AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?

‘ಡಂಕಿ’ ಎಂದರೆ ಅದಕ್ಕೆ ‘ಡಾಂಕಿ ಫ್ಲೈಟ್’ ಎನ್ನುವ ಅರ್ಥವೂ ಇದೆ. ಅಂದರೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅಕ್ರಮವಾಗಿ ವಲಸೆ ಹೋಗುವುದು. ಅಮೆರಿಕ ಹಾಗೂ ಕೆನಡ ಭಾಗದಲ್ಲಿ ಇದು ಹೆಚ್ಚಾಗಿದೆ. ಇದೇ ಕಥೆಯನ್ನು ರಾಜ್​ಕುಮಾರ್ ಹಿರಾನಿ ಹೇಳುತ್ತಿದ್ದಾರಂತೆ.

 ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?
ಡಂಕಿ
ರಾಜೇಶ್ ದುಗ್ಗುಮನೆ
|

Updated on: Oct 03, 2023 | 11:30 AM

Share

ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾದ (Dunki Movie) ಕೆಲಸ ಶುರುವಾಗಿ ಸಾಕಷ್ಟು ಸಮಯ ಕಳೆದಿದೆ. ಟೈಟಲ್ ರಿವೀಲ್ ಮಾಡೋಕೆ ಟೀಸರ್ ರಿಲೀಸ್ ಮಾಡಿದ್ದು ಬಿಟ್ಟರೆ ತಂಡದ ಕಡೆಯಿಂದ ಸಿನಿಮಾದ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಈಗ ‘ಡಂಕಿ’ ಸಿನಿಮಾದ ಕಥೆಯ ಕುರಿತು ಹೊಸ ಸುದ್ದಿ ಒಂದು ಹರಿದಾಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಈ ಚಿತ್ರದ ಕಥೆ ಅಕ್ರಮ ವಲಸೆ ಬಗ್ಗೆ ಇದೆ ಎಂದು ಹೇಳಲಾಗುತ್ತಿದೆ.

‘ಡಂಕಿ’ ಎಂದರೆ ಅದಕ್ಕೆ ‘ಡಾಂಕಿ ಫ್ಲೈಟ್’ ಎನ್ನುವ ಅರ್ಥವೂ ಇದೆ. ಅಂದರೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅಕ್ರಮವಾಗಿ ವಲಸೆ ಹೋಗುವುದು. ಅಮೆರಿಕ ಹಾಗೂ ಕೆನಡ ಭಾಗದಲ್ಲಿ ಇದು ಹೆಚ್ಚಾಗಿದೆ. ಇದೇ ಕಥೆಯನ್ನು ರಾಜ್​ಕುಮಾರ್ ಹಿರಾನಿ ಹೇಳುತ್ತಿದ್ದಾರಂತೆ. ಶಾರುಖ್ ಖಾನ್ ಕೂಡ ವಲಸಿಗನಾಗಿ ಕಾಣಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್​ಕುಮಾರ್ ಹಿರಾನಿ ಅವರು ಯಾವುದೇ ಸಿನಿಮಾ ಮಾಡಿದರೂ ಸಾಕಷ್ಟು ಸೆನ್ಸಿಬಲ್ ಆಗಿ ಮಾಡುತ್ತಾರೆ. ಇದಕ್ಕೆ ‘ಪಿಕೆ’, ‘ಸಂಜು’ ಮೊದಲಾದ ಸಿನಿಮಾಗಳೇ ಸಾಕ್ಷಿ. ಈಗ ‘ಡಂಕಿ’ ಸಿನಿಮಾ ಕೂಡ ಹಾಸ್ಯಭರಿತವಾಗಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿದೆ.

ಡಂಕಿ ಸಿನಿಮಾದಲ್ಲಿ ಶಾರುಖ್ ಖಾನ್, ತಾಪ್ಸೀ ಪನ್ನು ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನಲಾಗಿತ್ತು. ಇದಕ್ಕೆ ಶಾರುಖ್ ಖಾನ್ ಸ್ಪಷ್ಟನೆ ನೀಡಿದ್ದರು. ಕ್ರಿಸ್​ಮಸ್ ಪ್ರಯುಕ್ತ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಜನವರಿ ತಿಂಗಳಲ್ಲಿ ರಿಲೀಸ್ ಆಗಿ ಗೆದ್ದಿತು. ಈಗ ‘ಜವಾನ್’ ಸಿನಿಮಾ ವಿಶ್ವ ಬಾಕ್ಸ್​​ ಆಫೀಸ್​ನಲ್ಲಿ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈಗ ‘ಡಂಕಿ’ ಸಿನಿಮಾ ಕೂಡ ಗೆದ್ದರೆ ಒಂದೇ ವರ್ಷದಲ್ಲಿ ಶಾರುಖ್ ಖಾನ್​ಗೆ ಮೂರನೇ ಗೆಲುವು ಸಿಗಲಿದೆ.

ಇದನ್ನೂ ಓದಿ: ‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ

‘ಡಂಕಿ’ ಚಿತ್ರಕ್ಕೆ ಗೆಲುವು ಅಷ್ಟು ಸುಲಭದಲ್ಲಿ ಇಲ್ಲ. ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದೇ ರಿಲೀಸ್ ಆಗಲಿದೆ. ಹೀಗಾಗಿ ‘ಡಂಕಿ’ ಹಾಗೂ ಸಲಾರ್’ ಮಧ್ಯೆ ಭರ್ಜರಿ ಪೈಪೋಟಿ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?