AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಪ್ರದರ್ಶಕರ ಪ್ರತಿಭಟನೆ, ಜೂನ್ 1 ರಿಂದ ಚಿತ್ರಮಂದಿರಗಳು ಬಂದ್

Movie Industry: ಮಲಯಾಳಂ ಸಿನಿಮಾ ಪ್ರದರ್ಶಕರು ಈಗಾಗಲೇ ಪ್ರತಿಭಟನೆ ಘೋಷಿಸಿದ್ದು ಶೀಘ್ರವೇ ಮಲಯಾಳಂ ಚಿತ್ರರಂಗದ ಎಲ್ಲ ಚಟುವಟಿಕೆಗಳು ಬಂದ್ ಆಗಲಿದೆ. ಇದರ ಜೊತೆಗೆ ಭಾರತದ ಬಲು ಲಾಭದಾಯಕ ಸಿನಿಮಾ ರಂಗ ಎನಿಸಿಕೊಂಡಿರುವ ತೆಲುಗಿನಲ್ಲಿಯೂ ಸಮಸ್ಯೆಗಳು ಪ್ರಾರಂಭವಾಗಿದ್ದು, ತೆಲುಗು ಸಿನಿಮಾ ಪ್ರದರ್ಶಕರು ಸಹ ಪ್ರತಿಭಟನೆ ಘೋಷಿಸಿದ್ದು ಜೂನ್ 1 ರಿಂದ ಚಿತ್ರಮಂದಿರಗಳನ್ನು ಬಂದ್ ಮಾಡುವುದಾಗಿ ಹೇಳಿದ್ದಾರೆ.

ಸಿನಿಮಾ ಪ್ರದರ್ಶಕರ ಪ್ರತಿಭಟನೆ, ಜೂನ್ 1 ರಿಂದ ಚಿತ್ರಮಂದಿರಗಳು ಬಂದ್
Closed Theater
Follow us
ಮಂಜುನಾಥ ಸಿ.
|

Updated on: Apr 22, 2025 | 12:47 PM

ಸಾವಿರಾರು ಕೋಟಿ ಹಣ ಬಾಚುತ್ತಿವೆ ಕೆಲ ಸಿನಿಮಾಗಳು ಆದರೆ ಒಟ್ಟಾರೆಯಾಗಿ ನೋಡಿದರೆ ಚಿತ್ರರಂಗ (Movie Industry) ದೊಡ್ಡ ಲಾಸ್​ನಲ್ಲಿದೆ. ಮಲಯಾಳಂ (Malayalam) ಸಿನಿಮಾ ಪ್ರದರ್ಶಕರು ಈಗಾಗಲೇ ಪ್ರತಿಭಟನೆ ಘೋಷಿಸಿದ್ದು ಶೀಘ್ರವೇ ಮಲಯಾಳಂ ಚಿತ್ರರಂಗದ ಎಲ್ಲ ಚಟುವಟಿಕೆಗಳು ಬಂದ್ ಆಗಲಿದೆ. ಇದರ ಜೊತೆಗೆ ಭಾರತದ ಬಲು ಲಾಭದಾಯಕ ಸಿನಿಮಾ ರಂಗ ಎನಿಸಿಕೊಂಡಿರುವ ತೆಲುಗಿನಲ್ಲಿಯೂ ಸಮಸ್ಯೆಗಳು ಪ್ರಾರಂಭವಾಗಿದ್ದು, ತೆಲುಗು ಸಿನಿಮಾ ಪ್ರದರ್ಶಕರು ಸಹ ಪ್ರತಿಭಟನೆ ಘೋಷಿಸಿದ್ದು ಜೂನ್ 1 ರಿಂದ ಚಿತ್ರಮಂದಿರಗಳನ್ನು ಬಂದ್ ಮಾಡುವುದಾಗಿ ಹೇಳಿದ್ದಾರೆ.

ಭಾರತದಲ್ಲಿ ಅತಿ ಹೆಚ್ಚು ಲಾಭದಾಯಕ ಚಿತ್ರರಂಗವೆಂದರೆ ಅದು ತೆಲುಗು ಚಿತ್ರರಂಗ. ಆದರೆ ಅಲ್ಲಿಯೂ ಸಹ ಎಲ್ಲವೂ ಸರಿಯಿಲ್ಲ. ಇತ್ತೀಚೆಗೆ ಅಲ್ಲಿಯೂ ಸಹ ಸತತವಾಗಿ ಸಿನಿಮಾಗಳು ಸೋಲುತ್ತಿದ್ದು ಸಿನಿಮಾ ವಿತರಕರು, ಪ್ರದರ್ಶಕರು ನಷ್ಟ ಅನುಭವಿಸುತ್ತಿದ್ದಾರೆ. ಇದೇ ಕಾರಣಕ್ಕೆ ಈಸ್ಟ್ ಗೋಧಾವರಿ ಭಾಗದ ಸಿನಿಮಾ ಪ್ರದರ್ಶಕರು ಪ್ರತಿಭಟನೆಗೆ ಕರೆ ನೀಡಿದ್ದು, ಜೂನ್ 1 ರಿಂದ ಈಸ್ಟ್ ಗೋಧಾವರಿ ಭಾಗದ ಎಲ್ಲ ಚಿತ್ರಮಂದಿರಗಳನ್ನು ಬಂದ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಆಂಧ್ರ ಪ್ರದೇಶ ಹಾಗೂ ತೆಲಂಗಾಣವನ್ನು ನಾಲ್ಕು ವಿಭಾಗಗಳನ್ನಾಗಿ ವಿತರಕರು ವಿಂಗಡಿಸಿಕೊಂಡಿದ್ದಾರೆ. ನಿಜಾಮ್, ಸೀಡೆಡ್, ಈಸ್ಟ್ ಗೋಧಾವರಿ, ಆಂಧ್ರ ಹೀಗೆ ಭಾಗಗಳನ್ನಾಗಿ ಮಾಡಲಾಗಿದೆ. ಇತ್ತೀಚೆಗೆ ಈಸ್ಟ್ ಗೋಧಾವರಿಯ ಸಿನಿಮಾ ಪ್ರದರ್ಶಕರು, ಸಿನಿಮಾ ವಿತರಕರೊಟ್ಟಿಗೆ ಸಭೆ ನಡೆಸಿದ್ದು ಈಗ ಚಾಲ್ತಿಯಲ್ಲಿರುವ ಬಾಡಿಗೆ ಪದ್ಧತಿಯನ್ನು ಮುಂದುವರೆಸುವಂತೆ ಹಾಗೂ ಬಾಡಿಗೆ ಹೆಚ್ಚು ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದರೆ ಸಿನಿಮಾ ವಿತರಕರು ಇದಕ್ಕೆ ಒಪ್ಪಿಲ್ಲ ಬದಲಿಗೆ ಪ್​ರಾಫಿಟ್ ಶೇರ್ (ಲಾಭ ಹಂಚಿಕೆ) ಮಾಡೆಲ್​ನಲ್ಲಿ ಸಿನಿಮಾ ವಿತರಣೆ ಮಾಡುವುದಾಗಿ ಹೇಳಿದ್ದಾರೆ. ಇದಕ್ಕೆ ಒಪ್ಪದ ಈಸ್ಟ್ ಗೋಧಾವರಿ ಸಿನಿಮಾ ಪ್ರದರ್ಶಕರು, ಜೂನ್ 1 ರಿಂದ ಚಿತ್ರಮಂದಿರಗಳನ್ನು ಬಂದ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಜೂನ್ ತಿಂಗಳು ತೆಲುಗು ಚಿತ್ರರಂಗದ ಪಾಲಿಗೆ ಪ್ರಮುಖ ತಿಂಗಳಾಗಿದೆ. ಮೆಗಾಸ್ಟಾರ್ ಚಿರಂಜೀವಿಯ ‘ವಿಶ್ವಂಭರ’, ರವಿತೇಜ ಅವರ ಹೊಸ ಸಿನಿಮಾ, ನಟ ನಿತಿನ್ ಅವರ ಹೊಸ ಸಿನಿಮಾಗಳು ಜೂನ್ ತಿಂಗಳಿನಲ್ಲಿಯೇ ಬಿಡುಗಡೆ ಆಗಲಿದೆ. ಅದರ ಜೊತೆಗೆ ಇನ್ನೂ ಕೆಲ ಸಿನಿಮಾಗಳು ಜೂನ್ ತಿಂಗಳಲ್ಲಿ ಬಿಡುಗಡೆ ಆಗಲಿದ್ದು, ಚಿತ್ರಮಂದಿರಗಳು ಬಂದ್ ಆದರೆ ಜೂನ್ ತಿಂಗಳಲ್ಲಿ ಬಿಡುಗಡೆ ಆಗುವ ಸಿನಿಮಾಗಳಿಗೆ ಭಾರಿ ಹೊಡೆತ ಬೀಳಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ