AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಜ್ ಕಾರಲ್ಲಿ ಡ್ರೋನ್ ಪ್ರತಾಪ್ ಎಂಟ್ರಿ; ಹೇಗಿತ್ತು ನೋಡಿ ಬಿಲ್ಡಪ್

ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ನಂತರ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಕ್ಕೆ ಸ್ಟೈಲಿಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅವರ ಪ್ರವೇಶಕ್ಕೆ ಭರ್ಜರಿ ಸ್ವಾಗತ ದೊರೆತಿದ್ದು, ಅವರ ಮುಂದಿನ ಆಟ ಕುತೂಹಲ ಮೂಡಿಸಿದೆ. ಲೈಫ್ ಪಾರ್ಟ್ನರ್ ಸಿಕ್ಕರೆ ಮದುವೆಯಾಗುವ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ.

ಬೆಂಜ್ ಕಾರಲ್ಲಿ ಡ್ರೋನ್ ಪ್ರತಾಪ್ ಎಂಟ್ರಿ; ಹೇಗಿತ್ತು ನೋಡಿ ಬಿಲ್ಡಪ್
ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Feb 23, 2025 | 12:55 PM

Share

ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಗೆ ಬಂದು ಸಖತ್ ಫೇಮಸ್ ಆದರು. ಅವರು ಸಿನಿಮಾ ಮಾಡೋದಾಗಿಯೂ ಈ ಮೊದಲು ಘೋಷಣೆ ಮಾಡಿದ್ದರು. ಈಗ ಅವರು ವಿವಿಧ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಾ ಇದ್ದಾರೆ. ಅವರು ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಶೋಗೆ ಬಂದಿದ್ದಾರೆ. ಈ ಶೋನಲ್ಲಿ ಅವರ ಎಂಟ್ರಿ ಭರ್ಜರಿಯಾಗಿತ್ತು. ಅವರಿಗೆ ಸಖತ್ ಬಿಲ್ಡಪ್ ಕೊಡಲಾಗಿದೆ.

ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಸೈಲೆಂಟ್ ಆಗಿದ್ದಿದ್ದೇ ಹೆಚ್ಚು. ಸಿಂಪತಿ ಗಿಟ್ಟಿಸಿಕೊಳ್ಳಲು ಅವರು ಮಾಡಿರೋ ಟೆಕ್ನಿಕ್ ಇದು ಎಂದು ಅನೇಕರು ಆರೋಪ ಮಾಡಿದ್ದು ಇದೆ. ಆದರೆ, ದೊಡ್ಮನೆಯಿಂದ ಹೊರ ಬಂದ ಬಳಿಕ ಅವರು ಸಂಪೂರ್ಣವಾಗಿ ಬೇರೆ ರೀತಿಯಲ್ಲೇ ಕಾಣಿಸಿಕೊಂಡರು. ಅವರು ಸಖತ್ ಆ್ಯಕ್ಟೀವ್ ಆದರು. ಈಗ ಅವರು ‘ಭರ್ಜರಿ ಬ್ಯಾಚುಲರ್ಸ್ 2’ಗೆ ಬಂದಿದ್ದಾರೆ.

‘ಭರ್ಜರಿ ಬ್ಯಾಚುಲರ್ಸ್ 2’ ಶನಿವಾರ (ಫೆಬ್ರವರಿ 22) ಪ್ರಸಾರ ಆರಂಭಿಸಿದೆ. ರವಿಚಂದ್ರನ್, ರಚಿತಾ ರಾಮ್ ಮೊದಲಾದವರು ಜಡ್ಜ್ ಸ್ಥಾನದಲ್ಲಿ ಇದ್ದಾರೆ. ಈ ರಿಯಾಲಿಟಿ ಶೋಗೆ ಡ್ರೋನ್ ಪ್ರತಾಪ್ ಎಂಟ್ರಿ ಜಬರ್ದಸ್ತಾಗಿದೆ. ಬೆಂಜ್ ಕಾರಲ್ಲಿ ಪ್ರತಾಪ್ ಅವರ ಎಂಟ್ರಿ ಆಗಿದೆ.

View this post on Instagram

A post shared by Zee Kannada (@zeekannada)

ಡ್ರೋನ್ ಪ್ರತಾಪ್ ಅವರು ಬರುತ್ತಿದ್ದಂತೆ ಒಂದೆರಡು ಡ್ರೋನ್​ಗಳು ಹಾರಾಟ ನಡೆಸಿವೆ. ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಯಾವ ರೀತಿಯಲ್ಲಿ ಮನರಂಜನೆ ನೀಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ಹನುಮಂತ ಗೆದ್ದಿದ್ದಕ್ಕೆ ಡ್ರೋನ್ ಪ್ರತಾಪ್ ಸಂಭ್ರಮ ನೋಡಿ

‘ಲೈಫ್ ಪಾರ್ಟ್ನರ್ ಸಿಕ್ಕರೆ, ನನ್ನ ಆಲೋಚನೆಗಳಿಗೆ ಹೊಂದಿಕೆ ಆದರೆ ಮದುವೆ ಆಗುತ್ತೇನೆ’ ಎಂದು ಡ್ರೋನ್ ಪ್ರತಾಪ್ ಹೇಳಿದ್ದಾರೆ. ಡ್ರೋನ್ ಪ್ರತಾಪ್ ಅವರಿಗೆ ಸಾಕಷ್ಟು ರೋಸ್​ಗಳು ಕೂಡ ಸಿಕ್ಕಿವೆ. ಅವರಿಗೆ ಸಾಕಷ್ಟು ನಾಚಿಕೆ ಕೂಡ ಆಗಿದೆ. ಶನಿ-ಭಾನು ರಾತ್ರಿ 9ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್