AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಾರಕೀಶ್ ನಿರ್ಮಾಣದ ಸಿನಿಮಾದಲ್ಲಿ ನಟಿಸಬೇಕಿತ್ತು ವಿಷ್ಣು-ಶ್ರೀದೇವಿ; ಸಿನಿಮಾ ನಿಂತಿದ್ದೇಕೆ?

ದ್ವಾರಕೀಶ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ ‘ಆಪ್ತಮಿತ್ರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಗುಂಗು ಹೋದ ಬಳಿಕವೇ ಮತ್ತೊಂದು ಸಿನಿಮಾ ಮಾಡಬೇಕು ಎಂಬುದು ದ್ವಾರಕೀಶ್ ನಿರ್ಧಾರ ಆಗಿತ್ತು. ಇಲ್ಲವಾದರೆ ಎಲ್ಲರೂ ಎರಡೂ ಚಿತ್ರಗಳ ಮಧ್ಯೆ ಹೋಲಿಕೆ ಮಾಡುತ್ತಾರೆ ಎಂಬ ಭಯ ಇತ್ತು. ಸಿನಿಮಾಗೆ ಟೈಟಲ್ ಕೂಡ ಫಿಕ್ಸ್ ಆಯಿತು. ಆದರೆ, ಸಿನಿಮಾ ಸೆಟ್ಟೇರಲೇ ಇಲ್ಲ.

ದ್ವಾರಕೀಶ್ ನಿರ್ಮಾಣದ ಸಿನಿಮಾದಲ್ಲಿ ನಟಿಸಬೇಕಿತ್ತು ವಿಷ್ಣು-ಶ್ರೀದೇವಿ; ಸಿನಿಮಾ ನಿಂತಿದ್ದೇಕೆ?
ಶ್ರೀದೇವಿ-ವಿಷ್ಣುವರ್ಧನ್
ರಾಜೇಶ್ ದುಗ್ಗುಮನೆ
|

Updated on: Jun 28, 2025 | 11:56 AM

Share

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ (Dwarakeesh) ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ನಿರ್ಮಾಪಕರಾಗಿ ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದರು. ವಿಷ್ಣುವರ್ಧನ್ ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಇಬ್ಬರೂ ಒಟ್ಟಾಗಿ ಮಾಡಿದ ಚಿತ್ರಗಳು ಹಲವು. ಅವರು ವಿಷ್ಣುವರ್ಧನ್ ಹಾಗೂ ಬಹುಭಾಷಾ ನಟಿ ಶ್ರೀದೇವಿಯನ್ನು ಒಟ್ಟಿಗೆ ತರೋ ಪ್ರಯತ್ನ ಮಾಡಿದ್ದರು. ಆದರೆ, ಅದು ಸಾಧ್ಯವಾಗಲೇ ಇಲ್ಲ. ಆ ಬಗ್ಗೆ ದ್ವಾರಕೀಶ್ ಮಗ ಯೋಗಿ ಮಾತನಾಡಿದ್ದಾರೆ.

ದ್ವಾರಕೀಶ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ ‘ಆಪ್ತಮಿತ್ರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಗುಂಗು ಹೋದ ಬಳಿಕವೇ ಮತ್ತೊಂದು ಸಿನಿಮಾ ಮಾಡಬೇಕು ಎಂಬುದು ದ್ವಾರಕೀಶ್ ನಿರ್ಧಾರ ಆಗಿತ್ತು. ಇಲ್ಲವಾದರೆ ಎಲ್ಲರೂ ಎರಡೂ ಚಿತ್ರಗಳ ಮಧ್ಯೆ ಹೋಲಿಕೆ ಮಾಡುತ್ತಾರೆ ಎಂಬ ಭಯ ಇತ್ತು. ಸಿನಿಮಾಗೆ ಟೈಟಲ್ ಕೂಡ ಫಿಕ್ಸ್ ಆಯಿತು. ಆದರೆ, ಸಿನಿಮಾ ಸೆಟ್ಟೇರಲೇ ಇಲ್ಲ.

ಇದನ್ನೂ ಓದಿ
Image
‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು  
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ
Image
ಪಿಯುಸಿಯಲ್ಲಿ ಟಾಪರ್, ಐಎಎಸ್ ಓದಬೇಕಿದ್ದ ಯುವತಿ ನಟಿಯಾದ ಕಥೆ
Image
ವಿಚ್ಛೇದನ ಹಂತದಲ್ಲಿದ್ದ ನಟಿ ಈಗ ಪ್ರೆಗ್ನೆಂಟ್; ಆದರೆ, ಪತಿಗೇ ಗೊತ್ತೇ ಇಲ್ಲ

‘ಜನರು ಆಪ್ತಮಿತ್ರ ಸಿನಿಮಾ ಮರೀಬೇಕಿತ್ತು. ಮರೀಬೇಕು ಎಂದರೆ ಸೂಪರ್ ಹಿಟ್ ಚಿತ್ರಗಳು ಬರಬೇಕು. ಆಗ ಜೋಗಿ, ದುನಿಯಾ, ಮುಂಗಾರುಮಳೆ ಹಿಟ್ ಬಂತು. 2008ರ ಕೊನೆಯಲ್ಲಿ ನಾವು ಸಿನಿಮಾ ಮಾಡಬೇಕು ಎಂದುಕೊಂಡೆವು. ಆಲದಮರ ಸಿನಿಮಾ ಟೈಟಲ್ ನೋದಂಣಿ ಮಾಡಿಸಿದೆವು. ಈ ಚಿತ್ರದಲ್ಲಿ ವಿಷ್ಣುವರ್ಧನ್, ಶ್ರೀದೇವಿ, ಅಪ್ಪಾಜಿ, ಪ್ರಕಾಶ್ ರಾಜ್ ನಟಿಸಬೇಕಿತ್ತು. ಈ ಸಿನಿಮಾಗೆ ಅಪ್ಪಾಜಿ ಅವರೇ ನಿರ್ದೇಶನ ಮಾಡಬೇಕಿತ್ತು’ ಎಂದು ಡೈಲಿ ಮಾಧ್ಯಮ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಯೋಗಿ ಹೇಳಿದ್ದಾರೆ.

‘ಈ ಚಿತ್ರದಲ್ಲಿ ವಿಲನ್​ಗಳೇ ಇರಲಿಲ್ಲ. ಯಜಮಾನ ಸಿನಿಮಾ ರೀತಿಯೇ ಕಥೆ ಇತ್ತು. ಇದು ತಮಿಳು ನಿರ್ದೇಶಕ ವಿಕ್ರಮ್ ಕಥೆ ಬರೆಯಬೇಕಿತ್ತು. ಆದರೆ, 2009ರಲ್ಲಿ ವಿಷ್ಣುವರ್ಧನ್ ನಿಧನ ಹೊಂದಿದರು. ಹೀಗಾಗಿ, ಸಿನಿಮಾ ಸೆಟ್ಟೇರಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಷ್ಣುವರ್ಧನ್ ಜನ್ಮದಿನವನ್ನು ‘ಯಜಮಾನರ ಅಮೃತ ಮಹೋತ್ಸವ’ ಆಗಿ ಆಚರಣೆ; ಹೀಗಿದೆ ಕಾರ್ಯಕ್ರಮದ ರೂಪುರೇಷೆ

2009ರ ಕೊನೆಯಲ್ಲಿ ವಿಷ್ಣುವರ್ಧನ್ ನಿಧನ ಹೊಂದಿದರು. ಅವರ  ಸಾವು ಸಾಕಷ್ಟು ಶಾಕಿಂಗ್ ಆಗಿತ್ತು. ಸೆಪ್ಟೆಂಬರ್ 18ಕ್ಕೆ ಅವರ ಜನ್ಮದಿನ. ಅವರು ಜನಿಸಿ 75 ವರ್ಷ ತುಂಬಲಿದೆ. ಈ ಕಾರಣಕ್ಕೆ ‘ಯಜಮಾನರ ಅಮೃತ ಮಹೋತ್ಸವ’ ಎಂದು ಆಚರಿಸಲು ನಿರ್ಧರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!