AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡು ಹಾಡಿಲ್ಲ ಎಂದು ಎಡ್​ ಶೀರನ್​ನ ತಡೆದ ಪೊಲೀಸರು? ಸಿಕ್ಕಿತು ಸ್ಪಷ್ಟನೆ  

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಪ್ರಸಿದ್ಧ ಗಾಯಕ ಎಡ್ ಶೀರನ್ ಅವರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ಅನಿರೀಕ್ಷಿತವಾಗಿ ನಿಲ್ಲಿಸಿದ್ದಾರೆ. ಪ್ರದರ್ಶನಕ್ಕೆ ಅನುಮತಿ ಇಲ್ಲದ ಕಾರಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗಳು ನಡೆದಿವೆ .

ಕನ್ನಡ ಹಾಡು ಹಾಡಿಲ್ಲ ಎಂದು ಎಡ್​ ಶೀರನ್​ನ ತಡೆದ ಪೊಲೀಸರು? ಸಿಕ್ಕಿತು ಸ್ಪಷ್ಟನೆ  
ಎಡ್ ಶೀರನ್
ರಾಜೇಶ್ ದುಗ್ಗುಮನೆ
|

Updated on: Feb 10, 2025 | 1:00 PM

Share

ಬೆಂಗಳೂರಿನ ಚರ್ಚ್​​ ಸ್ಟ್ರೀಟ್​ನಲ್ಲಿ ಖ್ಯಾತ ಇಂಗ್ಲಿಷ್ ಗಾಯಕ ಎಡ್ ಶೀರನ್ ಅವರು ಹಾಡುತ್ತಿರುವಾಗ ಪೊಲೀಸರು ಇದಕ್ಕೆ ಅಡ್ಡಿ ಉಂಟು ಮಾಡಿದ್ದರು. ಪ್ಲಗ್​ನ ಎಳೆಯುವ ಮೂಲಕ ಪರ್ಫಾರ್ಮೆನ್ಸ್​ ಅರ್ಧಕ್ಕೆ ನಿಲ್ಲುವಂತೆ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ‘ಕನ್ನಡದಲ್ಲಿ ಹಾಡಿಲ್ಲ ಎಂಬ ಕಾರಣಕ್ಕೆ ಎಡ್ ಶೀರನ್ ಹಾಡನ್ನು ನಿಲ್ಲಿಸಲಾಯಿತು’ ಎಂದು ಕೂಡ ಟ್ರೋಲ್ ಆಗಿತ್ತು. ಈ ಬಗ್ಗೆ ಎಡ್ ಶೀರನ್ ಸ್ಪಷ್ಟನೆ ನೀಡಿದ್ದಾರೆ.

‘ಚರ್ಚ್​ ಸ್ಟ್ರೀಟ್​ನಲ್ಲಿ ಪರ್ಫಾರ್ಮೆನ್ಸ್ ಮಾಡಲು ನಾನು ಒಪ್ಪಿಗೆ ಪಡೆದುಕೊಂಡಿದ್ದೆ’ ಎಂದು ಎಡ್​ ಶೀರನ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಾಕಷ್ಟು ಚರ್ಚೆ ಆಗಿತ್ತು. ಒಪ್ಪಿಗೆ ಇದ್ದ ಹೊರತಾಗಿಯೂ ಎಡ್​ ಶೀರನ್ ಹಾಡನ್ನು ನಲ್ಲಿಸಿದ್ದೇಕೆ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿತ್ತು. ಇದಕ್ಕೆ ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಚರ್ಚ್​ ಸ್ಟ್ರೀಟ್​ ಸದಾ ಜನಜಂಗುಳಿಯಿಂದ ಕೂಡಿರುತ್ತದೆ. ಅದರಲ್ಲೂ ಭಾನುವಾರ ಎಂದಾಗ ಅಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಮುಂದಾಗಬಹುದಾದ ತೊಂದರೆಗಳನ್ನು ತಡೆಯಲು ಎಡ್ ಶೀರನ್ ಪರ್ಫಾರ್ಮೆನ್ಸ್​ನ ತಡೆಯಲಾಯಿತು ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

‘ಚರ್ಚ್​​​ಸ್ಟ್ರೀಟ್​ನಲ್ಲಿ ಪರ್ಫಾರ್ಮೆನ್ಸ್ ಮಾಡಲು ಅವಕಾಶ ನೀಡಿ ಎಂದು ಈವೆಂಟ್ ಆರ್ಗನೈಸರ್ಸ್ ಆಗಮಿಸಿದ್ದರು. ಆದರೆ, ಚರ್ಚ್​ಸ್ಟ್ರೀಟ್ ಸದಾ ಜನಜಂಗುಳಿಯಿಂದ ಕೂಡಿರುತ್ತದೆ ಎಂಬ ಕಾರಣಕ್ಕೆ ನಾವು ಒಪ್ಪಿಗೆ ನೀಡಿಲ್ಲ. ಈ ಕಾರಣಕ್ಕೆ ನಾವು ಜಾಗವನ್ನು ತೊರೆಯುವಂತೆ ಹೇಳಿದೆವು’ ಎಂದು ಕೇಂದ್ರ ಬೆಂಗಳೂರು ಡಿಸಿಪಿ ಶೇಖರ್ ಟಿ ಟೆಕ್ಕಣ್ಣನವರ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ

ಸ್ಟ್ರೀಟ್ ಪರ್ಫಾರ್ಮೆನ್ಸ್​ನ ತಡೆದಿದ್ದಕ್ಕೆ ಎಡ್ ಶೀರನ್ ಬೇಸರಗೊಂಡಿದ್ದಾರೆ. ಇದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿದೆ. ಈ ವಿಡಿಯೋ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟಿಹಾಕಿತ್ತು. ಎಡ್ ಶೀರನ್ ಅವರು ಇಂಗ್ಲೆಂಡ್​ನವರು. ಅವರು ‘ಶೇಪ್ ಆಫ್ ಯು’ ಹಾಡನ್ನು ಹಾಡಿದ್ದಾರೆ. ಈ ಹಾಡು ಸೂಪರ್ ಹಿಟ್ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ