AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೇಕ್ಷಕರು ಸರಿ ಇಲ್ಲ ಎನ್ನಬಾರದು’: ಸಿನಿಮಾ ಸೋಲಿನ ಬಗ್ಗೆ ಚಿರಂಜೀವಿ ಮಾತು

Megastar Chiranjeevi: ಕನ್ನಡದ ಡಾಲಿ ಧನಂಜಯ್ ನಟನೆಯ ತೆಲುಗು ಸಿನಿಮಾ ‘ಜಿಬ್ರಾ’ ಇವೆಂಟ್​ಗೆ ಅತಿಥಿಯಾಗಿ ಆಗಮಿಸಿದ್ದ ನಟ ಚಿರಂಜೀವಿ, ‘ಪ್ರೇಕ್ಷಕರು ತಪ್ಪು’ ಎಂದು ಎಂದಿಗೂ ಹೇಳಬೇಡಿ, ‘ಪ್ರೇಕ್ಷರು ಯಾವಾಗಲೂ ತಪ್ಪಲ್ಲ’ ಎಂದಿದ್ದಾರೆ.

‘ಪ್ರೇಕ್ಷಕರು ಸರಿ ಇಲ್ಲ ಎನ್ನಬಾರದು’: ಸಿನಿಮಾ ಸೋಲಿನ ಬಗ್ಗೆ ಚಿರಂಜೀವಿ ಮಾತು
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 13, 2024 | 6:33 PM

Share

ಸಿನಿಮಾ ಸೋತ ಬಳಿಕ ಆ ತಪ್ಪನ್ನು ಅನೇಕರು ಪ್ರೇಕ್ಷಕರ ಮೇಲೆ ಹಾಕುತ್ತಾರೆ. ಪ್ರೇಕ್ಷಕರು ಬರದೆ ಇದ್ದ ಕಾರಣದಿಂದ ಸಿನಿಮಾ ಸೋತಿತು ಎನ್ನುತ್ತಾರೆ. ಆದರೆ, ಯಾರೊಬ್ಬರೂ ತಾವು ಸಿನಿಮಾನ ಚೆನ್ನಾಗಿ ಮಾಡಿಲ್ಲ ಎಂಬುದನ್ನು ಒಪ್ಪಿಕೊಳ್ಳುವುದಿಲ್ಲ. ಇನ್ನು, ಸಿನಿಮಾ ಸೋತ ಬಳಿಕ ಕೆಲವರು ಪ್ರೇಕ್ಷಕರನ್ನು ಬೈದಿದ್ದು ಇದೆ. ಈ ಬಗ್ಗೆ ಚಿರಂಜೀವಿ ಅವರು ಮಾತನಾಡಿದ್ದಾರೆ. ಸತ್ಯ, ಧನಂಜಯ್ ಮೊದಲಾದವರು ನಟಿಸಿರುವ ‘ಜಿಬ್ರಾ’ ಚಿತ್ರದ ಟ್ರೇಲರ್ ಈವೆಂಟ್​ಗೆ ಅತಿಥಿಯಾಗಿ ತೆರಳಿದ್ದರು. ‘ಪ್ರೇಕ್ಷರು ಯಾವಾಗಲೂ ತಪ್ಪಲ್ಲ’ ಎಂದಿದ್ದಾರೆ.

ಟಾಲಿವುಡ್​ನಲ್ಲಿ ಮಧ್ಯಮ ಬಜೆಟ್ ಸಿನಿಮಾಗಳು ಉತ್ತಮವಾಗಿ ಗೆಲುವು ಕಂಡಿದೆ. ‘ಹುನುಮಾನ್’, ‘ಮಾತು ವಡಲರ 2’, ‘ಅಮರನ್’, ‘ಕ’, ‘ಲಕ್ಕಿ ಭಾಸ್ಕರ್’ ರೀತಿಯ ಸಿನಿಮಾಗಳೇ ಇದಕ್ಕೆ ಸಾಕ್ಷಿ. ‘ಚಿತ್ರ ಚೆನ್ನಾಗಿದ್ದರೆ ಪ್ರೇಕ್ಷಕರು ಥಿಯೇಟರ್ಗೆ ಬರುತ್ತಾರೆ ಎಂಬುದಕ್ಕೆ ಈ ರೀತಿಯ ಸಿನಿಮಾಗಳೇ ಉದಾಹರಣೆ’ ಎಂದರು ಅವರು.

ಕೊವಿಡ್ ಕಾಣಿಸಿಕೊಂಡ ಬಳಿಕ ಪ್ರೇಕ್ಷಕರಲ್ಲಿ ಒಂದು ತಪ್ಪು ಕಲ್ಪನೆ ಇತ್ತು. ‘ಕೊವಿಡ್ ಕಾಣಿಸಿಕೊಂಡ ಬಳಿಕ ಬಿಗ್ ಬಜೆಟ್ ಚಿತ್ರಗಳನ್ನು ಮಾತ್ರ ಜನರು ನೋಡುತ್ತಾರೆ ಎಂಬ ನಂಬಿಕೆ ಇದೆ. ಆದರೆ, ಪ್ರೇಕ್ಷಕ ಎಂದಿಗೂ ತಪ್ಪು ಮಾಡಲಾರ. ಸಿನಿಮಾ ನೋಡಲು ಪ್ರೇಕ್ಷಕರು ಥಿಯೇಟರ್ಗೆ ಬಂದಿಲ್ಲ ಎಂದರೆ ಅದು ತಂಡದವರ ತಪ್ಪು. ಅವರು ಉತ್ತಮ ಸಿನಿಮಾ ಮಾಡಿಲ್ಲ ಎಂದರ್ಥ’ ಎಂದಿದ್ದಾರೆ ಚಿರು.

ಇದನ್ನೂ ಓದಿ:ಚಿರಂಜೀವಿ ಜೊತೆ ನಟಿಸುವ ಅವಕಾಶ ತಪ್ಪಿಸಿಕೊಂಡಿದ್ದ ಡಾಲಿ ಧನಂಜಯ್

‘ನಿರ್ದೇಶಕನಾಗಲೀ, ಹಣವಾಗಲೀ ಜನರನ್ನು ಥಿಯೇಟರ್ಗೆ ಕರೆತರುವುದಿಲ್ಲ. ಯಾವ ರೀತಿಯ ಸಿನಿಮಾ ಮಾಡಿದ್ದೀರಿ ಎಂಬುದು ಮುಖ್ಯವಾಗುತ್ತದೆ. ಸಿನಿಮಾ ರಿಲೀಸ್ ಮಾಡುವುದಕ್ಕೂ ಮೊದಲು ಎರಡು ಬಾರಿ ನೋಡಬೇಕು’ ಎಂದಿದ್ದಾರೆ ಚಿರು.

ಚಿರಂಜೀವಿ ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಕಂಡಿದ್ದರು. ಅವರ ನಟನೆಯ ‘ಆಚಾರ್ಯ’ ಸಿನಿಮಾ ಹೀನಾಯವಾಗಿ ಸೋತಿತು. ಈ ಚಿತ್ರದ ಹಂಚಿಕೆದಾರರು ದೊಡ್ಡ ನಷ್ಟ ಅನುಭವಿಸಿದರು. ಈ ವೇಳೆ ಚಿರಂಜೀವಿ ಅವರು ಸಹಾಯ ಮಾಡಿದ್ದರು. ಇನ್ನು, ‘ಭೋಲಾ ಶಂಕರ್’ ಕೂಡ ಫ್ಲಾಪ್ ಎನಿಸಿಕೊಂಡಿತು. ‘ವಿಶ್ವಂಭರ’ ಹೆಸರಿನ ಸಿನಿಮಾದಲ್ಲಿಯೂ ಚಿರಂಜೀವಿ ನಟಿಸುತ್ತಾ ಇದ್ದಾರೆ. ಈ ಸಿನಿಮಾ ಮುಂದಿನ ವರ್ಷ ರಿಲೀಸ್ ಆಗಲಿದೆ. ಈ ಚಿತ್ರಕ್ಕಾಗಿ ಪ್ರೇಕ್ಷಕ ಕಾದಿದ್ದಾನೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?