AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR’ ಚಿತ್ರತಂಡದಲ್ಲಿ ಒಳಜಗಳ; ಆಸ್ಕರ್​ ಗೆದ್ದ ಬಳಿಕ ಬಯಲಾಯ್ತು ಅಸಮಾಧಾನ

DVV Danayya | SS Rajamouli: ಗೋಲ್ಡನ್​ ಗ್ಲೋಬ್ಸ್​, ಆಸ್ಕರ್​ ಮುಂತಾದ ಪ್ರಶಸ್ತಿ ಪ್ರದಾನ ಸಮಾರಂಭಗಳಿಗೆ ‘ಆರ್​ಆರ್​ಆರ್’ ತಂಡ ತೆರಳಿತ್ತು. ಆದರೆ ಅಲ್ಲಿ ನಿರ್ಮಾಪಕ ಡಿವಿವಿ ದಾನಯ್ಯ ಕಾಣಿಸಿಕೊಳ್ಳಲೇ ಇಲ್ಲ.

‘RRR’ ಚಿತ್ರತಂಡದಲ್ಲಿ ಒಳಜಗಳ; ಆಸ್ಕರ್​ ಗೆದ್ದ ಬಳಿಕ ಬಯಲಾಯ್ತು ಅಸಮಾಧಾನ
ರಾಜಮೌಳಿ, ಡಿವಿವಿ ದಾನಯ್ಯ, ಜೂನಿಯರ್​ ಎನ್​ಟಿಆರ್​, ರಾಮ್​ ಚರಣ್
ಮದನ್​ ಕುಮಾರ್​
|

Updated on:Mar 14, 2023 | 10:08 PM

Share

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ (RRR Movie) ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಈ ಚಿತ್ರ ಸೌಂಡು ಮಾಡಿದೆ. ಭಾರತೀಯ ಸಿನಿಮಾಗಳತ್ತ ಹಾಲಿವುಡ್​ ಮಂದಿ ತಿರುಗಿ ನೋಡುವಂತಾಗಿದೆ. ಅದಕ್ಕೆಲ್ಲ ಕಾರಣ ಆಗಿರುವುದು ‘ನಾಟು ನಾಟು..’ ಹಾಡಿನ (Naatu Naatu Song) ಆಸ್ಕರ್​ ಗೆಲುವು. ಇತ್ತೀಚೆಗೆ ನಡೆದ ಅಕಾಡೆಮಿ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಈ ಗೀತೆಗೆ ‘ಬೆಸ್ಟ್​ ಒರಿಜಿನಲ್​ ಸಾಂಗ್​’ ಆಸ್ಕರ್​ ಪ್ರಶಸ್ತಿ ಒಲಿಯಿತು. ಅದರ ಬೆನ್ನಲ್ಲೇ ಒಂದು ಅಚ್ಚರಿಯ ವಿಚಾರ ಹೊರಬಿದ್ದಿದೆ. ‘ಆರ್​ಆರ್​ಆರ್​’ ಚಿತ್ರತಂಡದಲ್ಲೇ ಒಳಜಗಳ ಇದೆ. ಈ ಸಿನಿಮಾದ ನಿರ್ಮಾಪಕ ಡಿವಿವಿ ದಾನಯ್ಯ (DVV Danayya) ಅವರು ಅಸಮಾಧಾನ ಮಾಡಿಕೊಂಡಿದ್ದಾರೆ. ಆ ಬಗ್ಗೆ ಟಾಲಿವುಡ್​ ಅಂಗಳಲ್ಲಿ ಗುಸುಗುಸು​ ಹಬ್ಬಿದೆ.

‘ಆರ್​ಆರ್​ಆರ್’ ಸಿನಿಮಾ ಆಸ್ಕರ್​ ಪ್ರಶಸ್ತಿ ಗೆಲ್ಲಲು ನಡೆಸಿದ ಪ್ರಯತ್ನಗಳ ಬಗ್ಗೆ ಹಲವು ಬಗೆಯ ಮಾತುಗಳು ಕೇಳಿಬಂದಿವೆ. ಈ ಚಿತ್ರವನ್ನು ಸ್ವತಂತ್ರವಾಗಿ ಆಸ್ಕರ್​ ಸ್ಪರ್ಧೆಗೆ ಕಳಿಸಲು ನಿರ್ದೇಶಕ ರಾಜಮೌಳಿ ಸಾಕಷ್ಟು ಹಣ ಕರ್ಚು ಮಾಡಿದ್ದಾರೆ ಎಂದು ಕೂಡ ಕೆಲವರು ಆರೋಪಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಿರ್ಮಾಪಕ ಡಿವಿವಿ ದಾನಯ್ಯ ಅವರ ಜೊತೆ ಚಿತ್ರತಂಡ ಸಂಪರ್ಕದಲ್ಲೇ ಇಲ್ಲ ಎಂಬ ಸತ್ಯ ಈಗ ಬಯಲಾಗಿದೆ.

ಇದನ್ನೂ ಓದಿ: Naatu Naatu: ಮಗನ ಸಿನಿಮಾದ ಹಾಡಿಗೆ ಆಸ್ಕರ್​ ಪ್ರಶಸ್ತಿ; ಮೆಗಾಸ್ಟಾರ್​ ಜಿರಂಜೀವಿ ಮೊದಲ ರಿಯಾಕ್ಷನ್​

ಇದನ್ನೂ ಓದಿ
Image
Oscar 2023 Winners List: ಈ ವರ್ಷ ಆಸ್ಕರ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Image
Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
Image
The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 
Image
Ram Charan: ‘ಭಾರತೀಯರಿಗೆ ಆಸ್ಕರ್​ ಪ್ರಶಸ್ತಿ ಅಂದ್ರೆ ಒಲಂಪಿಕ್ಸ್​ ಗೋಲ್ಡ್​ ಮೆಡಲ್​ ಇದ್ದಂಗೆ’: ರಾಮ್​ ಚರಣ್​

ಗೋಲ್ಡನ್​ ಗ್ಲೋಬ್ಸ್​, ಆಸ್ಕರ್​ ಮುಂತಾದ ಪ್ರಶಸ್ತಿ ಪ್ರದಾನ ಸಮಾರಂಭಗಳಿಗೆ ‘ಆರ್​ಆರ್​ಆರ್’ ತಂಡ ತೆರಳಿದ್ದಾಗ ಅಲ್ಲಿ ನಿರ್ಮಾಪಕ ಡಿವಿವಿ ದಾನಯ್ಯ ಕಾಣಿಸಿಕೊಳ್ಳಲೇ ಇಲ್ಲ. ರಾಜಮೌಳಿ ಜೊತೆ ಅವರಿಗೆ ಇರುವ ಅಸಮಾಧಾನದ ಕಾರಣದಿಂದಲೇ ಅವರು ತಂಡದಿಂದ ಹೊರಗೆ ಉಳಿದರು ಎಂದು ಹೇಳಲಾಗುತ್ತಿದೆ. ಈಗ ಎಎನ್​ಐ ಸುದ್ದಿ ಸಂಸ್ಥೆಗೆ ದಾನಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರಶಸ್ತಿ ಬಂದಿದ್ದಕ್ಕೆ ಖುಷಿ ಇದೆ. ಆದರೆ ನಾನು ಯಾರ ಜೊತೆಯೂ ಸಂಪರ್ಕದಲ್ಲಿ ಇಲ್ಲ’ ಎಂದು ಅವರು ಹೇಳಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: MM Keeravani Remuneration: ದುಬಾರಿ ಸಂಭಾವನೆ ಪಡೆಯುವ ಎಂಎಂ ಕೀರವಾಣಿ; ಆಸ್ಕರ್​ ಪ್ರಶಸ್ತಿ ಗೆದ್ದ ಬಳಿಕ ಹೆಚ್ಚಿತು ಬೇಡಿಕೆ

‘ಫಾರ್​ ಯುವರ್​ ಕನ್ಸಿಡರೇಷನ್​’ ಕ್ಯಾಂಪೇನ್​ ಮೂಲಕ ರಾಜಮೌಳಿ ಅವರು ‘ಆರ್​ಆರ್​ಆರ್​’ ಚಿತ್ರವನ್ನು ಆಸ್ಕರ್​ ಅಂಗಳದ ತನಕ ತೆಗೆದುಕೊಂಡು ಹೋದರು. ಇದಕ್ಕೆ ದುಡ್ಡು ಖರ್ಚು ಮಾಡುವುದು ಡಿವಿವಿ ದಾನಯ್ಯ ಅವರಿಗೆ ಇಷ್ಟ ಇರಲಿಲ್ಲ ಎನ್ನಲಾಗುತ್ತಿದೆ. ಆ ಕಾರಣದಿಂದಲೇ ಅವರು ತಂಡದಿಂದ ಹೊರಗೆ ಉಳಿದುಕೊಂಡರು ಎಂಬ ಸುದ್ದಿ ಹರಡಿದೆ. ಈ ಬಗ್ಗೆ ರಾಜಮೌಳಿ ಅಥವಾ ಚಿತ್ರತಂಡದ ಯಾರಾದರೂ ಸ್ಪಷ್ಟನೆ ನೀಡಬೇಕಿದೆ.

‘ನಾಟು ನಾಟು..’ ಹಾಡಿಗೆ ಆಸ್ಕರ್​ ಪ್ರಶಸ್ತಿ ಬಂದಿದ್ದನ್ನು ಭಾರತದ ಅನೇಕ ಸೆಲೆಬ್ರಿಟಿಗಳು ಸಂಭ್ರಮಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಕೂಡ ‘ಆರ್​ಆರ್​ಆರ್​’ ತಂಡಕ್ಕೆ ಶುಭ ಕೋರಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:04 pm, Tue, 14 March 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್