AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಟ್ಟಿಂಗ್​ಗೆ ಪ್ರಚಾರ, ತೆಲುಗು ಸ್ಟಾರ್ ನಟ, ನಟಿಯರ ವಿರುದ್ಧ ಪ್ರಕರಣ

Tollywood celebrities: ಹಲವಾರು ಮಂದಿ ತೆಲುಗು ಚಿತ್ರರಂಗದ ಸಿನಿಮಾ ಸೆಲೆಬ್ರಿಟಿಗಳ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ಇಡಿ (ಜಾರಿ ನಿರ್ದೇಶನಾಲಯ) ಕೇಸು ದಾಖಲಿಸಿದೆ. ಈ ಸಿನಿಮಾ ಸೆಲೆಬ್ರಿಟಿಗಳು ತಮ್ಮ ಜನಪ್ರಿಯತೆ ಬಳಸಿ ಬೆಟ್ಟಿಂಗ್ ಅಪ್ಲಿಕೇಶನ್​ಗಳನ್ನು ಪ್ರಚಾರ ಮಾಡುತ್ತಿದ್ದ ಕಾರಣಕ್ಕೆ ಇಡಿ ಕೇಸು ದಾಖಲಿಸಿ, ನೊಟೀಸ್ ನೀಡಿದೆ. ಈ ಹಿಂದೆ ಸಹ ಇವರುಗಳ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದರು.

ಬೆಟ್ಟಿಂಗ್​ಗೆ ಪ್ರಚಾರ, ತೆಲುಗು ಸ್ಟಾರ್ ನಟ, ನಟಿಯರ ವಿರುದ್ಧ ಪ್ರಕರಣ
Movies
ಮಂಜುನಾಥ ಸಿ.
|

Updated on: Jul 10, 2025 | 7:16 PM

Share

ತೆಲುಗು ಚಿತ್ರರಂಗದಲ್ಲಿ (Tollywood) ಮತ್ತೊಮ್ಮೆ ಬೆಟ್ಟಿಂಗ್ ಬಿರುಗಾಳಿ ಬೀಸಿದೆ. ಕೆಲ ವರ್ಷಗಳ ಹಿಂದೆ ಸಹ ಬೆಟ್ಟಿಂಗ್ ವಿಷಯವಾಗಿ ಸರ್ಕಾರವು ಹಲವಾರು ಸಿನಿಮಾ ನಟ, ನಟಿಯರು, ಯೂಟ್ಯೂಬ್ ಇನ್​ಫ್ಲುಯೆನ್ಸರ್​ಗಳಿಗೆ ನೊಟೀಸ್ ನೀಡಿತ್ತು. ಕೆಲವರ ಬಂಧನವೂ ಆಗಿತ್ತು. ಇದೀಗ ಕೇಂದ್ರದ ತನಿಖಾ ಸಂಸ್ಥೆ ಇಡಿ (ಜಾರಿ ನಿರ್ದೇಶನಾಲಯ) ತೆಲುಗು ಚಿತ್ರರಂಗದ ಹಲವಾರು ಸಿನಿಮಾ ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲಿಸಿದೆ. ಕೆಲ ಯೂಟ್ಯೂಬರ್​ಗಳ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.

ಕೆಲ ತಿಂಗಳ ಹಿಂದೆ ಹೈದರಾಬಾದ್ ಪೊಲೀಸರು ಬೆಟ್ಟಿಂಗ್ ಪ್ರಕರಣದಲ್ಲಿ ಕೆಲ ಸಿನಿಮಾ ಸೆಲೆಬ್ರಿಟಿಗಳ ವಿರುದ್ಧ ಕೇಸು ದಾಖಲಿಸಿದ್ದರು. ಈಗ ಇಡಿ ಸಹ ಅದೇ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿದೆ. ವಿಜಯ್ ದೇವರಕೊಂಡ, ರಾಣಾ ದಗ್ಗುಬಾಡಿ, ಮಂಚು ಲಕ್ಷ್ಮಿ, ಪ್ರಕಾಶ್ ರೈ, ನಿಧಿ ಅಗರ್ವಾಲ್, ಅನನ್ಯ ನಾಗಲ್ಲ, ಶೋಭಾ ಶೆಟ್ಟಿ, ಟೇಸ್ಟಿ ತೇಜ, ಶೋಭಾ ಶೆಟ್ಟಿ, ಅಮೃತಾ ಚೌಧರಿ, ನಯನಿ ಪಾವನಿ, ಪಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣುಪ್ರಿಯ, ಬಂದರು ಸುಪ್ರಿತಾ ಇನ್ನೂ ಹಲವಾರು ನಟ-ನಟಿಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಯೂಟ್ಯೂಬರ್​ಗಳು, ಸಿನಿಮಾ ಸೆಲೆಬ್ರಿಟಿಗಳು ಸೇರಿ ಬರೋಬ್ಬರಿ 29 ಮಂದಿಯ ವಿರುದ್ಧ ಇಡಿ ಪ್ರಕರಣ ದಾಖಲಿಸಿಕೊಂಡಿದೆ. ಈ ಸಿನಿಮಾ ಸೆಲೆಬ್ರಿಟಿಗಳು ಬೆಟ್ಟಿಂಗ್ ಅಪ್ಲಿಕೇಶನ್​ಗಳ ರಾಯಭಾರಿಗಳಾಗಿದ್ದರು. ಬೆಟ್ಟಿಂಗ್ ಆಡಿರೆಂದು ಜನರನ್ನು ಪ್ರೇರೇಪಣೆ ಮಾಡುತ್ತಿದ್ದರು ಎಂದು ಆರೋಪಿಸಿ ಇಡಿ ಪ್ರಕರಣ ದಾಖಲಿಸಿಕೊಂಡಿದ್ದು, ಎಲ್ಲ ಆರೋಪಿಗಳಿಗೆ ನೊಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಕೋರಿದೆ.

ಇದನ್ನೂ ಓದಿ:ಬೆಟ್ಟಿಂಗ್ ಚಟಕ್ಕೆ ಬಿದ್ದು ತಂದೆ ಆಸ್ತಿ ಮಾರಿಸಿದ ಮಗ: ಆದರೂ ಬುದ್ಧಿ ಕಲಿಯದ ಇಂಜಿನಿಯರ್‌ ಕಳ್ಳನಾದ!

ಸಿನಿಮಾ ಸೆಲೆಬ್ರಿಟಿಗಳು ಈ ಬೆಟ್ಟಿಂಗ್ ಅಪ್ಲಿಕೇಶನ್​ಗಳನ್ನು ಪ್ರಚಾರ ಮಾಡುವುದರಿಂದ ಜನರಿಗೆ ಬೆಟ್ಟಿಂಗ್ ಅಭ್ಯಾಸ ಹೆಚ್ಚಾಗಿ ಸಾಕಷ್ಟು ಮಂದಿ ಹಣ ಕಳೆದುಕೊಂಡಿದ್ದಾರೆ. ಕೆಲವರು ಸಾಲ ಹೆಚ್ಚು ಮಾಡಿಕೊಂಡು ಜೀವ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿಯೂ ಸಹ ಈ ಮುಂಚೆ ಕೆಲವು ನಟರು ಬೆಟ್ಟಿಂಗ್ ಅಪ್ಲಿಕೇಶನ್​ಗಳನ್ನು ಪ್ರಚಾರ ಮಾಡಿದ್ದರು. ಆದರೆ ಅದರ ವಿರುದ್ಧ ಕೆಲವಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ ಬಳಿಕ ಜಾಹೀರಾತಿನಲ್ಲಿ ನಟಿಸುವುದನ್ನು ಕೈಬಿಟ್ಟರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು