AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?

‘ಡಂಕಿ’ ಎಂದರೆ ಅದಕ್ಕೆ ‘ಡಾಂಕಿ ಫ್ಲೈಟ್’ ಎನ್ನುವ ಅರ್ಥವೂ ಇದೆ. ಅಂದರೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅಕ್ರಮವಾಗಿ ವಲಸೆ ಹೋಗುವುದು. ಅಮೆರಿಕ ಹಾಗೂ ಕೆನಡ ಭಾಗದಲ್ಲಿ ಇದು ಹೆಚ್ಚಾಗಿದೆ. ಇದೇ ಕಥೆಯನ್ನು ರಾಜ್​ಕುಮಾರ್ ಹಿರಾನಿ ಹೇಳುತ್ತಿದ್ದಾರಂತೆ.

 ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?
ಡಂಕಿ
ರಾಜೇಶ್ ದುಗ್ಗುಮನೆ
|

Updated on: Oct 03, 2023 | 11:30 AM

Share

ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾದ (Dunki Movie) ಕೆಲಸ ಶುರುವಾಗಿ ಸಾಕಷ್ಟು ಸಮಯ ಕಳೆದಿದೆ. ಟೈಟಲ್ ರಿವೀಲ್ ಮಾಡೋಕೆ ಟೀಸರ್ ರಿಲೀಸ್ ಮಾಡಿದ್ದು ಬಿಟ್ಟರೆ ತಂಡದ ಕಡೆಯಿಂದ ಸಿನಿಮಾದ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಈಗ ‘ಡಂಕಿ’ ಸಿನಿಮಾದ ಕಥೆಯ ಕುರಿತು ಹೊಸ ಸುದ್ದಿ ಒಂದು ಹರಿದಾಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಈ ಚಿತ್ರದ ಕಥೆ ಅಕ್ರಮ ವಲಸೆ ಬಗ್ಗೆ ಇದೆ ಎಂದು ಹೇಳಲಾಗುತ್ತಿದೆ.

‘ಡಂಕಿ’ ಎಂದರೆ ಅದಕ್ಕೆ ‘ಡಾಂಕಿ ಫ್ಲೈಟ್’ ಎನ್ನುವ ಅರ್ಥವೂ ಇದೆ. ಅಂದರೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅಕ್ರಮವಾಗಿ ವಲಸೆ ಹೋಗುವುದು. ಅಮೆರಿಕ ಹಾಗೂ ಕೆನಡ ಭಾಗದಲ್ಲಿ ಇದು ಹೆಚ್ಚಾಗಿದೆ. ಇದೇ ಕಥೆಯನ್ನು ರಾಜ್​ಕುಮಾರ್ ಹಿರಾನಿ ಹೇಳುತ್ತಿದ್ದಾರಂತೆ. ಶಾರುಖ್ ಖಾನ್ ಕೂಡ ವಲಸಿಗನಾಗಿ ಕಾಣಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್​ಕುಮಾರ್ ಹಿರಾನಿ ಅವರು ಯಾವುದೇ ಸಿನಿಮಾ ಮಾಡಿದರೂ ಸಾಕಷ್ಟು ಸೆನ್ಸಿಬಲ್ ಆಗಿ ಮಾಡುತ್ತಾರೆ. ಇದಕ್ಕೆ ‘ಪಿಕೆ’, ‘ಸಂಜು’ ಮೊದಲಾದ ಸಿನಿಮಾಗಳೇ ಸಾಕ್ಷಿ. ಈಗ ‘ಡಂಕಿ’ ಸಿನಿಮಾ ಕೂಡ ಹಾಸ್ಯಭರಿತವಾಗಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿದೆ.

ಡಂಕಿ ಸಿನಿಮಾದಲ್ಲಿ ಶಾರುಖ್ ಖಾನ್, ತಾಪ್ಸೀ ಪನ್ನು ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನಲಾಗಿತ್ತು. ಇದಕ್ಕೆ ಶಾರುಖ್ ಖಾನ್ ಸ್ಪಷ್ಟನೆ ನೀಡಿದ್ದರು. ಕ್ರಿಸ್​ಮಸ್ ಪ್ರಯುಕ್ತ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಜನವರಿ ತಿಂಗಳಲ್ಲಿ ರಿಲೀಸ್ ಆಗಿ ಗೆದ್ದಿತು. ಈಗ ‘ಜವಾನ್’ ಸಿನಿಮಾ ವಿಶ್ವ ಬಾಕ್ಸ್​​ ಆಫೀಸ್​ನಲ್ಲಿ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈಗ ‘ಡಂಕಿ’ ಸಿನಿಮಾ ಕೂಡ ಗೆದ್ದರೆ ಒಂದೇ ವರ್ಷದಲ್ಲಿ ಶಾರುಖ್ ಖಾನ್​ಗೆ ಮೂರನೇ ಗೆಲುವು ಸಿಗಲಿದೆ.

ಇದನ್ನೂ ಓದಿ: ‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ

‘ಡಂಕಿ’ ಚಿತ್ರಕ್ಕೆ ಗೆಲುವು ಅಷ್ಟು ಸುಲಭದಲ್ಲಿ ಇಲ್ಲ. ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದೇ ರಿಲೀಸ್ ಆಗಲಿದೆ. ಹೀಗಾಗಿ ‘ಡಂಕಿ’ ಹಾಗೂ ಸಲಾರ್’ ಮಧ್ಯೆ ಭರ್ಜರಿ ಪೈಪೋಟಿ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು