Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡು ಹಾಡಿಲ್ಲ ಎಂದು ಎಡ್​ ಶೀರನ್​ನ ತಡೆದ ಪೊಲೀಸರು? ಸಿಕ್ಕಿತು ಸ್ಪಷ್ಟನೆ  

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಪ್ರಸಿದ್ಧ ಗಾಯಕ ಎಡ್ ಶೀರನ್ ಅವರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ಅನಿರೀಕ್ಷಿತವಾಗಿ ನಿಲ್ಲಿಸಿದ್ದಾರೆ. ಪ್ರದರ್ಶನಕ್ಕೆ ಅನುಮತಿ ಇಲ್ಲದ ಕಾರಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗಳು ನಡೆದಿವೆ .

ಕನ್ನಡ ಹಾಡು ಹಾಡಿಲ್ಲ ಎಂದು ಎಡ್​ ಶೀರನ್​ನ ತಡೆದ ಪೊಲೀಸರು? ಸಿಕ್ಕಿತು ಸ್ಪಷ್ಟನೆ  
ಎಡ್ ಶೀರನ್
Follow us
ರಾಜೇಶ್ ದುಗ್ಗುಮನೆ
|

Updated on: Feb 10, 2025 | 1:00 PM

ಬೆಂಗಳೂರಿನ ಚರ್ಚ್​​ ಸ್ಟ್ರೀಟ್​ನಲ್ಲಿ ಖ್ಯಾತ ಇಂಗ್ಲಿಷ್ ಗಾಯಕ ಎಡ್ ಶೀರನ್ ಅವರು ಹಾಡುತ್ತಿರುವಾಗ ಪೊಲೀಸರು ಇದಕ್ಕೆ ಅಡ್ಡಿ ಉಂಟು ಮಾಡಿದ್ದರು. ಪ್ಲಗ್​ನ ಎಳೆಯುವ ಮೂಲಕ ಪರ್ಫಾರ್ಮೆನ್ಸ್​ ಅರ್ಧಕ್ಕೆ ನಿಲ್ಲುವಂತೆ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ‘ಕನ್ನಡದಲ್ಲಿ ಹಾಡಿಲ್ಲ ಎಂಬ ಕಾರಣಕ್ಕೆ ಎಡ್ ಶೀರನ್ ಹಾಡನ್ನು ನಿಲ್ಲಿಸಲಾಯಿತು’ ಎಂದು ಕೂಡ ಟ್ರೋಲ್ ಆಗಿತ್ತು. ಈ ಬಗ್ಗೆ ಎಡ್ ಶೀರನ್ ಸ್ಪಷ್ಟನೆ ನೀಡಿದ್ದಾರೆ.

‘ಚರ್ಚ್​ ಸ್ಟ್ರೀಟ್​ನಲ್ಲಿ ಪರ್ಫಾರ್ಮೆನ್ಸ್ ಮಾಡಲು ನಾನು ಒಪ್ಪಿಗೆ ಪಡೆದುಕೊಂಡಿದ್ದೆ’ ಎಂದು ಎಡ್​ ಶೀರನ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಾಕಷ್ಟು ಚರ್ಚೆ ಆಗಿತ್ತು. ಒಪ್ಪಿಗೆ ಇದ್ದ ಹೊರತಾಗಿಯೂ ಎಡ್​ ಶೀರನ್ ಹಾಡನ್ನು ನಲ್ಲಿಸಿದ್ದೇಕೆ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿತ್ತು. ಇದಕ್ಕೆ ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಚರ್ಚ್​ ಸ್ಟ್ರೀಟ್​ ಸದಾ ಜನಜಂಗುಳಿಯಿಂದ ಕೂಡಿರುತ್ತದೆ. ಅದರಲ್ಲೂ ಭಾನುವಾರ ಎಂದಾಗ ಅಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಮುಂದಾಗಬಹುದಾದ ತೊಂದರೆಗಳನ್ನು ತಡೆಯಲು ಎಡ್ ಶೀರನ್ ಪರ್ಫಾರ್ಮೆನ್ಸ್​ನ ತಡೆಯಲಾಯಿತು ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

‘ಚರ್ಚ್​​​ಸ್ಟ್ರೀಟ್​ನಲ್ಲಿ ಪರ್ಫಾರ್ಮೆನ್ಸ್ ಮಾಡಲು ಅವಕಾಶ ನೀಡಿ ಎಂದು ಈವೆಂಟ್ ಆರ್ಗನೈಸರ್ಸ್ ಆಗಮಿಸಿದ್ದರು. ಆದರೆ, ಚರ್ಚ್​ಸ್ಟ್ರೀಟ್ ಸದಾ ಜನಜಂಗುಳಿಯಿಂದ ಕೂಡಿರುತ್ತದೆ ಎಂಬ ಕಾರಣಕ್ಕೆ ನಾವು ಒಪ್ಪಿಗೆ ನೀಡಿಲ್ಲ. ಈ ಕಾರಣಕ್ಕೆ ನಾವು ಜಾಗವನ್ನು ತೊರೆಯುವಂತೆ ಹೇಳಿದೆವು’ ಎಂದು ಕೇಂದ್ರ ಬೆಂಗಳೂರು ಡಿಸಿಪಿ ಶೇಖರ್ ಟಿ ಟೆಕ್ಕಣ್ಣನವರ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ

ಸ್ಟ್ರೀಟ್ ಪರ್ಫಾರ್ಮೆನ್ಸ್​ನ ತಡೆದಿದ್ದಕ್ಕೆ ಎಡ್ ಶೀರನ್ ಬೇಸರಗೊಂಡಿದ್ದಾರೆ. ಇದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿದೆ. ಈ ವಿಡಿಯೋ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟಿಹಾಕಿತ್ತು. ಎಡ್ ಶೀರನ್ ಅವರು ಇಂಗ್ಲೆಂಡ್​ನವರು. ಅವರು ‘ಶೇಪ್ ಆಫ್ ಯು’ ಹಾಡನ್ನು ಹಾಡಿದ್ದಾರೆ. ಈ ಹಾಡು ಸೂಪರ್ ಹಿಟ್ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ