AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಧ್ವನಿ ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪ್ರತಾಪ್‌: ಭಾವುಕ ವೀಕೆಂಡ್ ಎಪಿಸೋಡ್

Drone Prathap: ಪ್ರತಾಪ್ ಬಹಳ ಗಟ್ಟಿಯಾಗಿ ಆಟ ಆಡವೇನೋ ಆಡುತ್ತಿದ್ದಾರೆ. ಆದರೆ ಅವರಿಗಿರುವ ಕೊರಗೆಂದರೆ ಅವರ ಕುಟುಂಬದ್ದು. ಅಪ್ಪನೊಟ್ಟಿಗೆ ಮಾತನಾಡಿ ವರ್ಷಗಳಾಯ್ತು, ಅವರೊಟ್ಟಿಗೆ ಮಾತನಾಡಬೇಕು ಎಂದು ಪ್ರತಾಪ್ ಹೇಳಿಕೊಂಡಿದ್ದರು. ಈಗ ಅಪ್ಪನ ಧ್ವನಿ ಕೇಳಿ ಕಣ್ಣೀರು ಹಾಕಿದ್ದಾರೆ ಪ್ರತಾಪ್.

ಅಪ್ಪನ ಧ್ವನಿ ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪ್ರತಾಪ್‌: ಭಾವುಕ ವೀಕೆಂಡ್ ಎಪಿಸೋಡ್
ಡ್ರೋನ್ ಪ್ರತಾಪ್
ಮಂಜುನಾಥ ಸಿ.
|

Updated on:Nov 18, 2023 | 6:53 PM

Share

ಡ್ರೋನ್ ಪ್ರತಾಪ್ (Drone Prathap) ಬಿಗ್​ಬಾಸ್ ಮನೆಯ ಟಾಪ್ ಸ್ಪರ್ಧಿಯಾಗಿಬಿಟ್ಟಿದ್ದಾರೆ. ಕೆಲ ವಾರಗಳ ಹಿಂದೆ ವಿನಯ್ ಗೆ ಸ್ಪರ್ಧೆಯೇ ಇಲ್ಲದಂತಾಗಿದೆ ಎಂದು ಇತರೆ ಸ್ಪರ್ಧಿಗಳ ನೀರಸ ಆಟವನ್ನು ಟೀಕಿಸುತ್ತಾ ಸುದೀಪ್ ಹೇಳಿದ್ದರು. ಆದರೆ ಕೆಲವೇ ವಾರಗಳಲ್ಲಿ ವಿನಯ್​ರ ಸ್ಪಷ್ಟ ಎದುರಾಳಿಯಾಗಿ ಪ್ರತಾಪ್ ಬೆಳೆದು ನಿಂತಿದ್ದಾರೆ. ತಮ್ಮ ಬುದ್ಧಿವಂತ ಹಾಗೂ ನಿಷ್ಪಕ್ಷಪಾತ ಆಟದಿಂದ ಪ್ರತಾಪ್ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಚೆನ್ನಾಗಿ ಆಟ ಆಡುತ್ತಿರುವ ಪ್ರತಾಪ್​ಗೆ ಇರುವ ಒಂದು ಬಯಕೆಯೆಂದರೆ ಮಾತನಾಡುವುದನ್ನು ನಿಲ್ಲಿಸಿರುವ ಅವರ ಅಪ್ಪನನ್ನು ನೋಡಬೇಕು, ಮಾತನಾಡಬೇಕು ಎಂಬುದು.

ಡ್ರೋನ್ ಪ್ರತಾಪ್ ಅವರು ಮೊದಲ ವಾರದಲ್ಲಿದ್ದ ರೀತಿಗೂ ಇಂದಿನ ರೀತಿಗೂ ಬಹಳಷ್ಟು ವ್ಯತ್ಯಾಸ ಎದ್ದು ಕಾಣುತ್ತಿದೆ. ಒಬ್ಬೊಬ್ಬರೇ ಇರುತ್ತಿದ್ದ, ಯಾರೊಂದಿಗೂ ಬೆರೆಯದ ಅವರು ನಂತರ ನಿಧಾನಕ್ಕೆ ಬೆರೆಯತೊಡಗಿದ್ದರು. ಆಗ ಅವರು ಸಾಕಷ್ಟು ವಿರೋಧವನ್ನೂ ಎದುರಿಸಬೇಕಾಯ್ತು. ಅದನ್ನು ಎದುರಿಸಿ ಬಿಗ್​ಬಾಸ್ ಮನೆಯಲ್ಲಿ ಅವರು ತಮ್ಮನ್ನು ತಾವು ಸ್ಥಾಪಿಸಿಕೊಂಡ ರೀತಿ ನಿಜಕ್ಕೂ ಪ್ರಶಂಸನೀಯ. ವಿರೋಧಿಗಳೇ ಹೊಗಳುವ ಹಂತಕ್ಕೆ ಪ್ರತಾಪ್ ಏರಿದರು.

ಪ್ರತಾಪ್ ಬಹಳ ಗಟ್ಟಿಯಾಗಿ ಆಟ ಆಡವೇನೋ ಆಡುತ್ತಿದ್ದಾರೆ. ಆದರೆ ಅವರಿಗಿರುವ ಕೊರಗೆಂದರೆ ಅವರ ಕುಟುಂಬದ್ದು. ಹೊರಗಡೆ ಡ್ರೋನ್ ಪ್ರತಾಪ್​ರದ್ದು ವಿವಾದ ಆದ ಬಳಿಕ ಪ್ರತಾಪ್ ಅವರ ಕುಟುಂಬದೊಟ್ಟಿಗೆ ಮಾತೇ ಆಡಿಲ್ಲವಂತೆ. ಕೆಲವು ವರ್ಷಗಳಿಂದ ಕುಟುಂಬದಿಂದ ದೂರವಿದ್ದಾರೆ ಎಂಬುದನ್ನು ಅವರೇ ಬೇಸರದಿಂದ ಹೇಳಿಕೊಂಡಿದ್ದರು. ಅಲ್ಲದೇ ತಂದೆ ತಾಯಿ ಜೊತೆಗೆ ತಂಗಿಯ ಜೊತೆಗೆ ಮಾತಾಡಬೇಕು ಅನಿಸುತ್ತಿದೆ ಎಂದೂ ಹಿಂದೆ ಹೇಳಿಕೊಂಡಿದ್ದರು.

ಇದನ್ನೂ ಓದಿ:ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಬಗ್ಗೆ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಮಾತು

ಕಳೆದ ವಾರ ಸ್ಪರ್ಧಿಗಳಿಗೆ ತಮ್ಮ ಕುಟುಂಬದವರು ಬರೆದ ಪತ್ರಗಳನ್ನು ಪಡೆದುಕೊಳ್ಳುವ ಅವಕಾಶ ಸಿಕ್ಕಿತ್ತು. ಆದರೆ ಟಾಸ್ಕ್​ನಲ್ಲಿ ಸೋಲು ಪತ್ರ ಪಡೆಯಲು ಪ್ರತಾಪ್ ವಿಫಲರಾದರು. ಹಾಗಾಗಿ ಅವರು ನಿರಾಶೆಗೊಂಡಿದ್ದರು. ಈಗ ವೀಕೆಂಡ್‌ನ ‘ಕಿಚ್ಚನ ಪಂಚಾಯಿತಿ’ಯಲ್ಲಿ ಸುದೀಪ್, ಪ್ರತಾಪ್‌ಗೆ ಒಂದು ಸ್ವೀಟ್ ಸರ್ಪೈಸ್ ಕೊಟ್ಟಿದ್ದಾರೆ. ಈ ಸರ್ಫೈಸ್ ಅಷ್ಟೇ ಭಾವುಕವಾದದ್ದೂ ಆಗಿದೆ. ‘ನಿಮ್ಮ ಮನೆಯಿಂದ ಬರುತ್ತಿದ್ದ ಪತ್ರದಲ್ಲಿ ನೀವು ಏನು ನಿರೀಕ್ಷಿಸಿದ್ದೀರಿ?’ ಎಂದು ಪ್ರತಾಪ್ ಅವರನ್ನು ಕೇಳಿದ್ದಾರೆ. ಅದನ್ನು ಹೇಳುವ ಮೊದಲೇ ಮನೆಯೊಳಗೆ ಪ್ರತಾಪ್ ತಂದೆಯ ಧ್ವನಿ ಕೇಳಿದೆ. ಫೋನ್‌ನಲ್ಲಿ ತಂದೆಯ ಧ್ವನಿಯನ್ನು ಕೇಳಿದ ಪ್ರತಾಪ್, ‘ಅಪ್ಪಾ ನನ್ನ ಕ್ಷಮಿಸಿಬಿಡಿ. ನಿಮಗೆ ಸಾಕಷ್ಟು ನೋವು ಕೊಟ್ಟಿದ್ದೀನಿ’ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಈಗ ಬಿಡುಗಡೆ ಆಗಿರುವ ಪ್ರೋಮೋನಲ್ಲಿ ಪ್ರಥಮ್, ಬಿಕ್ಕಿ-ಬಿಕ್ಕಿ ಅಳುತ್ತಿದ್ದಾರೆ. ಅದನ್ನು ಕಂಡು ಮನೆಯ ಇತರೆ ಸದಸ್ಯರು ಸಹ ಬಹಳ ಭಾವುಕರಾಗಿದ್ದಾರೆ. ಅಂದಹಾಗೆ ಪ್ರತಾಪ್​ರ ತಂದೆ ಮಗನೊಟ್ಟಿಗೆ ಮಾತನಾಡಿದರಾ? ಮಗನನ್ನು ಕ್ಷಮಿಸಿದರಾ? ಅಪ್ಪ ಮಾತ್ರವೇ ಮಾತನಾಡಿದರಾ? ತಾಯಿ-ತಂಗಿಯೂ ಮಾತನಾಡಿದರಾ? ಎಂಬುದೆಲ್ಲ ತಿಳಿಯಬೇಕೆಂದರೆ ಇಂದಿನ ಎಪಿಸೋಡ್ ಪೂರ್ಣವಾಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Sat, 18 November 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ