ದುಲ್ಕರ್ ಸಲ್ಮಾನ್ ಮನಸ್ಸಲ್ಲಿ ಹೇಳಿಕೊಳ್ಳಲಾಗದ ಸಂಕಟ; ಕಣ್ಣೀರು ಹಾಕುತ್ತಿರುವ ವಿಡಿಯೋ ಪೋಸ್ಟ್ ಮಾಡಿ, ಡಿಲೀಟ್ ಮಾಡಿದ ನಟ  

Dulquer Salmaan: ದುಲ್ಕರ್ ಸಲ್ಮಾನ್ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಅವರು ನೋವು ತೋಡಿಕೊಂಡಿದ್ದರು.

ದುಲ್ಕರ್ ಸಲ್ಮಾನ್ ಮನಸ್ಸಲ್ಲಿ ಹೇಳಿಕೊಳ್ಳಲಾಗದ ಸಂಕಟ; ಕಣ್ಣೀರು ಹಾಕುತ್ತಿರುವ ವಿಡಿಯೋ ಪೋಸ್ಟ್ ಮಾಡಿ, ಡಿಲೀಟ್ ಮಾಡಿದ ನಟ  
ದುಲ್ಕರ್ ಸಲ್ಮಾನ್
Follow us
|

Updated on: Jul 04, 2023 | 7:48 AM

ನಟ ದುಲ್ಕರ್ ಸಲ್ಮಾನ್ (Dulquer Salmaan) ಅವರು ಮಲಯಾಳಂ ಸಿನಿಮಾಗಳನ್ನು ಮಾಡಿ ಫೇಮಸ್ ಆದವರು. ಅವರಿಗೆ ಹಿಂದಿ ಚಿತ್ರರಂಗದಲ್ಲೂ ಬೇಡಿಕೆ ಇದೆ. ಕಳೆದ ವರ್ಷ ರಿಲೀಸ್ ಆದ ‘ಸೀತಾ ರಾಮಂ’ ಸಿನಿಮಾ (Sita Ramam) ಮೂಲಕ ಅವರು ಸಾಕಷ್ಟು ಫೇಮಸ್ ಆದರು. ಈಗ ಅವರ ವಿಡಿಯೋ ಒಂದು ವೈರಲ್ ಆಗಿದೆ. ಕಣ್ಣಲ್ಲಿ ನೀರು ತುಂಬಿದೆ, ಮನಸ್ಸಲ್ಲಿ ಹೇಳಿಕೊಳ್ಳಲಾಗದೇ ಇರುವಷ್ಟು ನೋವಿದೆ. ಈ ವಿಡಿಯೋನ ಅವರೇ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ದುಲ್ಕರ್ ಬಗ್ಗೆ ಅನೇಕರು ಆತಂಕ ಹೊರಹಾಕಿದ್ದಾರೆ.

ದುಲ್ಕರ್ ಸಲ್ಮಾನ್​ಗೆ ಸಾಕಷ್ಟು ಬೇಡಿಕೆ ಇದೆ. ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಅವರು ನೋವು ತೋಡಿಕೊಂಡಿದ್ದರು. ‘ನಾನು ನಿದ್ದೆ ಮಾಡದೆ ಸಾಕಷ್ಟು ಸಮಯವೇ ಕಳೆದಿದೆ. ನಾನು ಇದೇ ಮೊದಲ ಬಾರಿಗೆ ಹೊಸತನ್ನು ಅನುಭವಿಸಿದ್ದೇನೆ. ಇದು ನನ್ನ ಮನಸ್ಸಿನಿಂದ ಹೊರಬರಲು ಸಾಧ್ಯವಾಗದ ಹಂತವನ್ನು ತಲುಪಿದೆ. ನಾನು ಹೆಚ್ಚು ಹೇಳಲು ಬಯಸುತ್ತೇನೆ, ಆದರೆ ನನಗೆ ಅದಕ್ಕೆ ಅನುಮತಿ ಇದೆಯೋ ಅಥವಾ ಇಲ್ಲವೋ ಅನ್ನೋದು ತಿಳಿಯುತ್ತಿಲ್ಲ’ ಎಂದು ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ಅವರು ಈ ವಿಡಿಯೋನ ಪೋಸ್ಟ್ ಮಾಡಿ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ. ಆದರೆ, ಕೆಲ ಅಭಿಮಾನಿಗಳು ಇದನ್ನು ಸೇವ್ ಮಾಡಿಕೊಂಡಿದ್ದರು. ಅದನ್ನು ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡು ಆತಂಕ ಹೊರಹಾಕುತ್ತಿದ್ದಾರೆ. ನೆಚ್ಚಿನ ನಟನಿಗೆ ಏನಾಯಿತು ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಕೆಲವೊಮ್ಮೆ ಸಿನಿಮಾ ಪ್ರಚಾರಕ್ಕೆ ಈ ರೀತಿಯ ತಂತ್ರ ಉಪಯೋಗಿಸಲಾಗುತ್ತದೆ. ಇದು ಸಿನಿಮಾ ಪ್ರಚಾರಕ್ಕೆ ಮಾಡಿದ ತಂತ್ರವೋ ಅಥವಾ ನಿಜಕ್ಕೂ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಅವರೇ ಮೌನ ಮುರಿಯಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ದುಲ್ಕರ್​ ಸಲ್ಮಾನ್​ ಬಗ್ಗೆ ಬಂದಿತ್ತು ಕೆಟ್ಟ ವಿಮರ್ಶೆ; ‘ಸೀತಾ ರಾಮಂ’ ನಟನ ಆ ನೋವಿನ ದಿನಗಳು ಹೇಗಿತ್ತು?

ಕಳೆದ ವರ್ಷ ದುಲ್ಕರ್ ನಟನೆಯ ನಾಲ್ಕು ಸಿನಿಮಾ ರಿಲೀಸ್ ಆಯಿತು. ‘ಸೀತಾ ರಾಮಂ’ ಹಾಗೂ ‘ಚುಪ್​: ರಿವೇಂಜ್ ಆಫ್ ದಿ ಆರ್ಟಿಸ್ಟ್​’ ಸಿನಿಮಾಗಳು ಮೆಚ್ಚುಗೆ ಪಡೆದವು. ಈಗ ಅವರು ‘ಕಿಂಗ್ ಆಫ್ ಕೋಠಾ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್