AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಟ್ಟಿಂಗ್​ಗೆ ಪ್ರಚಾರ, ತೆಲುಗು ಸ್ಟಾರ್ ನಟ, ನಟಿಯರ ವಿರುದ್ಧ ಪ್ರಕರಣ

Tollywood celebrities: ಹಲವಾರು ಮಂದಿ ತೆಲುಗು ಚಿತ್ರರಂಗದ ಸಿನಿಮಾ ಸೆಲೆಬ್ರಿಟಿಗಳ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ಇಡಿ (ಜಾರಿ ನಿರ್ದೇಶನಾಲಯ) ಕೇಸು ದಾಖಲಿಸಿದೆ. ಈ ಸಿನಿಮಾ ಸೆಲೆಬ್ರಿಟಿಗಳು ತಮ್ಮ ಜನಪ್ರಿಯತೆ ಬಳಸಿ ಬೆಟ್ಟಿಂಗ್ ಅಪ್ಲಿಕೇಶನ್​ಗಳನ್ನು ಪ್ರಚಾರ ಮಾಡುತ್ತಿದ್ದ ಕಾರಣಕ್ಕೆ ಇಡಿ ಕೇಸು ದಾಖಲಿಸಿ, ನೊಟೀಸ್ ನೀಡಿದೆ. ಈ ಹಿಂದೆ ಸಹ ಇವರುಗಳ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದರು.

ಬೆಟ್ಟಿಂಗ್​ಗೆ ಪ್ರಚಾರ, ತೆಲುಗು ಸ್ಟಾರ್ ನಟ, ನಟಿಯರ ವಿರುದ್ಧ ಪ್ರಕರಣ
Movies
ಮಂಜುನಾಥ ಸಿ.
|

Updated on: Jul 10, 2025 | 7:16 PM

Share

ತೆಲುಗು ಚಿತ್ರರಂಗದಲ್ಲಿ (Tollywood) ಮತ್ತೊಮ್ಮೆ ಬೆಟ್ಟಿಂಗ್ ಬಿರುಗಾಳಿ ಬೀಸಿದೆ. ಕೆಲ ವರ್ಷಗಳ ಹಿಂದೆ ಸಹ ಬೆಟ್ಟಿಂಗ್ ವಿಷಯವಾಗಿ ಸರ್ಕಾರವು ಹಲವಾರು ಸಿನಿಮಾ ನಟ, ನಟಿಯರು, ಯೂಟ್ಯೂಬ್ ಇನ್​ಫ್ಲುಯೆನ್ಸರ್​ಗಳಿಗೆ ನೊಟೀಸ್ ನೀಡಿತ್ತು. ಕೆಲವರ ಬಂಧನವೂ ಆಗಿತ್ತು. ಇದೀಗ ಕೇಂದ್ರದ ತನಿಖಾ ಸಂಸ್ಥೆ ಇಡಿ (ಜಾರಿ ನಿರ್ದೇಶನಾಲಯ) ತೆಲುಗು ಚಿತ್ರರಂಗದ ಹಲವಾರು ಸಿನಿಮಾ ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲಿಸಿದೆ. ಕೆಲ ಯೂಟ್ಯೂಬರ್​ಗಳ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.

ಕೆಲ ತಿಂಗಳ ಹಿಂದೆ ಹೈದರಾಬಾದ್ ಪೊಲೀಸರು ಬೆಟ್ಟಿಂಗ್ ಪ್ರಕರಣದಲ್ಲಿ ಕೆಲ ಸಿನಿಮಾ ಸೆಲೆಬ್ರಿಟಿಗಳ ವಿರುದ್ಧ ಕೇಸು ದಾಖಲಿಸಿದ್ದರು. ಈಗ ಇಡಿ ಸಹ ಅದೇ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿದೆ. ವಿಜಯ್ ದೇವರಕೊಂಡ, ರಾಣಾ ದಗ್ಗುಬಾಡಿ, ಮಂಚು ಲಕ್ಷ್ಮಿ, ಪ್ರಕಾಶ್ ರೈ, ನಿಧಿ ಅಗರ್ವಾಲ್, ಅನನ್ಯ ನಾಗಲ್ಲ, ಶೋಭಾ ಶೆಟ್ಟಿ, ಟೇಸ್ಟಿ ತೇಜ, ಶೋಭಾ ಶೆಟ್ಟಿ, ಅಮೃತಾ ಚೌಧರಿ, ನಯನಿ ಪಾವನಿ, ಪಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣುಪ್ರಿಯ, ಬಂದರು ಸುಪ್ರಿತಾ ಇನ್ನೂ ಹಲವಾರು ನಟ-ನಟಿಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಯೂಟ್ಯೂಬರ್​ಗಳು, ಸಿನಿಮಾ ಸೆಲೆಬ್ರಿಟಿಗಳು ಸೇರಿ ಬರೋಬ್ಬರಿ 29 ಮಂದಿಯ ವಿರುದ್ಧ ಇಡಿ ಪ್ರಕರಣ ದಾಖಲಿಸಿಕೊಂಡಿದೆ. ಈ ಸಿನಿಮಾ ಸೆಲೆಬ್ರಿಟಿಗಳು ಬೆಟ್ಟಿಂಗ್ ಅಪ್ಲಿಕೇಶನ್​ಗಳ ರಾಯಭಾರಿಗಳಾಗಿದ್ದರು. ಬೆಟ್ಟಿಂಗ್ ಆಡಿರೆಂದು ಜನರನ್ನು ಪ್ರೇರೇಪಣೆ ಮಾಡುತ್ತಿದ್ದರು ಎಂದು ಆರೋಪಿಸಿ ಇಡಿ ಪ್ರಕರಣ ದಾಖಲಿಸಿಕೊಂಡಿದ್ದು, ಎಲ್ಲ ಆರೋಪಿಗಳಿಗೆ ನೊಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಕೋರಿದೆ.

ಇದನ್ನೂ ಓದಿ:ಬೆಟ್ಟಿಂಗ್ ಚಟಕ್ಕೆ ಬಿದ್ದು ತಂದೆ ಆಸ್ತಿ ಮಾರಿಸಿದ ಮಗ: ಆದರೂ ಬುದ್ಧಿ ಕಲಿಯದ ಇಂಜಿನಿಯರ್‌ ಕಳ್ಳನಾದ!

ಸಿನಿಮಾ ಸೆಲೆಬ್ರಿಟಿಗಳು ಈ ಬೆಟ್ಟಿಂಗ್ ಅಪ್ಲಿಕೇಶನ್​ಗಳನ್ನು ಪ್ರಚಾರ ಮಾಡುವುದರಿಂದ ಜನರಿಗೆ ಬೆಟ್ಟಿಂಗ್ ಅಭ್ಯಾಸ ಹೆಚ್ಚಾಗಿ ಸಾಕಷ್ಟು ಮಂದಿ ಹಣ ಕಳೆದುಕೊಂಡಿದ್ದಾರೆ. ಕೆಲವರು ಸಾಲ ಹೆಚ್ಚು ಮಾಡಿಕೊಂಡು ಜೀವ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿಯೂ ಸಹ ಈ ಮುಂಚೆ ಕೆಲವು ನಟರು ಬೆಟ್ಟಿಂಗ್ ಅಪ್ಲಿಕೇಶನ್​ಗಳನ್ನು ಪ್ರಚಾರ ಮಾಡಿದ್ದರು. ಆದರೆ ಅದರ ವಿರುದ್ಧ ಕೆಲವಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ ಬಳಿಕ ಜಾಹೀರಾತಿನಲ್ಲಿ ನಟಿಸುವುದನ್ನು ಕೈಬಿಟ್ಟರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ