AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dunki Movie: ರಾಜ್​ಕುಮಾರ್ ಹಿರಾನಿ ಬರ್ತ್​ಡೇಗೆ ಸಿಗುತ್ತಿದೆ ‘ಡಂಕಿ’ ಸಿನಿಮಾದ ಸಾಂಗ್

ನವೆಂಬರ್ 22ರಂದು ರಾಜ್​ಕುಮಾರ್ ಹಿರಾನಿ ಬರ್ತ್​ಡೇ. ಈ ದಿನ ಸಿನಿಮಾ ತಂಡದಿಂದ ಸಾಂಗ್ ರಿಲೀಸ್ ಆಗುತ್ತಿದೆ. ‘ಲುಪ್ ಪುಟ್ ಗಯಾ..’ ಹಾಡು ರಾಜ್​ಕುಮಾರ್ ಬರ್ತ್​ಡೇ ದಿನ ರಿಲೀಸ್ ಆಗುತ್ತಿದೆ.

Dunki Movie: ರಾಜ್​ಕುಮಾರ್ ಹಿರಾನಿ ಬರ್ತ್​ಡೇಗೆ ಸಿಗುತ್ತಿದೆ ‘ಡಂಕಿ’ ಸಿನಿಮಾದ ಸಾಂಗ್
ಡಂಕಿ ಸಿನಿಮಾ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on:Nov 21, 2023 | 8:17 PM

Share

‘ಡಂಕಿ’ ಸಿನಿಮಾ (Dunki Movie) ಡಿಸೆಂಬರ್ 22ರಂದು ರಿಲೀಸ್ ಆಗುತ್ತಿದೆ. ಶಾರುಖ್ ಖಾನ್, ತಾಪ್ಸೀ ಪನ್ನು, ವಿಕ್ಕಿ ಕೌಶಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಡಂಕಿ’ ಸಿನಿಮಾದ ಟೀಸರ್ ಗಮನ ಸೆಳೆದಿತ್ತು. ಈಗ ಸಿನಿಮಾ ತಂಡ ಸಾಂಗ್ ರಿಲೀಸ್ ಮಾಡುತ್ತಿದೆ. ಅದೂ ರಾಜ್​ಕುಮಾರ್ ಹಿರಾನಿ ಬರ್ತ್​ಡೇ ದಿನ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ನವೆಂಬರ್ 22ರಂದು ರಾಜ್​ಕುಮಾರ್ ಹಿರಾನಿ ಬರ್ತ್​ಡೇ. ಈ ದಿನ ಸಿನಿಮಾ ತಂಡದಿಂದ ಸಾಂಗ್ ರಿಲೀಸ್ ಆಗುತ್ತಿದೆ. ‘ಲುಪ್ ಪುಟ್ ಗಯಾ..’ ಹಾಡು ರಾಜ್​ಕುಮಾರ್ ಬರ್ತ್​ಡೇ ದಿನ ರಿಲೀಸ್ ಆಗುತ್ತಿದೆ. ಈ ಮೆಲೋಡಿ ಹಾಡನ್ನು ಕೇಳೋಕೆ ಕಾದು ಕೂತಿದ್ದಾರೆ. ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಶಾರುಖ್ ಖಾನ್ ಹಾಗೂ ತಾಪ್ಸಿ ಪನ್ನು ಈ ಹಾಡಿನಲ್ಲಿ ರೊಮ್ಯಾನ್ಸ್ ಮಾಡಿದ್ದು, ಇದನ್ನು ನೋಡೋಕೆ ಫ್ಯಾನ್ಸ್ ಕಾದಿದ್ದಾರೆ.

ರಾಜ್​ಕುಮಾರ್ ಹಿರಾನಿ, ಕನಿಕಾ ಧಿಲ್ಲೋನ್, ಅಭಿಜಿತ್ ಜೋಶಿ ‘ಡಂಕಿ’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ರಾಜ್ ಕುಮಾರ್ ಹಿರಾನಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಶಾರುಖ್ ಖಾನ್ ಅವರ ‘ಜವಾನ್’ ಹಾಗೂ ‘ಪಠಾಣ್’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಈಗ ಅವರು ಕ್ಲಾಸಿಕ್ ಕಥೆಯೊಂದಿಗೆ ಅಭಿಮಾನಿಗಳ ಎದುರು ಬರುತ್ತಿದ್ದಾರೆ. ಈ ಚಿತ್ರವನ್ನು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

‘ಡಂಕಿ’ ಚಿತ್ರಕ್ಕೆ ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್, ಜಿಯೋ ಸ್ಟುಡಿಯೋಸ್, ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: ಶಾರುಖ್-ಹಿರಾನಿ ಸಿನಿಮಾದಲ್ಲಿ ಹಲವು ಸ್ಟಾರ್​ಗಳು; ‘ಓಂ ಶಾಂತಿ ಓಂ’ ನೆನಪಿಸಿದ ಹೊಸ ಚಿತ್ರ

ರಾಜ್​ಕುಮಾರ್ ಹಿರಾನಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಂದ ವಿಶ್ ಬರುತ್ತಿದೆ. ಅವರಿಗೆ ನಾಲ್ಕು ರಾಷ್ಟ್ರಪ್ರಶಸ್ತಿಗಳು ಸಿಕ್ಕಿವೆ. ‘ಮುನ್ನಾ ಬಾಯ್ ಎಂಬಿಬಿಎಸ್’, ‘3 ಈಡಿಯಟ್ಸ್’, ‘ಪಿಕೆ’, ‘ಸಂಜು’ ಅಂಥ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:04 pm, Tue, 21 November 23

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ