AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ರಮ್ ಚಿತ್ರಕ್ಕೆ ಮತ್ತೆ ಹಿನ್ನಡೆ; ಕೊನೇ ಕ್ಷಣದಲ್ಲಿ ಸಿನಿಮಾ ರಿಲೀಸ್ ಆಗಲ್ಲ ಎಂದ ನಿರ್ದೇಶಕ

ನವೆಂಬರ್ 24ರಂದು ಚಿತ್ರ ರಿಲೀಸ್ ಆಗಲಿದೆ ಎಂದು ತಂಡ ಹೇಳಿಕೊಂಡಿತ್ತು. ಹಲವು ಕಡೆಗಳಲ್ಲಿ ಗೌತಮ್ ಸಂದರ್ಶನ ಕೂಡ ನೀಡಿದ್ದರು. ಆದರೆ, ಸಿನಿಮಾ ರಿಲೀಸ್ ಆಗಿಲ್ಲ.

ವಿಕ್ರಮ್ ಚಿತ್ರಕ್ಕೆ ಮತ್ತೆ ಹಿನ್ನಡೆ; ಕೊನೇ ಕ್ಷಣದಲ್ಲಿ ಸಿನಿಮಾ ರಿಲೀಸ್ ಆಗಲ್ಲ ಎಂದ ನಿರ್ದೇಶಕ
ವಿಕ್ರಮ್
ರಾಜೇಶ್ ದುಗ್ಗುಮನೆ
|

Updated on: Nov 24, 2023 | 11:49 AM

Share

ತಮಿಳಿನ ‘ಧ್ರುವ ನಕ್ಷತ್ರಂ’ (Dhruva Natchathiram) ಸಿನಿಮಾ ಕೆಲಸ ಆರಂಭ ಆಗಿದ್ದು 2018ರಲ್ಲಿ. ಸತತ ಐದು ವರ್ಷಗಳಿಂದ ಸಿನಿಮಾ ಕೆಲಸಗಳು ನಡೆಯುತ್ತಲೇ ಇದ್ದವು. ವಿಕ್ರಮ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಗೌತಮ್ ಮೆನನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಿನಿಮಾ ಇಂದು (ನವೆಂಬರ್ 24) ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾ ರಿಲೀಸ್ ವಿಳಂಬ ಆಗಿದೆ. ಈ ಬಗ್ಗೆ ನಿರ್ದೇಶಕ ಗೌತಮ್ ಮೆನನ್ ಮಾಹಿತಿ ನೀಡಿದ್ದಾರೆ. ಅದೂ ಕೆಲವೇ ಗಂಟೆ ಮೊದಲು.

2018ರಲ್ಲಿ ‘ಧ್ರುವ ನಕ್ಷತ್ರಂ’ ಸಿನಿಮಾ ಸೆಟ್ಟೇರಿತು. ವಿಕ್ರಮ್, ರೀತು ವರ್ಮ, ಪಾರ್ಥಿಬನ್, ಐಶ್ವರ್ಯಾ ರಾಜೇಶ್, ರಾಧಿಕಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಒಂದು ವರ್ಷದಲ್ಲಿ ರಿಲೀಸ್ ಆಗಬಹುದು ಎಂಬುದು ಅನೇಕರ ಊಹೆ ಆಗಿತ್ತು. ಆದರೆ, ಹಲವು ಕಾರಣದಿಂದ ರಿಲೀಸ್ ದಿನಾಂಕ ವಿಳಂಬ ಆಗುತ್ತಲೇ ಬಂತು. ನವೆಂಬರ್ 24ರಂದು ಚಿತ್ರ ರಿಲೀಸ್ ಆಗಲಿದೆ ಎಂದು ತಂಡ ಹೇಳಿಕೊಂಡಿತ್ತು. ಹಲವು ಕಡೆಗಳಲ್ಲಿ ಗೌತಮ್ ಸಂದರ್ಶನ ಕೂಡ ನೀಡಿದ್ದರು. ಆದರೆ, ಸಿನಿಮಾ ರಿಲೀಸ್ ಆಗಿಲ್ಲ.

ಮುಂಜಾನೆ ಮೂರು ಗಂಟೆ ಸುಮಾರಿಗ ಗೌತಮ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.  ‘ಕ್ಷಮಿಸಿ, ಇಂದು ಸಿನಿಮಾ ರಿಲೀಸ್​ ಮಾಡಲು ಸಾಧ್ಯವಾಗುತ್ತಿಲ್ಲ. ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದೆವು. ಇನ್ನೂ ಒಂದೆರಡು ದಿನ ಬೇಕು. ಕೆಲವೇ ದಿನಗಳಲ್ಲಿ ನಾವು ಬರುತ್ತೇವೆ’ ಎಂದು ಅವರು ಬರೆದುಕೊಂಡಿದ್ದಾರೆ.

ಆರ್ಥಿಕ ತೊಂದರೆಯಿಂದ ಸಿನಿಮಾ ರಿಲೀಸ್​ ವಿಳಂಬ ಆಗುತ್ತಿದೆ ಎನ್ನಲಾಗಿದೆ. ಗೌತಮ್ ಟ್ವೀಟ್​ಗೆ ಅನೇಕರು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ. ‘ಸಿನಿಮಾ ವಿಳಂಬಕ್ಕೆ ಕಾರಣ ಏನು ಎಂಬುದು ಗೊತ್ತಿದೆ. ಹಣ ಶೀಘ್ರದಲ್ಲೇ ಅರೇಂಜ್ ಆಗಲಿ ಎಂದು ನಾನು ಕೋರುತ್ತೇನೆ. ಈ ಚಿತ್ರವನ್ನು ದೊಡ್ಡ ಪರದೆಯಲ್ಲಿ ನೋಡಲು ನಾವು ಕಾದಿದ್ದೇವೆ’ ಎಂದು ವ್ಯಕ್ತಿಯೋರ್ವ ಕಮೆಂಟ್ ಮಾಡಿದ್ದಾರೆ. ‘ಈ ಚಿತ್ರ ಯಾವಾಗಲೇ ಬಂದರೂ ವೀಕ್ಷಿಸುತ್ತೇವೆ’ ಎಂದು ಫ್ಯಾನ್ಸ್​ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಪರಭಾಷೆಯ ಸಿನಿಮಾಗಳು ಕನ್ನಡಕ್ಕೆ ಹೆಚ್ಚು ಡಬ್ ಆಗಲ್ಲ ಏಕೆ? ಲೆಕ್ಕಾಚಾರವೇ ಬೇರೆ ಇದೆ..

‘ಧ್ರುವ ನಕ್ಷತ್ರಂ’ ಸಿನಿಮಾದಲ್ಲಿ ವಿಕ್ರಮ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಯಿತು. 2011ರಲ್ಲಿ ನಡೆದ ಮುಂಬೈ ಬ್ಲಾಸ್ಟ್ ಬಗ್ಗೆ ಸಿನಿಮಾ ಹೇಳಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ