AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹಾಡು ಹಾಡಿಲ್ಲ ಎಂದು ಎಡ್​ ಶೀರನ್​ನ ತಡೆದ ಪೊಲೀಸರು? ಸಿಕ್ಕಿತು ಸ್ಪಷ್ಟನೆ  

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಪ್ರಸಿದ್ಧ ಗಾಯಕ ಎಡ್ ಶೀರನ್ ಅವರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ಅನಿರೀಕ್ಷಿತವಾಗಿ ನಿಲ್ಲಿಸಿದ್ದಾರೆ. ಪ್ರದರ್ಶನಕ್ಕೆ ಅನುಮತಿ ಇಲ್ಲದ ಕಾರಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗಳು ನಡೆದಿವೆ .

ಕನ್ನಡ ಹಾಡು ಹಾಡಿಲ್ಲ ಎಂದು ಎಡ್​ ಶೀರನ್​ನ ತಡೆದ ಪೊಲೀಸರು? ಸಿಕ್ಕಿತು ಸ್ಪಷ್ಟನೆ  
ಎಡ್ ಶೀರನ್
ರಾಜೇಶ್ ದುಗ್ಗುಮನೆ
|

Updated on: Feb 10, 2025 | 1:00 PM

Share

ಬೆಂಗಳೂರಿನ ಚರ್ಚ್​​ ಸ್ಟ್ರೀಟ್​ನಲ್ಲಿ ಖ್ಯಾತ ಇಂಗ್ಲಿಷ್ ಗಾಯಕ ಎಡ್ ಶೀರನ್ ಅವರು ಹಾಡುತ್ತಿರುವಾಗ ಪೊಲೀಸರು ಇದಕ್ಕೆ ಅಡ್ಡಿ ಉಂಟು ಮಾಡಿದ್ದರು. ಪ್ಲಗ್​ನ ಎಳೆಯುವ ಮೂಲಕ ಪರ್ಫಾರ್ಮೆನ್ಸ್​ ಅರ್ಧಕ್ಕೆ ನಿಲ್ಲುವಂತೆ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ‘ಕನ್ನಡದಲ್ಲಿ ಹಾಡಿಲ್ಲ ಎಂಬ ಕಾರಣಕ್ಕೆ ಎಡ್ ಶೀರನ್ ಹಾಡನ್ನು ನಿಲ್ಲಿಸಲಾಯಿತು’ ಎಂದು ಕೂಡ ಟ್ರೋಲ್ ಆಗಿತ್ತು. ಈ ಬಗ್ಗೆ ಎಡ್ ಶೀರನ್ ಸ್ಪಷ್ಟನೆ ನೀಡಿದ್ದಾರೆ.

‘ಚರ್ಚ್​ ಸ್ಟ್ರೀಟ್​ನಲ್ಲಿ ಪರ್ಫಾರ್ಮೆನ್ಸ್ ಮಾಡಲು ನಾನು ಒಪ್ಪಿಗೆ ಪಡೆದುಕೊಂಡಿದ್ದೆ’ ಎಂದು ಎಡ್​ ಶೀರನ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಾಕಷ್ಟು ಚರ್ಚೆ ಆಗಿತ್ತು. ಒಪ್ಪಿಗೆ ಇದ್ದ ಹೊರತಾಗಿಯೂ ಎಡ್​ ಶೀರನ್ ಹಾಡನ್ನು ನಲ್ಲಿಸಿದ್ದೇಕೆ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿತ್ತು. ಇದಕ್ಕೆ ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಚರ್ಚ್​ ಸ್ಟ್ರೀಟ್​ ಸದಾ ಜನಜಂಗುಳಿಯಿಂದ ಕೂಡಿರುತ್ತದೆ. ಅದರಲ್ಲೂ ಭಾನುವಾರ ಎಂದಾಗ ಅಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಮುಂದಾಗಬಹುದಾದ ತೊಂದರೆಗಳನ್ನು ತಡೆಯಲು ಎಡ್ ಶೀರನ್ ಪರ್ಫಾರ್ಮೆನ್ಸ್​ನ ತಡೆಯಲಾಯಿತು ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

‘ಚರ್ಚ್​​​ಸ್ಟ್ರೀಟ್​ನಲ್ಲಿ ಪರ್ಫಾರ್ಮೆನ್ಸ್ ಮಾಡಲು ಅವಕಾಶ ನೀಡಿ ಎಂದು ಈವೆಂಟ್ ಆರ್ಗನೈಸರ್ಸ್ ಆಗಮಿಸಿದ್ದರು. ಆದರೆ, ಚರ್ಚ್​ಸ್ಟ್ರೀಟ್ ಸದಾ ಜನಜಂಗುಳಿಯಿಂದ ಕೂಡಿರುತ್ತದೆ ಎಂಬ ಕಾರಣಕ್ಕೆ ನಾವು ಒಪ್ಪಿಗೆ ನೀಡಿಲ್ಲ. ಈ ಕಾರಣಕ್ಕೆ ನಾವು ಜಾಗವನ್ನು ತೊರೆಯುವಂತೆ ಹೇಳಿದೆವು’ ಎಂದು ಕೇಂದ್ರ ಬೆಂಗಳೂರು ಡಿಸಿಪಿ ಶೇಖರ್ ಟಿ ಟೆಕ್ಕಣ್ಣನವರ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ

ಸ್ಟ್ರೀಟ್ ಪರ್ಫಾರ್ಮೆನ್ಸ್​ನ ತಡೆದಿದ್ದಕ್ಕೆ ಎಡ್ ಶೀರನ್ ಬೇಸರಗೊಂಡಿದ್ದಾರೆ. ಇದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿದೆ. ಈ ವಿಡಿಯೋ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟಿಹಾಕಿತ್ತು. ಎಡ್ ಶೀರನ್ ಅವರು ಇಂಗ್ಲೆಂಡ್​ನವರು. ಅವರು ‘ಶೇಪ್ ಆಫ್ ಯು’ ಹಾಡನ್ನು ಹಾಡಿದ್ದಾರೆ. ಈ ಹಾಡು ಸೂಪರ್ ಹಿಟ್ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?