರಿಸಿದ ಸಾಕ್ಷ್ಯಚಿತ್ರ (Docuseries) ಬಿಡುಗಡೆ ಕುರಿತಂತೆ ಪಂಜಾಬ್ ಮತ್ತು ಹರಿಯಾಣ ನ್ಯಾಯಾಲಯ ಆದೇಶವೊಂದನ್ನು ನೀಡಿದೆ. ‘ಲಾರೆನ್ಸ್ ಆಫ್ ಪಂಜಾಬ್’ (Lawrence of Punjab) ಡಾಕ್ಯು ಸೀರೀಸ್ ಕಳೆದ ತಿಂಗಳು ಬಿಡುಗಡೆ ಆಗಬೇಕಿತ್ತು. ಆದರೆ ಖುದ್ದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಪಂಜಾಬ್ ಪೊಲೀಸರು ಈ ಡಾಕ್ಯು ಸೀರೀಸ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿ ಇದರ ಬಿಡುಗಡೆ ತಡೆದಿದ್ದರು. ಆದರೆ ಈಗ ಹೈಕೋರ್ಟ್, ಡಾಕ್ಯು ಸೀರೀಸ್ ಬಿಡುಗಡೆಗೆ ಅನುಮತಿ ನೀಡಿದೆ.

ಜೀ ಎಂಟರ್ಟೈನ್​​ಮೆಂಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಚಿತ್ರ ಬಿಡುಗಡೆಗೆ ಅನುಮತಿ ನೀಡಿದೆ, ಆದರೆ ಎರಡು ಮುಖ್ಯ ಬದಲಾವಣೆಗಳನ್ನು ಮಾಡಲು ಹೇಳಿದೆ. ಡಾಕ್ಯು ಸರಣಿಯ ಹೆಸರಿನಿಂದ ಲಾರೆನ್ಸ್ ಬಿಷ್ಣೋಯಿ ಮತ್ತು ಪಂಜಾಬ್ ಹೆಸರನ್ನು ತೆಗೆಯುವಂತೆ ನ್ಯಾಯಾಲಯವು ಆದೇಶಿಸಿದೆ. ಶೀರ್ಷಿಕೆಯು ಒಂದು ನಿರ್ದಿಷ್ಟ ರಾಜ್ಯದ (ಪಂಜಾಬ್) ಹೆಸರನ್ನು ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಾಲಯವು, ಈ ಶೀರ್ಷಿಕೆಯು ರಾಜ್ಯದ ಇಮೇಜ್‌ಗೆ ಧಕ್ಕೆ ತರಬಹುದು ಮತ್ತು ಗ್ಯಾಂಗ್‌ಸ್ಟರ್ ಹೆಸರನ್ನು ಶೀರ್ಷಿಕೆಯಲ್ಲಿ ಬಳಸುವುದು ಸೂಕ್ತವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Zee5 ಪರ ವಕೀಲರು ನ್ಯಾಯಾಲಯದ ಈ ಸಲಹೆಯನ್ನು ಒಪ್ಪಿಕೊಂಡಿದ್ದು, ಶೀರ್ಷಿಕೆಯನ್ನು ಬದಲಾಯಿಸಲು ಸಮ್ಮತಿಸಿದ್ದಾರೆ. ಈ ಸರಣಿಯು ಅಪರಾಧ ಜಗತ್ತಿನ ಕರಾಳ ಮುಖವನ್ನು ತೋರಿಸುವ ಉದ್ದೇಶ ಹೊಂದಿದೆಯೇ ಹೊರತು, ಅಪರಾಧಿಯನ್ನು ವೈಭವೀಕರಿಸುವ ಉದ್ದೇಶ ಹೊಂದಿಲ್ಲ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ:ಕೊಲೆಗಾರನಿಗೆ ನಾಯಕನ ಪಟ್ಟ: ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ನಿಷೇಧ

ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಲಾರೆನ್ಸ್ ಬಿಷ್ಣೋಯ್ ಸದ್ಯ ಜೈಲಿನಲ್ಲಿದ್ದಾನೆ. ಇಂತಹ ವಿವಾದಿತ ವ್ಯಕ್ತಿಯ ಕುರಿತಾದ ಸರಣಿಯು ಬಿಡುಗಡೆಗೆ ಮುನ್ನವೇ ಈ ಕಾನೂನು ಸಂಘರ್ಷಕ್ಕೆ ಒಳಗಾಗಿದ್ದು, ಈಗ ನ್ಯಾಯಾಲಯದ ಸೂಚನೆಯಂತೆ ಹೆಸರನ್ನು ಬದಲಾಯಿಸಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.

‘ಲಾರೆನ್ಸ್ ಆಫ್ ಬಿಷ್ಣೋಯಿ’ ಡಾಕ್ಯು ಸೀರೀಸ್ ಏಪ್ರಿಲ್ 27ರಂದು ಬಿಡುಗಡೆ ಆಗಬೇಕಿತ್ತು. ಈಗಾಗಲೇ ಬಿಡುಗಡೆ ಆಗಿರುವ ಟ್ರೈಲರ್​​ನಲ್ಲಿ ತೋರಿಸಿರುವಂತೆ ಕೆಲವು ಪೊಲೀಸ್ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಪಂಜಾಬ್​ನ ಭೂತಕ ಗ್ಯಾಂಗ್​​ಗಳು ಹಾಗೂ ಲಾರೆನ್ಸ್ ಬಿಷ್ಣೋಯಿ ಬಗ್ಗೆ ಮಾತನಾಡಿದ್ದಾರೆ. ಬಿಷ್ಣೋಯಿಯನ್ನು ಅದ್ಧೂರಿ ಹಿನ್ನೆಲೆ ಸಂಗೀತದೊಂದಿಗೆ ‘ಹೀರೋ’ ರೀತಿ ತೋರಿಸಿರುವ ದೃಶ್ಯಗಳು ಸಹ ಟ್ರೈಲರ್​​ನಲ್ಲಿವೆ. ಆದರೆ ಈಗ ನ್ಯಾಯಾಲಯ ಅನುಮತಿ ನೀಡಿರುವ ಕಾರಣ ಡಾಕ್ಯು ಸರಣಿ ಜೀ5 ನಲ್ಲಿ ಶೀಘ್ರವೇ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ