AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?

‘ಡಂಕಿ’ ಎಂದರೆ ಅದಕ್ಕೆ ‘ಡಾಂಕಿ ಫ್ಲೈಟ್’ ಎನ್ನುವ ಅರ್ಥವೂ ಇದೆ. ಅಂದರೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅಕ್ರಮವಾಗಿ ವಲಸೆ ಹೋಗುವುದು. ಅಮೆರಿಕ ಹಾಗೂ ಕೆನಡ ಭಾಗದಲ್ಲಿ ಇದು ಹೆಚ್ಚಾಗಿದೆ. ಇದೇ ಕಥೆಯನ್ನು ರಾಜ್​ಕುಮಾರ್ ಹಿರಾನಿ ಹೇಳುತ್ತಿದ್ದಾರಂತೆ.

 ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?
ಡಂಕಿ
ರಾಜೇಶ್ ದುಗ್ಗುಮನೆ
|

Updated on: Oct 03, 2023 | 11:30 AM

Share

ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾದ (Dunki Movie) ಕೆಲಸ ಶುರುವಾಗಿ ಸಾಕಷ್ಟು ಸಮಯ ಕಳೆದಿದೆ. ಟೈಟಲ್ ರಿವೀಲ್ ಮಾಡೋಕೆ ಟೀಸರ್ ರಿಲೀಸ್ ಮಾಡಿದ್ದು ಬಿಟ್ಟರೆ ತಂಡದ ಕಡೆಯಿಂದ ಸಿನಿಮಾದ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಈಗ ‘ಡಂಕಿ’ ಸಿನಿಮಾದ ಕಥೆಯ ಕುರಿತು ಹೊಸ ಸುದ್ದಿ ಒಂದು ಹರಿದಾಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಈ ಚಿತ್ರದ ಕಥೆ ಅಕ್ರಮ ವಲಸೆ ಬಗ್ಗೆ ಇದೆ ಎಂದು ಹೇಳಲಾಗುತ್ತಿದೆ.

‘ಡಂಕಿ’ ಎಂದರೆ ಅದಕ್ಕೆ ‘ಡಾಂಕಿ ಫ್ಲೈಟ್’ ಎನ್ನುವ ಅರ್ಥವೂ ಇದೆ. ಅಂದರೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅಕ್ರಮವಾಗಿ ವಲಸೆ ಹೋಗುವುದು. ಅಮೆರಿಕ ಹಾಗೂ ಕೆನಡ ಭಾಗದಲ್ಲಿ ಇದು ಹೆಚ್ಚಾಗಿದೆ. ಇದೇ ಕಥೆಯನ್ನು ರಾಜ್​ಕುಮಾರ್ ಹಿರಾನಿ ಹೇಳುತ್ತಿದ್ದಾರಂತೆ. ಶಾರುಖ್ ಖಾನ್ ಕೂಡ ವಲಸಿಗನಾಗಿ ಕಾಣಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್​ಕುಮಾರ್ ಹಿರಾನಿ ಅವರು ಯಾವುದೇ ಸಿನಿಮಾ ಮಾಡಿದರೂ ಸಾಕಷ್ಟು ಸೆನ್ಸಿಬಲ್ ಆಗಿ ಮಾಡುತ್ತಾರೆ. ಇದಕ್ಕೆ ‘ಪಿಕೆ’, ‘ಸಂಜು’ ಮೊದಲಾದ ಸಿನಿಮಾಗಳೇ ಸಾಕ್ಷಿ. ಈಗ ‘ಡಂಕಿ’ ಸಿನಿಮಾ ಕೂಡ ಹಾಸ್ಯಭರಿತವಾಗಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿದೆ.

ಡಂಕಿ ಸಿನಿಮಾದಲ್ಲಿ ಶಾರುಖ್ ಖಾನ್, ತಾಪ್ಸೀ ಪನ್ನು ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನಲಾಗಿತ್ತು. ಇದಕ್ಕೆ ಶಾರುಖ್ ಖಾನ್ ಸ್ಪಷ್ಟನೆ ನೀಡಿದ್ದರು. ಕ್ರಿಸ್​ಮಸ್ ಪ್ರಯುಕ್ತ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಜನವರಿ ತಿಂಗಳಲ್ಲಿ ರಿಲೀಸ್ ಆಗಿ ಗೆದ್ದಿತು. ಈಗ ‘ಜವಾನ್’ ಸಿನಿಮಾ ವಿಶ್ವ ಬಾಕ್ಸ್​​ ಆಫೀಸ್​ನಲ್ಲಿ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈಗ ‘ಡಂಕಿ’ ಸಿನಿಮಾ ಕೂಡ ಗೆದ್ದರೆ ಒಂದೇ ವರ್ಷದಲ್ಲಿ ಶಾರುಖ್ ಖಾನ್​ಗೆ ಮೂರನೇ ಗೆಲುವು ಸಿಗಲಿದೆ.

ಇದನ್ನೂ ಓದಿ: ‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ

‘ಡಂಕಿ’ ಚಿತ್ರಕ್ಕೆ ಗೆಲುವು ಅಷ್ಟು ಸುಲಭದಲ್ಲಿ ಇಲ್ಲ. ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದೇ ರಿಲೀಸ್ ಆಗಲಿದೆ. ಹೀಗಾಗಿ ‘ಡಂಕಿ’ ಹಾಗೂ ಸಲಾರ್’ ಮಧ್ಯೆ ಭರ್ಜರಿ ಪೈಪೋಟಿ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!