AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?

‘ಡಂಕಿ’ ಎಂದರೆ ಅದಕ್ಕೆ ‘ಡಾಂಕಿ ಫ್ಲೈಟ್’ ಎನ್ನುವ ಅರ್ಥವೂ ಇದೆ. ಅಂದರೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅಕ್ರಮವಾಗಿ ವಲಸೆ ಹೋಗುವುದು. ಅಮೆರಿಕ ಹಾಗೂ ಕೆನಡ ಭಾಗದಲ್ಲಿ ಇದು ಹೆಚ್ಚಾಗಿದೆ. ಇದೇ ಕಥೆಯನ್ನು ರಾಜ್​ಕುಮಾರ್ ಹಿರಾನಿ ಹೇಳುತ್ತಿದ್ದಾರಂತೆ.

 ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?
ಡಂಕಿ
ರಾಜೇಶ್ ದುಗ್ಗುಮನೆ
|

Updated on: Oct 03, 2023 | 11:30 AM

Share

ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾದ (Dunki Movie) ಕೆಲಸ ಶುರುವಾಗಿ ಸಾಕಷ್ಟು ಸಮಯ ಕಳೆದಿದೆ. ಟೈಟಲ್ ರಿವೀಲ್ ಮಾಡೋಕೆ ಟೀಸರ್ ರಿಲೀಸ್ ಮಾಡಿದ್ದು ಬಿಟ್ಟರೆ ತಂಡದ ಕಡೆಯಿಂದ ಸಿನಿಮಾದ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಈಗ ‘ಡಂಕಿ’ ಸಿನಿಮಾದ ಕಥೆಯ ಕುರಿತು ಹೊಸ ಸುದ್ದಿ ಒಂದು ಹರಿದಾಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಈ ಚಿತ್ರದ ಕಥೆ ಅಕ್ರಮ ವಲಸೆ ಬಗ್ಗೆ ಇದೆ ಎಂದು ಹೇಳಲಾಗುತ್ತಿದೆ.

‘ಡಂಕಿ’ ಎಂದರೆ ಅದಕ್ಕೆ ‘ಡಾಂಕಿ ಫ್ಲೈಟ್’ ಎನ್ನುವ ಅರ್ಥವೂ ಇದೆ. ಅಂದರೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅಕ್ರಮವಾಗಿ ವಲಸೆ ಹೋಗುವುದು. ಅಮೆರಿಕ ಹಾಗೂ ಕೆನಡ ಭಾಗದಲ್ಲಿ ಇದು ಹೆಚ್ಚಾಗಿದೆ. ಇದೇ ಕಥೆಯನ್ನು ರಾಜ್​ಕುಮಾರ್ ಹಿರಾನಿ ಹೇಳುತ್ತಿದ್ದಾರಂತೆ. ಶಾರುಖ್ ಖಾನ್ ಕೂಡ ವಲಸಿಗನಾಗಿ ಕಾಣಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್​ಕುಮಾರ್ ಹಿರಾನಿ ಅವರು ಯಾವುದೇ ಸಿನಿಮಾ ಮಾಡಿದರೂ ಸಾಕಷ್ಟು ಸೆನ್ಸಿಬಲ್ ಆಗಿ ಮಾಡುತ್ತಾರೆ. ಇದಕ್ಕೆ ‘ಪಿಕೆ’, ‘ಸಂಜು’ ಮೊದಲಾದ ಸಿನಿಮಾಗಳೇ ಸಾಕ್ಷಿ. ಈಗ ‘ಡಂಕಿ’ ಸಿನಿಮಾ ಕೂಡ ಹಾಸ್ಯಭರಿತವಾಗಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿದೆ.

ಡಂಕಿ ಸಿನಿಮಾದಲ್ಲಿ ಶಾರುಖ್ ಖಾನ್, ತಾಪ್ಸೀ ಪನ್ನು ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನಲಾಗಿತ್ತು. ಇದಕ್ಕೆ ಶಾರುಖ್ ಖಾನ್ ಸ್ಪಷ್ಟನೆ ನೀಡಿದ್ದರು. ಕ್ರಿಸ್​ಮಸ್ ಪ್ರಯುಕ್ತ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಜನವರಿ ತಿಂಗಳಲ್ಲಿ ರಿಲೀಸ್ ಆಗಿ ಗೆದ್ದಿತು. ಈಗ ‘ಜವಾನ್’ ಸಿನಿಮಾ ವಿಶ್ವ ಬಾಕ್ಸ್​​ ಆಫೀಸ್​ನಲ್ಲಿ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈಗ ‘ಡಂಕಿ’ ಸಿನಿಮಾ ಕೂಡ ಗೆದ್ದರೆ ಒಂದೇ ವರ್ಷದಲ್ಲಿ ಶಾರುಖ್ ಖಾನ್​ಗೆ ಮೂರನೇ ಗೆಲುವು ಸಿಗಲಿದೆ.

ಇದನ್ನೂ ಓದಿ: ‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ

‘ಡಂಕಿ’ ಚಿತ್ರಕ್ಕೆ ಗೆಲುವು ಅಷ್ಟು ಸುಲಭದಲ್ಲಿ ಇಲ್ಲ. ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದೇ ರಿಲೀಸ್ ಆಗಲಿದೆ. ಹೀಗಾಗಿ ‘ಡಂಕಿ’ ಹಾಗೂ ಸಲಾರ್’ ಮಧ್ಯೆ ಭರ್ಜರಿ ಪೈಪೋಟಿ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ