AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೇಕ್ಷಕರು ಸರಿ ಇಲ್ಲ ಎನ್ನಬಾರದು’: ಸಿನಿಮಾ ಸೋಲಿನ ಬಗ್ಗೆ ಚಿರಂಜೀವಿ ಮಾತು

Megastar Chiranjeevi: ಕನ್ನಡದ ಡಾಲಿ ಧನಂಜಯ್ ನಟನೆಯ ತೆಲುಗು ಸಿನಿಮಾ ‘ಜಿಬ್ರಾ’ ಇವೆಂಟ್​ಗೆ ಅತಿಥಿಯಾಗಿ ಆಗಮಿಸಿದ್ದ ನಟ ಚಿರಂಜೀವಿ, ‘ಪ್ರೇಕ್ಷಕರು ತಪ್ಪು’ ಎಂದು ಎಂದಿಗೂ ಹೇಳಬೇಡಿ, ‘ಪ್ರೇಕ್ಷರು ಯಾವಾಗಲೂ ತಪ್ಪಲ್ಲ’ ಎಂದಿದ್ದಾರೆ.

‘ಪ್ರೇಕ್ಷಕರು ಸರಿ ಇಲ್ಲ ಎನ್ನಬಾರದು’: ಸಿನಿಮಾ ಸೋಲಿನ ಬಗ್ಗೆ ಚಿರಂಜೀವಿ ಮಾತು
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 13, 2024 | 6:33 PM

Share

ಸಿನಿಮಾ ಸೋತ ಬಳಿಕ ಆ ತಪ್ಪನ್ನು ಅನೇಕರು ಪ್ರೇಕ್ಷಕರ ಮೇಲೆ ಹಾಕುತ್ತಾರೆ. ಪ್ರೇಕ್ಷಕರು ಬರದೆ ಇದ್ದ ಕಾರಣದಿಂದ ಸಿನಿಮಾ ಸೋತಿತು ಎನ್ನುತ್ತಾರೆ. ಆದರೆ, ಯಾರೊಬ್ಬರೂ ತಾವು ಸಿನಿಮಾನ ಚೆನ್ನಾಗಿ ಮಾಡಿಲ್ಲ ಎಂಬುದನ್ನು ಒಪ್ಪಿಕೊಳ್ಳುವುದಿಲ್ಲ. ಇನ್ನು, ಸಿನಿಮಾ ಸೋತ ಬಳಿಕ ಕೆಲವರು ಪ್ರೇಕ್ಷಕರನ್ನು ಬೈದಿದ್ದು ಇದೆ. ಈ ಬಗ್ಗೆ ಚಿರಂಜೀವಿ ಅವರು ಮಾತನಾಡಿದ್ದಾರೆ. ಸತ್ಯ, ಧನಂಜಯ್ ಮೊದಲಾದವರು ನಟಿಸಿರುವ ‘ಜಿಬ್ರಾ’ ಚಿತ್ರದ ಟ್ರೇಲರ್ ಈವೆಂಟ್​ಗೆ ಅತಿಥಿಯಾಗಿ ತೆರಳಿದ್ದರು. ‘ಪ್ರೇಕ್ಷರು ಯಾವಾಗಲೂ ತಪ್ಪಲ್ಲ’ ಎಂದಿದ್ದಾರೆ.

ಟಾಲಿವುಡ್​ನಲ್ಲಿ ಮಧ್ಯಮ ಬಜೆಟ್ ಸಿನಿಮಾಗಳು ಉತ್ತಮವಾಗಿ ಗೆಲುವು ಕಂಡಿದೆ. ‘ಹುನುಮಾನ್’, ‘ಮಾತು ವಡಲರ 2’, ‘ಅಮರನ್’, ‘ಕ’, ‘ಲಕ್ಕಿ ಭಾಸ್ಕರ್’ ರೀತಿಯ ಸಿನಿಮಾಗಳೇ ಇದಕ್ಕೆ ಸಾಕ್ಷಿ. ‘ಚಿತ್ರ ಚೆನ್ನಾಗಿದ್ದರೆ ಪ್ರೇಕ್ಷಕರು ಥಿಯೇಟರ್ಗೆ ಬರುತ್ತಾರೆ ಎಂಬುದಕ್ಕೆ ಈ ರೀತಿಯ ಸಿನಿಮಾಗಳೇ ಉದಾಹರಣೆ’ ಎಂದರು ಅವರು.

ಕೊವಿಡ್ ಕಾಣಿಸಿಕೊಂಡ ಬಳಿಕ ಪ್ರೇಕ್ಷಕರಲ್ಲಿ ಒಂದು ತಪ್ಪು ಕಲ್ಪನೆ ಇತ್ತು. ‘ಕೊವಿಡ್ ಕಾಣಿಸಿಕೊಂಡ ಬಳಿಕ ಬಿಗ್ ಬಜೆಟ್ ಚಿತ್ರಗಳನ್ನು ಮಾತ್ರ ಜನರು ನೋಡುತ್ತಾರೆ ಎಂಬ ನಂಬಿಕೆ ಇದೆ. ಆದರೆ, ಪ್ರೇಕ್ಷಕ ಎಂದಿಗೂ ತಪ್ಪು ಮಾಡಲಾರ. ಸಿನಿಮಾ ನೋಡಲು ಪ್ರೇಕ್ಷಕರು ಥಿಯೇಟರ್ಗೆ ಬಂದಿಲ್ಲ ಎಂದರೆ ಅದು ತಂಡದವರ ತಪ್ಪು. ಅವರು ಉತ್ತಮ ಸಿನಿಮಾ ಮಾಡಿಲ್ಲ ಎಂದರ್ಥ’ ಎಂದಿದ್ದಾರೆ ಚಿರು.

ಇದನ್ನೂ ಓದಿ:ಚಿರಂಜೀವಿ ಜೊತೆ ನಟಿಸುವ ಅವಕಾಶ ತಪ್ಪಿಸಿಕೊಂಡಿದ್ದ ಡಾಲಿ ಧನಂಜಯ್

‘ನಿರ್ದೇಶಕನಾಗಲೀ, ಹಣವಾಗಲೀ ಜನರನ್ನು ಥಿಯೇಟರ್ಗೆ ಕರೆತರುವುದಿಲ್ಲ. ಯಾವ ರೀತಿಯ ಸಿನಿಮಾ ಮಾಡಿದ್ದೀರಿ ಎಂಬುದು ಮುಖ್ಯವಾಗುತ್ತದೆ. ಸಿನಿಮಾ ರಿಲೀಸ್ ಮಾಡುವುದಕ್ಕೂ ಮೊದಲು ಎರಡು ಬಾರಿ ನೋಡಬೇಕು’ ಎಂದಿದ್ದಾರೆ ಚಿರು.

ಚಿರಂಜೀವಿ ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಕಂಡಿದ್ದರು. ಅವರ ನಟನೆಯ ‘ಆಚಾರ್ಯ’ ಸಿನಿಮಾ ಹೀನಾಯವಾಗಿ ಸೋತಿತು. ಈ ಚಿತ್ರದ ಹಂಚಿಕೆದಾರರು ದೊಡ್ಡ ನಷ್ಟ ಅನುಭವಿಸಿದರು. ಈ ವೇಳೆ ಚಿರಂಜೀವಿ ಅವರು ಸಹಾಯ ಮಾಡಿದ್ದರು. ಇನ್ನು, ‘ಭೋಲಾ ಶಂಕರ್’ ಕೂಡ ಫ್ಲಾಪ್ ಎನಿಸಿಕೊಂಡಿತು. ‘ವಿಶ್ವಂಭರ’ ಹೆಸರಿನ ಸಿನಿಮಾದಲ್ಲಿಯೂ ಚಿರಂಜೀವಿ ನಟಿಸುತ್ತಾ ಇದ್ದಾರೆ. ಈ ಸಿನಿಮಾ ಮುಂದಿನ ವರ್ಷ ರಿಲೀಸ್ ಆಗಲಿದೆ. ಈ ಚಿತ್ರಕ್ಕಾಗಿ ಪ್ರೇಕ್ಷಕ ಕಾದಿದ್ದಾನೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ