AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪ್ರಕರಣ: ತೆಲುಗು ನಾಯಕ ನಟನ ಪ್ರೇಯಸಿ ಬಂಧನ

Tollywood Drug case: ತೆಲುಗು ಚಿತ್ರರಂಗದಲ್ಲಿ ಮತ್ತೊಮ್ಮೆ ಡ್ರಗ್ಸ್ ಪ್ರಕರಣ ವರದಿಯಾಗಿದೆ. ತೆಲುಗು ಚಿತ್ರರಂಗದ ಜನಪ್ರಿಯ ಯುವನಟನ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣ: ತೆಲುಗು ನಾಯಕ ನಟನ ಪ್ರೇಯಸಿ ಬಂಧನ
ಮಂಜುನಾಥ ಸಿ.
|

Updated on: Jan 31, 2024 | 6:00 PM

Share

ತೆಲುಗು ಚಿತ್ರರಂಗದಿಂದ (Tollywood) ಮತ್ತೊಮ್ಮೆ ಡ್ರಗ್ಸ್ ಸುದ್ದಿ ಹೊರಬಂದಿದೆ. ಈ ಹಿಂದೆ ಹಲವು ಬಾರಿ ತೆಲುಗು ಚಿತ್ರರಂಗವು ಡ್ರಗ್ಸ್ ಕಾರಣಕ್ಕೆ ಸುದ್ದಿಯಾಗಿತ್ತು. ಇದೀಗ ತೆಲುಗು ಚಿತ್ರರಂಗದ ಜನಪ್ರಿಯ ನಾಯಕ ನಟರೊಬ್ಬರ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದು, ಯುವತಿಯಿಂದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಸೈದರಾಬಾದ್ ಪೊಲೀಸರು ನಾರಸಿಂಗಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಯುವತಿಯನ್ನು ಬಂಧಿಸಲಾಗಿದೆ. ಎಫ್​ಐಆರ್ ದಾಖಲಾಗಿದೆ.

ನಾರಸಿಂಗಿ ಪೊಲೀಸರು ನೀಡಿದ ಮಾಹಿತಿ ಆಧಾರದಲ್ಲಿ ಸೈದರಾಬಾದ್ ಪೊಲೀಸರ ಎಸ್​ಓಟಿ ವಿಭಾಗವು ಈ ದಾಳಿ ನಡೆಸಿತ್ತು. ಯುವತಿ ಬಳಿಯಿಂದ ನಾಲ್ಕು ಗ್ರಾಂ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಾದಕ ವಸ್ತುವನ್ನು ಯುವತಿಯು ಗೋವಾದಲ್ಲಿ ಖರೀದಿಸಿ ತಂದಿದ್ದರು ಎಂಬುದು ತಿಳಿದು ಬಂದಿದೆ. ತನಿಖೆ ವೇಳೆ ಬಂಧಿತ ಯುವತಿ ಟಾಲಿವುಡ್​ನ ಜನಪ್ರಿಯ ಯುವನಟ ರಾಜ್ ತರುಣ್ ಅವರ ಗರ್ಲ್​ಫ್ರೆಂಡ್ ಎಂಬ ಅಂಶ ಬೆಳಗಿದೆ ಬಂದಿದೆ. ಪ್ರಕರಣದೊಂದಿಗೆ ರಾಜ್ ತರುಣ್​ಗೆ ಸಹ ಸಂಬಂಧವಿದೆ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು, ಪೊಲೀಸರು ರಾಜ್ ತರುಣ್ ಅನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಇದನ್ನೂ ಓದಿ:ಡ್ರಗ್ಸ್ ಪ್ರಕರಣ: ನಟನ ಮನೆ ಮೇಲೆ ಅಧಿಕಾರಿಗಳ ದಾಳಿ

ರಾಜ್ ತರುಣ್, ಟಾಲಿವುಡ್​ನ ಜನಪ್ರಿಯ ಯುವನಟ. ಕಿರುಚಿತ್ರಗಳಿಂದ ನಟನೆ ಆರಂಭಿಸಿ, ಸಿನಿಮಾಗಳಲ್ಲಿ ಅವಕಾಶ ಪಡೆದುಕೊಂಡ ರಾಜ್ ತರುಣ್, ಕೆಲವು ನೆನಪುಳಿವ ತೆಲುಗು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ‘ಉಯ್ಯಾಲ-ಜಂಪಾಲ’, ‘ಕುಮಾರಿ 21ಎಫ್’, ‘ಸಿನಿಮಾ ಚೂಪಿಸ್ತ ಮಾವ’ ಇನ್ನೂ ಕೆಲವು ಉತ್ತಮ ಹಾಸ್ಯಮಯ ಲವ್ ಸ್ಟೋರಿಗಳಲ್ಲಿ ರಾಜ್ ತರುಣ್ ನಟಿಸಿದ್ದಾರೆ.

ರಾಜ್ ತರುಣ್, ಸಾಮಾನ್ಯವಾಗಿ ವಿವಾದಗಳಿಂದ ದೂರವೇ ಇರುತ್ತಾರೆ. ಕೋವಿಡ್ ಸಮಯದಲ್ಲಿ ಒಮ್ಮೆ ರಾಜ್ ತರುಣ್ ಹೆಸರು ಮಾಧ್ಯಮಗಳಲ್ಲಿ ಕೇಳಿ ಬಂದಿತ್ತು. ಕಾರು ಅಪಘಾತ ಮಾಡಿ ಸ್ಥಳದಿಂದ ರಾಜ್ ತರುಣ್ ಓಡಿ ಹೋಗುತ್ತಿರುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಅಪಘಾತದಿಂದ ಜೀವ ಹಾನಿ ಆಗಿರಲಿಲ್ಲ. ಮಾಧ್ಯಮಗಳಿಂದ ತಪ್ಪಿಸಿಕೊಳ್ಳಲು ರಾಜ್ ಹಾಗೆ ಓಡಿಹೋಗಿದ್ದಾರೆಂದು ಹೇಳಲಾಯ್ತು.

ಟಾಲಿವುಡ್​ನಲ್ಲಿ ಡ್ರಗ್ಸ್ ಪ್ರಕರಣ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ದೊಡ್ಡ-ದೊಡ್ಡವರ ಹೆಸರುಗಳು ಡ್ರಗ್ಸ್ ಪ್ರಕರಣದಲ್ಲಿ ಈ ಹಿಂದೆ ಕೇಳಿ ಬಂದಿವೆ. ರವಿತೇಜ ಸಹೋದರ, ನಿರ್ದೇಶಕ ಪುರಿ ಜಗನ್ನಾಥ್, ನಟಿ ಚಾರ್ಮಿ, ಮುಮೈಥ್ ಖಾನ್ ಇನ್ನೂ ಹಲವರ ಹೆಸರುಗಳು ಪ್ರಕರಣದಲ್ಲಿ ಈ ಹಿಂದೆ ಕೇಳಿ ಬಂದಿತ್ತು. ಕೆಲವು ನಟ, ನಿರ್ಮಾಪಕರ ಬಂಧನವೂ ಸಹ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ