AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ನೋಡಿ ಇಂಗ್ಲಿಷ್​ ಶ್ರೀವಲ್ಲಿ; ವಿದೇಶಿಗರಲ್ಲೂ ಕ್ರೇಜ್​ ಹುಟ್ಟಿಸಿದ ರಶ್ಮಿಕಾ-ಅಲ್ಲು ಅರ್ಜುನ್​ ಹಾಡು

‘ಪುಷ್ಪ’ ಚಿತ್ರದ ‘ಶ್ರೀವಲ್ಲಿ..’ ಹಾಡಿಗೆ ಇಂಗ್ಲಿಷ್​ ಸಾಹಿತ್ಯವನ್ನು ಜೋಡಿಸಿ ಈ ಗೀತೆಯನ್ನು ಸಿದ್ಧಪಡಿಸಲಾಗಿದೆ. ಯೂಟ್ಯೂಬ್​ನಲ್ಲಿ ಈ ಹಾಡು ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಇಲ್ಲಿ ನೋಡಿ ಇಂಗ್ಲಿಷ್​ ಶ್ರೀವಲ್ಲಿ; ವಿದೇಶಿಗರಲ್ಲೂ ಕ್ರೇಜ್​ ಹುಟ್ಟಿಸಿದ ರಶ್ಮಿಕಾ-ಅಲ್ಲು ಅರ್ಜುನ್​ ಹಾಡು
ರಶ್ಮಿಕಾ ಮಂದಣ್ಣ, ಎಮ್ಮಾ ಹೀಸ್ಟರ್ಸ್
TV9 Web
| Edited By: |

Updated on:Feb 05, 2022 | 4:02 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ‘ಪುಷ್ಪ’ ಸಿನಿಮಾದಿಂದ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ನಿರೀಕ್ಷೆಯಂತೆಯೇ ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 300 ಕೋಟಿಗಿಂತಲೂ ಹೆಚ್ಚು ಹಣವನ್ನು ಬಾಚಿಕೊಂಡಿತು. ಅಲ್ಲು ಅರ್ಜುನ್ (Allu Arjun)​ ವೃತ್ತಿಜೀವನಕ್ಕೆ ಇದರಿಂದ ದೊಡ್ಡ ಮೈಲೇಜ್​ ಸಿಕ್ಕಿತು. ಖ್ಯಾತ ನಿರ್ದೇಶಕ ಸುಕುಮಾರ್​ ಆ್ಯಕ್ಷನ್​ ಕಟ್ ಹೇಳಿದ್ದ ‘ಪುಷ್ಪ’ (Pushpa Movie) ಸಿನಿಮಾದ ಗೆಲುವಿನ ಹಿಂದೆ ಹಾಡಗಳ ಕೊಡುಗೆ ದೊಡ್ಡದಿದೆ ಎಂಬುದನ್ನು ಮರೆಯುವಂತಿಲ್ಲ. ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್​ ಅವರ ಬತ್ತಳಿಕೆಯಿಂದ ಬಂದ ಎಲ್ಲ ಹಾಡುಗಳು ಕೂಡ ಕೇಳುಗರಿಗೆ ಇಷ್ಟ ಆಗಿವೆ. ‘ಹೂ ಅಂತೀಯಾ ಮಾವ.. ಊಹೂ ಅಂತೀಯಾ ಮಾವ..’ ಹಾಡು ಮಾಡಿದ ಮೋಡಿ ಅಷ್ಟಿಷ್ಟಲ್ಲ. ಅದೇ ರೀತಿ ‘ಶ್ರೀವಲ್ಲಿ..’ ಗೀತೆ ಕೂಡ ವಿಶ್ವಾದ್ಯಂತ ಫೇಮಸ್​ ಆಯಿತು. ಈಗ ಅದೇ ಹಾಡಿನ ಇಂಗ್ಲಿಷ್​ ಅವತರಣಿಕೆ ಕೂಡ ವೈರಲ್​ ಆಗುತ್ತಿದೆ. ಹಾಗಂತ ಇದು ಚಿತ್ರತಂಡದಿಂದ ರಿಲೀಸ್​ ಆದ ಸಾಂಗ್​ ಅಲ್ಲ. ಆದರೂ ಸಹ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕೇಳುಗರೆಲ್ಲ ಈ ಇಂಗ್ಲಿಷ್​ ಶ್ರೀವಲ್ಲಿಯ ಧ್ವನಿಗೆ ತಲೆದೂಗುತ್ತಿದ್ದಾರೆ.

ನೆದರ್​ಲೆಂಡ್​ ಮೂಲದ ಗಾಯಕಿ ಎಮ್ಮಾ ಹೀಸ್ಟರ್ಸ್​ ಅವರು ‘ಪುಷ್ಪ’ ಚಿತ್ರದ ಶ್ರೀವಲ್ಲಿ ಹಾಡಿಗೆ ಕವರ್​ ವರ್ಷನ್​ ಮಾಡಿದ್ದಾರೆ. ಅದನ್ನು ಕೇಳಿ ಜನಸಾಮಾನ್ಯರು ಮಾತ್ರವಲ್ಲದೇ ಸ್ವತಃ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್​ ಕೂಡ ಫಿದಾ ಆಗಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ‘ಈ ಹಾಡು ನನಗೆ ತುಂಬ ಇಷ್ಟವಾಯಿತು. ಸಿದ್​ ಶ್ರೀರಾಮ್​ ಅವರೇ, ತಮಾಷೆಯಾಗಿ ಒಂದು ಇಂಗ್ಲಿಷ್​ ವರ್ಷನ್​ ಮಾಡೋಣ ಅಂತ ರೆಕಾರ್ಡಿಂಗ್​ ಶುರುಮಾಡಿದ್ದಾಗಲೇ ನಾನು ಹೇಳಿದ್ದೆ. ಆದರೆ ಈಗ ಎಮ್ಮಾ ಹೀಸ್ಟರ್ಸ್​ ಅವರು ತುಂಬ ಚೆನ್ನಾಗಿ ಕವರ್​ ಸಾಂಗ್​ ಮಾಡಿದ್ದಾರೆ. ನಾವು ಕೂಡ ನಮ್ಮ ವರ್ಷನ್​ ಮಾಡಬೇಕು ಎನಿಸುತ್ತದೆ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಜನಪ್ರಿಯ ಗೀತೆಗಳ ಕವರ್​ ವರ್ಷನ್​ ಮಾಡುವ ಮೂಲಕ ಎಮ್ಮಾ ಹೀಸ್ಟರ್ಸ್​ ಅವರು ಫೇಮಸ್​ ಆಗಿದ್ದಾರೆ. ‘ಪುಷ್ಪ’ ಚಿತ್ರದ ‘ಶ್ರೀವಲ್ಲಿ..’ ಹಾಡಿಗೆ ಇಂಗ್ಲಿಷ್​ ಸಾಹಿತ್ಯವನ್ನು ಜೋಡಿಸಿ ಅವರು ಈ ಗೀತೆಯನ್ನು ಸಿದ್ಧಪಡಿಸಿದ್ದಾರೆ. ಯೂಟ್ಯೂಬ್​ನಲ್ಲಿ ಈ ಹಾಡು ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಈ ಸಿನಿಮಾ ಗೆಲುವಿನಿಂದ ನಿರ್ದೇಶಕ ಸುಕುಮಾರ್​ಗೆ ಹೊಸ ಹುರುಪು ಬಂದಿದೆ. ಅವರು ಪಾರ್ಟ್​ 2 ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಬಾರಿ ಅವರು ಐಟಂ ಸಾಂಗ್​ ಬಗ್ಗೆ ವಿಶೇಷ ಆಸಕ್ತಿ ತೋರಿದ್ದಾರೆ. ಆರಂಭದಿಂದಲೇ ಈ ಬಗ್ಗೆ ಟಾಕ್​ ಶುರುವಾಗುವಂತೆ ನೋಡಿಕೊಳ್ಳುವ ಆಲೋಚನೆಯಲ್ಲಿ ಅವರಿದ್ದಾರೆ. ಈ ಬಾರಿ ಮತ್ತೆ ಸಮಂತಾ ಅವರಿಗೆ ಅವಕಾಶ ನೀಡೋದು ಅನುಮಾನ ಎನ್ನಲಾಗುತ್ತಿದೆ. ಎರಡನೇ ಪಾರ್ಟ್​ನಲ್ಲೂ ಅವರು ಬಂದರೆ ಮೊದಲಿನಷ್ಟೇ ಕ್ರೇಜ್​ ತೋರಿಸುತ್ತಾರೆ ಎಂಬುದು ಅನುಮಾನ. ಹೀಗಾಗಿ, ಹೊಸ ನಟಿಯರಿಗೆ ಚಾನ್ಸ್​ ನೀಡೋಕೆ ಸುಕುಮಾರ್ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:

ಕಂಠೀರವ ಸ್ಟುಡಿಯೋ ಹೊರಗೆ ‘ಪುಷ್ಪ’ ಘೋಷಣೆ; ಅಲ್ಲು ಅರ್ಜುನ್​ ನೋಡೋಕೆ ಅಭಿಮಾನಿಗಳ ದಂಡು

ಹಿಂದಿ ಡಬ್ಬಿಂಗ್​​ ಮೂಲಕ 100 ಕೋಟಿ ರೂ. ಬಾಚಿದ ‘ಪುಷ್ಪ’ ಚಿತ್ರ; ಹಾಗಾದ್ರೆ ‘ಕೆಜಿಎಫ್​’ ಗಳಿಸಿದ್ದೆಷ್ಟು?

Published On - 3:57 pm, Sat, 5 February 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?