AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dwarakish: ನಾಳೆ ಶ್ರೀರಂಗಪಟ್ಟಣದಲ್ಲಿ ದ್ವಾರಕೀಶ್ ಅಸ್ಥಿ ವಿಸರ್ಜನೆ: ಇಲ್ಲಿದೆ ಸಮಯದ ವಿವರ

ನಟ ದ್ವಾರಕೀಶ್‌ ಅವರ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ದ್ವಾರಕೀಶ್ ಕುಟುಂಬಸ್ಥರು ಕಣ್ಣೀರ ಕಡಲಲ್ಲಿ ಮುಳುಗಿದ್ದರು. ನಟ ನಟಿಯರು, ಸಂಬಂಧಿಕರು ಕಣ್ಣೀರ ವಿದಾಯ ಹೇಳಿದ್ದರು. 81 ವರ್ಷದ ಪ್ರಚಂಡ ಕುಳ್ಳ ಇಂದು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಾಳೆ ಬೆಳಗ್ಗೆ 9ಕ್ಕೆ ಶ್ರೀರಂಗಪಟ್ಟಣದಲ್ಲಿ ದ್ವಾರಕೀಶ್ ಅವರ ಅಸ್ಥಿಯನ್ನು ಕುಟುಂಬಸ್ಥರು ವಿಸರ್ಜನೆ ಮಾಡಲಿದ್ದಾರೆ.

Dwarakish: ನಾಳೆ ಶ್ರೀರಂಗಪಟ್ಟಣದಲ್ಲಿ ದ್ವಾರಕೀಶ್ ಅಸ್ಥಿ ವಿಸರ್ಜನೆ: ಇಲ್ಲಿದೆ ಸಮಯದ ವಿವರ
ನಟ ದ್ವಾರಕೀಶ್
Mangala RR
| Edited By: |

Updated on:Apr 17, 2024 | 10:31 PM

Share

ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (Dwarakish) ಅವರ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನವಾಗಿದೆ. 81 ವರ್ಷದ ಜೀವನದಲ್ಲಿ 60 ವರ್ಷ ಚಿತ್ರೋದ್ಯಮದ ಏಳಿಗೆಗೆ ಜೀವನ ಸವೆಸಿದ ಹಿರಿಯ ನಟ ಕಣ್ಮರೆಯಾಗಿದ್ದಾರೆ. ಅವರ ಅಗಲಿಕೆ ನಿಜಕ್ಕೂ ಕನ್ನಡ ಚಲನಚಿತ್ರರಂಗಕ್ಕೆ (sandalwood) ದೊಡ್ಡ ನಷ್ಟ ಉಂಟುಮಾಡಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಟ ದ್ವಾರಕೀಶ್ ಪಾರ್ಥಿವ ಶರೀರದ ಅಂತಿಮ ವಿಧಿವಿಧಾನ ನೆರವೇರಿದೆ. ನಾಳೆ ದ್ವಾರಕೀಶ್ ಕುಟುಂಬಸ್ಥರಿಂದ ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ರುದ್ರಭೂಮಿಯಲ್ಲಿ ಕುಟುಂಬಸ್ಥರಿಂದ ಪೂಜೆ ಮಾಡಲಿದ್ದು, ಬಳಿಕ ಅಸ್ಥಿ ತೆಗೆದುಕೊಂಡು ಬೆಳಗ್ಗೆ 9ಕ್ಕೆ ಶ್ರೀರಂಗಪಟ್ಟಣದಲ್ಲಿ ವಿಸರ್ಜನೆ ಮಾಡಲಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರು ತಮ್ಮ ನಿವಾಸದಲ್ಲೇ ಕನ್ನಡದ ಹಿರಿಯ ನಟ ದ್ವಾರಕೀಶ್​ ನಿನ್ನೆ ವಿಧಿವಶರಾಗಿದ್ದರು. ನಟ, ನಿರ್ದೇಶಕ, ನಿರ್ಮಾಪಕ ಅಂತಾ ಕನ್ನಡ ಸಿನಿ ದುನಿಯಾದಲ್ಲಿ ಆಲ್‌ರೌಂಡರ್ ಆಗಿದ್ದ ದ್ವಾರಕೀಶ್ರ ಅಂತಿಮ ದರ್ಶನಕ್ಕೆ ಇಡೀ ಸ್ಯಾಂಡಲ್‌ವುಡ್‌ ಕಾಯುತ್ತಿತ್ತು. ಹೀಗಾಗಿ ರವೀಂದ್ರ ಕಲಾ ಕ್ಷೇತ್ರದಲ್ಲೇ ಬೆಳಗ್ಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: ದ್ವಾರಕೀಶ್ ಪಂಚಭೂತಗಳಲ್ಲಿ ಲೀನ; ಹಿರಿಯ ಮಗನಿಂದ ಚಿತೆಗೆ ಅಗ್ನಿಸ್ಪರ್ಶ

ನಟರಾದ ಸುದೀಪ್, ಯಶ್‌, ದರ್ಶನ್‌, ಶಿವರಾಜ್‌ ಕುಮಾರ್‌, ರವಿಚಂದ್ರನ್, ಜಗ್ಗೇಶ್‌, ದೇವರಾಜ್ , ರಾಘವೇಂದ್ರ ರಾಜಕುಮಾರ್, ರಮೇಶ್ ಅರವಿಂದ್, ಕುಮಾರ್ ಬಂಗಾರಪ್ಪ, ಶ್ರೀಮುರುಳಿ, ಸೇರಿದಂತೆ ಇಡೀ ಚಿತ್ರರಂಗವೇ ಅಂತಿಮ ನಮನ ಸಲ್ಲಿಸಿದ್ದರು.

ಸುಧಾರಾಣಿ, ಮಾಳವಿಕಿ ಅವಿನಾಶ್‌, ಸುಮಲತಾ ಅಂಬರೀಶ್‌, ಗಿರೀಶ್‌ ಲೋಕೇಶ್‌, ಶೃತಿ ಸೇರಿದಂತೆ ನಟಿಯರು ಕೂಡ ಹಿರಿಯಣ್ಣನಿಗೆ ಭಾವುಕ ವಿದಾಯ ಹೇಳಿದ್ದರು. ಅದರಲ್ಲೂ ಶೃತಿಯಂಥೂ ಬಿಕ್ಕಿಬಿಕ್ಕಿ ಅತ್ತಿದ್ದರು.

ಇದನ್ನೂ ಓದಿ: ವಿನೋದ್ ರಾಜ್ ಸೇರಿ ಅನೇಕರನ್ನು ಪರಿಚಯಿಸಿದ್ದೇಕೆ ದ್ವಾರಕೀಶ್? ವಿಷ್ಣು ಮೇಲಿನ ಸಿಟ್ಟು ಕಾರಣವಾ?

ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್‌ ಮೂಲಕವೇ ಸಂತಾಪ ಸೂಚಿಸಿದ್ದರೆ, ಸಿಎಂ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿದ್ದು ಅವರ ಜತೆಗಿನ ಒಡನಾಟ ಮೆಲುಕು ಹಾಕಿದ್ದರು.

ಐವರ ಪುತ್ರರಿಂದಲೂ ತಂದೆಗೆ ಅಗ್ನಿಸ್ಪರ್ಶ

ಕಲಾವಿದರು, ಅಭಿಮಾನಿಗಳು, ಗಣ್ಯರ ಅಂತಿಮ ದರ್ಶನದ ಬಳಿಕ ಪಾರ್ಥಿವ ಶರೀರವನ್ನ ಚಾಮರಾಜ ಪೇಟೆಯಲ್ಲಿರುವ ಹಿಂದೂರುದ್ರಭೂಮಿಗೆ ರವಾನಿಸಲಾಯಿತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. ಐವರು ಪುತ್ರರೂ ಸೇರಿ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಭಾವುಕ ಸನ್ನಿವೇಶ, ದ್ವಾರಕೀಶ್‌ ಎರಡನೇ ಪತ್ನಿ ಶೈಲಜಾಗೆ ಕಣ್ಣೀರು ತರಿಸಿತ್ತು. 81 ವರ್ಷ ಬದುಕಿದ್ದ ದ್ವಾರಕೀಶ್‌, ಆರು ದಶಕ ಕನ್ನಡ ಚಿತ್ರರಂಗವನ್ನು ಆಳಿದ್ದಾರೆ. ಇದೇ ಪ್ರಚಂಡ ಕುಳ್ಳ ಇನ್ನೂ ನೆನಪು ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:30 pm, Wed, 17 April 24

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ