AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ನಿಗದಿಯಾಯ್ತು ‘ಕಾಗೆ ಬಂಗಾರ’ಕ್ಕೆ ಮುಹೂರ್ತ, ನಾಯಕ ಯಾರು?

ದುನಿಯಾ ಸೂರಿ ಕೊನೆಗೂ ‘ಕಾಗೆ ಬಂಗಾರ’ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ‘ಕಾಗೆ ಬಂಗಾರ’ ಸಿನಿಮಾ ಮಾಡುವುದಾಗಿ ಘೋಷಿಸಿ ಒಂಬತ್ತು ವರ್ಷವಾಗಿತ್ತು. ಈಗ ಸಿನಿಮಾ ಸೆಟ್ಟೇರಲು ಮುಹೂರ್ತ ನಿಗದಿಯಾಗಿದೆ.

ಕೊನೆಗೂ ನಿಗದಿಯಾಯ್ತು ‘ಕಾಗೆ ಬಂಗಾರ’ಕ್ಕೆ ಮುಹೂರ್ತ, ನಾಯಕ ಯಾರು?
ದುನಿಯಾ ಸೂರಿ
ಮಂಜುನಾಥ ಸಿ.
|

Updated on: May 15, 2024 | 7:54 AM

Share

ದುನಿಯಾ ಸೂರಿ (Duniya Suri) ‘ಕಾಗೆ ಬಂಗಾರ’ (Kaage Bangara) ಸಿನಿಮಾ ಘೋಷಿಸಿ ಒಂಬತ್ತು ವರ್ಷಗಳಾಗುತ್ತಾ ಬಂತು. ‘ಕೆಂಡಸಂಪಿಗೆ’ ಸಿನಿಮಾದಲ್ಲಿ ‘ಕಾಗೆ ಬಂಗಾರ’ದ ಸುಳಿವು ನೀಡಲಾಗಿತ್ತು. ಆಗಿನಿಂದಲೂ ಸಹ ‘ಕಾಗೆ ಬಂಗಾರ’ ಸಿನಿಮಾ ಈಗ ಬರುತ್ತೆ, ಆಗ ಬರುತ್ತೆ ಎಂದು ನಿರೀಕ್ಷಿಸಲಾಗಿತ್ತು. ‘ಪಾಪ್ ಕಾರ್ನ್ ಮಂಕಿ ಟೈಗರ್​’ನಲ್ಲಿ ‘ಕಾಗೆ ಬಂಗಾರ’ದ ಸಣ್ಣ ಝಲಕ್ ನೀಡಲಾಗಿತ್ತು. ಇದೀಗ ಕೊನೆಗೂ ‘ಕಾಗೆ ಬಂಗಾರ’ ಸಿನಿಮಾಕ್ಕೆ ಮುಹೂರ್ತ ನಿಗದಿಯಾಗಿದೆ. ದುನಿಯಾ ಸೂರಿ ಕೊನೆಗೂ ‘ಕಾಗೆ ಬಂಗಾರ’ವನ್ನು ಕೈಗೆತ್ತಿಕೊಂಡಿದ್ದಾರೆ.

ಈ ಹಿಂದೆ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾವನ್ನು ಸೂರಿ ನಿರ್ದೇಶಿಸಿದ್ದರು, ಅಭಿಷೇಕ್ ಅಂಬರೀಶ್ ನಾಯಕ ನಟನಾಗಿ ನಟಿಸಿದ್ದ ಈ ಸಿನಿಮಾ ಹಿಟ್ ಆಗಲಿಲ್ಲ. ಇದೀಗ ಸೂರಿ ‘ಕಾಗೆ ಬಂಗಾರ’ವನ್ನು ಕೈಗೆತ್ತಿಕೊಂಡಿದ್ದಾರೆ. ಜಯಣ್ಣ ಕಂಬೈನ್ಸ್​ ಮೂಲಕ ಸಿನಿಮಾ ನಿರ್ಮಾಣಗೊಳ್ಳಲಿದೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯ ನಾಯಕಿಯಾಗಿ ನಟಿಸಲಿದ್ದು, ವಿರಾಟ್ ನಾಯಕ ನಟನಾಗಿ ನಟಿಸಲಿದ್ದಾರೆ.

ಇದನ್ನೂ ಓದಿ:ರಂಗಾಯಣ ರಘು ಬಗ್ಗೆ ದುನಿಯಾ ಸೂರಿ ಮನದಲ್ಲಿದೆ ಬೆಟ್ಟದಷ್ಟು ಗೌರವ

‘ಕೆಂಡಸಂಪಿಗೆ’ ಸಿನಿಮಾ ಬಿಡುಗಡೆ ಆದಾಗಲೇ ಈ ಸಿನಿಮಾದ ಪ್ರೀಕ್ವೆಲ್ ಹಾಗೂ ಸೀಕ್ವೆಲ್ ಅನ್ನು ನಿರ್ದೇಶನ ಮಾಡುವುದಾಗಿ ದುನಿಯಾ ಸೂರಿ ಹೇಳಿದ್ದರು. ‘ಕಾಗೆ ಬಂಗಾರ’ ಹಾಗೂ ‘ಬ್ಲಾಕ್ ಮ್ಯಾಜಿಕ್’ ಹೆಸರಿನಲ್ಲಿ ಆ ಸಿನಿಮಾಗಳು ಬಿಡುಗಡೆ ಆಗುವುದಾಗಿ ಘೋಷಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. 2017ರಲ್ಲಿ ‘ಕಾಗೆ ಬಂಗಾರ’ ಸಿನಿಮಾ ಕೈಗೆತ್ತಿಕೊಳ್ಳುವ ಪ್ರಯತ್ನ ಮಾಡಿದರಾದರೂ ಆಗಲೂ ಸಹ ಅದು ಸಾಧ್ಯವಾಗಲಿಲ್ಲ. ಇದೀಗ ಅಂತಿಮವಾಗಿ ಸಿನಿಮಾ ಸೆಟ್ಟೇರುತ್ತಿದೆ. ಮುಂದಿನ ತಿಂಗಳಾಂತ್ಯಕ್ಕೆ ಶೂಟಿಂಗ್ ಪ್ರಾರಂಭವಾಗಲಿದೆ.

ದುನಿಯಾ ವಿಜಯ್ ಗಾಗಿ ಹೊಸ ಸಿನಿಮಾ ಒಂದನ್ನು ದುನಿಯಾ ಸೂರಿ ನಿರ್ದೇಶನ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ದುನಿಯಾ ವಿಜಯ್ ಪ್ರಸ್ತುತ ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜಡೇಶ್ ಕುಮಾರ್ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಿಖಿಲ್ ರ ಹೊಸ ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಸಿನಿಮಾಗಳು ದುನಿಯಾ ವಿಜಯ್ ಕೈಯಲ್ಲಿವೆ. ಹಾಗಾಗಿ ದುನಿಯಾ ವಿಜಯ್ ಹಾಗೂ ದುನಿಯಾ ಸೂರಿಯ ಕಾಂಬಿನೇಷನ್ ಸಿನಿಮಾ ತಡವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು