AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡು ಹಾಡಿಲ್ಲ ಎಂದು ಎಡ್​ ಶೀರನ್​ನ ತಡೆದ ಪೊಲೀಸರು? ಸಿಕ್ಕಿತು ಸ್ಪಷ್ಟನೆ  

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಪ್ರಸಿದ್ಧ ಗಾಯಕ ಎಡ್ ಶೀರನ್ ಅವರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ಅನಿರೀಕ್ಷಿತವಾಗಿ ನಿಲ್ಲಿಸಿದ್ದಾರೆ. ಪ್ರದರ್ಶನಕ್ಕೆ ಅನುಮತಿ ಇಲ್ಲದ ಕಾರಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗಳು ನಡೆದಿವೆ .

ಕನ್ನಡ ಹಾಡು ಹಾಡಿಲ್ಲ ಎಂದು ಎಡ್​ ಶೀರನ್​ನ ತಡೆದ ಪೊಲೀಸರು? ಸಿಕ್ಕಿತು ಸ್ಪಷ್ಟನೆ  
ಎಡ್ ಶೀರನ್
ರಾಜೇಶ್ ದುಗ್ಗುಮನೆ
|

Updated on: Feb 10, 2025 | 1:00 PM

Share

ಬೆಂಗಳೂರಿನ ಚರ್ಚ್​​ ಸ್ಟ್ರೀಟ್​ನಲ್ಲಿ ಖ್ಯಾತ ಇಂಗ್ಲಿಷ್ ಗಾಯಕ ಎಡ್ ಶೀರನ್ ಅವರು ಹಾಡುತ್ತಿರುವಾಗ ಪೊಲೀಸರು ಇದಕ್ಕೆ ಅಡ್ಡಿ ಉಂಟು ಮಾಡಿದ್ದರು. ಪ್ಲಗ್​ನ ಎಳೆಯುವ ಮೂಲಕ ಪರ್ಫಾರ್ಮೆನ್ಸ್​ ಅರ್ಧಕ್ಕೆ ನಿಲ್ಲುವಂತೆ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ‘ಕನ್ನಡದಲ್ಲಿ ಹಾಡಿಲ್ಲ ಎಂಬ ಕಾರಣಕ್ಕೆ ಎಡ್ ಶೀರನ್ ಹಾಡನ್ನು ನಿಲ್ಲಿಸಲಾಯಿತು’ ಎಂದು ಕೂಡ ಟ್ರೋಲ್ ಆಗಿತ್ತು. ಈ ಬಗ್ಗೆ ಎಡ್ ಶೀರನ್ ಸ್ಪಷ್ಟನೆ ನೀಡಿದ್ದಾರೆ.

‘ಚರ್ಚ್​ ಸ್ಟ್ರೀಟ್​ನಲ್ಲಿ ಪರ್ಫಾರ್ಮೆನ್ಸ್ ಮಾಡಲು ನಾನು ಒಪ್ಪಿಗೆ ಪಡೆದುಕೊಂಡಿದ್ದೆ’ ಎಂದು ಎಡ್​ ಶೀರನ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಾಕಷ್ಟು ಚರ್ಚೆ ಆಗಿತ್ತು. ಒಪ್ಪಿಗೆ ಇದ್ದ ಹೊರತಾಗಿಯೂ ಎಡ್​ ಶೀರನ್ ಹಾಡನ್ನು ನಲ್ಲಿಸಿದ್ದೇಕೆ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿತ್ತು. ಇದಕ್ಕೆ ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಚರ್ಚ್​ ಸ್ಟ್ರೀಟ್​ ಸದಾ ಜನಜಂಗುಳಿಯಿಂದ ಕೂಡಿರುತ್ತದೆ. ಅದರಲ್ಲೂ ಭಾನುವಾರ ಎಂದಾಗ ಅಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಮುಂದಾಗಬಹುದಾದ ತೊಂದರೆಗಳನ್ನು ತಡೆಯಲು ಎಡ್ ಶೀರನ್ ಪರ್ಫಾರ್ಮೆನ್ಸ್​ನ ತಡೆಯಲಾಯಿತು ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

‘ಚರ್ಚ್​​​ಸ್ಟ್ರೀಟ್​ನಲ್ಲಿ ಪರ್ಫಾರ್ಮೆನ್ಸ್ ಮಾಡಲು ಅವಕಾಶ ನೀಡಿ ಎಂದು ಈವೆಂಟ್ ಆರ್ಗನೈಸರ್ಸ್ ಆಗಮಿಸಿದ್ದರು. ಆದರೆ, ಚರ್ಚ್​ಸ್ಟ್ರೀಟ್ ಸದಾ ಜನಜಂಗುಳಿಯಿಂದ ಕೂಡಿರುತ್ತದೆ ಎಂಬ ಕಾರಣಕ್ಕೆ ನಾವು ಒಪ್ಪಿಗೆ ನೀಡಿಲ್ಲ. ಈ ಕಾರಣಕ್ಕೆ ನಾವು ಜಾಗವನ್ನು ತೊರೆಯುವಂತೆ ಹೇಳಿದೆವು’ ಎಂದು ಕೇಂದ್ರ ಬೆಂಗಳೂರು ಡಿಸಿಪಿ ಶೇಖರ್ ಟಿ ಟೆಕ್ಕಣ್ಣನವರ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ

ಸ್ಟ್ರೀಟ್ ಪರ್ಫಾರ್ಮೆನ್ಸ್​ನ ತಡೆದಿದ್ದಕ್ಕೆ ಎಡ್ ಶೀರನ್ ಬೇಸರಗೊಂಡಿದ್ದಾರೆ. ಇದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿದೆ. ಈ ವಿಡಿಯೋ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟಿಹಾಕಿತ್ತು. ಎಡ್ ಶೀರನ್ ಅವರು ಇಂಗ್ಲೆಂಡ್​ನವರು. ಅವರು ‘ಶೇಪ್ ಆಫ್ ಯು’ ಹಾಡನ್ನು ಹಾಡಿದ್ದಾರೆ. ಈ ಹಾಡು ಸೂಪರ್ ಹಿಟ್ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?